25
August, 2026

A News 365Times Venture

25
Tuesday
August, 2026

A News 365Times Venture

ಗಿಲ್ಕಿ ವೆಂಕಟೇಶ್ ಕೊಲೆ ಕೇಸ್ ನಲ್ಲಿ 6 ಜನರ ಬಂಧನ- ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್

Date:

ಮೈಸೂರು,ಅಕ್ಟೋಬರ್,10,2025 (www.justkannada.in):  ಮೈಸೂರಿನಲ್ಲಿ ಹಾಡ ಹಗಲೇ  ವೆಂಕಟೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರು ಜನರನ್ನ ಬಂಧನ ಮಾಡಿದ್ದೇವೆ ಎಂದು ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ವೆಂಕಟೇಶ್ ಹತ್ಯೆಯಲ್ಲಿ 6 ಜನ ಭಾಗಿಯಾಗಿದ್ದಾರೆ. ಈಗಾಗಲೇ ಅವರನ್ನು ಅರೆಸ್ಟ್ ಮಾಡಿದ್ದೇವೆ. ಧ್ರುವ ಕುಮಾರ್ ಒಬ್ಬ ಮಂಡ್ಯ, ಉಳಿದ 5 ಜನ ಮೈಸೂರಿನವರು. ಹಾಲಪ್ಪ ಹಾಗೂ ಮೃತ ವೆಂಕಟೇಶ್ ನಡುವೆ ಶೀತಲ ಸಮರ ಇತ್ತು. ಒಂದೇ ಗ್ರೂಪ್ ಆದರೂ ಸಹ ನಾನಾ ನೀನಾ ಅನ್ನೋ ವಿಚಾರಕ್ಕೆ ಕೊಲೆ ಆಗಿದೆ. ಈ ಹಿಂದೆ ನಡೆದ ಕಾರ್ತಿಕ್ ಕೊಲೆಗೂ ಇದಕ್ಕೂ ಲಿಂಕ್ ಇದೆಯಾ ಅಂತ ನೋಡುತ್ತಿದ್ದೇವೆ.  ಸಣ್ಣ ಪುಟ್ಟ ಫೈನಾನ್ಸ್ ಮಾಡುತ್ತಿದ್ದ ಅಂತ ಗೊತ್ತಾಗಿದೆ ಎಂದು ಮಾಹಿತಿ ನೀಡಿದರು.

 ಬಾಲಕಿ ಅತ್ಯಾಚಾರ ಕೊಲೆ ಕೇಸ್: ಆರೋಪಿ ಅರೆಸ್ಟ್

ನಿನ್ನೆ ನಜರಾಬಾದ್ ಲಿಮಿಟ್ ಅಲ್ಲಿ ಅಪ್ರಾಪ್ತ ಬಾಲಕಿ  ಮೇಲೆ ಅತ್ಯಾಚಾರ ಕೊಲೆ ಆಗಿದೆ. ಇದರ ಸಂಬಂಧ ನಾವು ಆರೋಪಿ ಅರೆಸ್ಟ್ ಮಾಡಿದ್ದೇವೆ. ನಿನ್ನೆ ಆರೋಪಿ ಕರೆದುಕೊಂಡು ಬರುತ್ತಿದ್ದ ವೇಳೆ ಆರೋಪಿ ಸಿದ್ದಲಿಂಗಪುರ ಅಂತ ಹೇಳಿದ್ದಾನೆ. ಅಲ್ಲಿ ಕರೆದುಕೊಂಡು ಹೋದ ಸಂದರ್ಭದಲ್ಲಿ ನಮ್ಮ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಆ ಸಂದರ್ಭದಲ್ಲಿ ನಮ್ಮವರು ಗುಂಡು ಹಾರಿಸಿದ್ದಾರೆ. ಈತನ ಮೇಲೆ ಹಳೆಯ ಕೇಸ್ ಕೂಡ ಇದೆ. ಜಾಮೀನಿನ ಮೇಲೆ ಆತ ಹೊರಗಡೆ ಬಂದಿದ್ದ. ನಿನ್ನೆ ಮಗು ಮಲಗಿದ್ದ ವೇಳೆ ಎತ್ತುಕೊಂಡು ಹೋಗಿ ಕೃತ್ಯವೆಸಗಿದ್ದಾನೆ. ಆತ ಮಾದಕ ವ್ಯಸನಿ ಅಂತ ಗೊತ್ತಾಗಿದ್ದು, ಕಾನೂನು ಪ್ರಕಾರ ಕ್ರಮ ತೆಗೆದುಕೊಂಡಿದ್ದೇವೆ ಎಂದು  ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಹೇಳಿದ್ದಾರೆ.

Key words:  Mysore, Gilki Venkatesh, Girl,  murder case, Police Commissioner, Seema Latkar

 

The post ಗಿಲ್ಕಿ ವೆಂಕಟೇಶ್ ಕೊಲೆ ಕೇಸ್ ನಲ್ಲಿ 6 ಜನರ ಬಂಧನ- ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

JustKannada ವರದಿಗೆ ಪಾಲಿಕೆ ಆಯುಕ್ತೆಯ ತಕ್ಷಣದ ಸ್ಪಂದನೆ: 24 ಗಂಟೆಯೊಳಗೆ ಅಪಾಯಕಾರಿ ಕೊಂಬೆ ತೆರವು

ಮೈಸೂರು. ಆಗಸ್ಟ್,25,2026 (www.justkannada.in): ನಗರದ ಚಾಮರಾಜಪುರಂ ಬಜ್ಜಣ್ಣ ಲೇನ್‌ ನ...

രാജ്യത്തെ മിസൈല്‍ സാങ്കേതിക വിദ്യകള്‍ സ്വകാര്യ മേഖലയ്ക്ക് കൈമാറാന്‍ തീരുമാനവുമായി പ്രതിരോധ മന്ത്രാലയം

ന്യൂദല്‍ഹി: പൊതുമേഖലാ പ്രതിരോധ ഗവേഷണ സ്ഥാപനമായ ഡി.ആര്‍.ഡി.ഒ വികസിപ്പിച്ചെടുത്ത പരമ്പരാഗത മിസൈല്‍...

"செங்கோட்டையன் பேசுறது சரியா…" – ஆளுநரிடம் கொதித்த டி.டி.வி.தினகரன்!

சட்டப்பேரவைக் கூட்டத்தொடர் ரணகளக் காட்சிகளுடன் நடந்து வரும் நிலையில், திடீர் அரசியல்...

Off The Record: కొండా సురేఖ వివాదంపై మంత్రి సీతక్క మౌనం..!!

Off The Record: కొండా కుటుంబం కేంద్రంగా కాంగ్రెస్‌ పార్టీలో జరుగుతున్న...