30
June, 2026

A News 365Times Venture

30
Tuesday
June, 2026

A News 365Times Venture

ಕಾವೇರಿ ತೀರ್ಥೋದ್ಭವ: ಸದಾ ಪ್ರೀತಿ ತೋರುವ ಕೊಡಗು ಜನರೊಂದಿಗೆ ಹೆಜ್ಜೆ ಹಾಕಿದ್ದು ಹೆಮ್ಮೆ ಎನಿಸಿತು-ಸಂಸದ ಯದುವೀರ್

Date:

ಮೈಸೂರು ಅಕ್ಟೋಬರ್,18,2025 (www.justkannada.in):  ನಮ್ಮ ನಾಡಿನ ಜೀವನದಿ, ಸಕಲ ಜೀವರಾಶಿಗಳಿಗೂ “ತಾಯಿ” ಸ್ವರೂಪಳಾದ ಕಾವೇರಿ ಮಾತೆಯ ತೀರ್ಥೋದ್ಭವದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಧನ್ಯತಾ ಭಾವ ಮೂಡಿಸಿತು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಕಾವೇರಿ ತೀರ್ಥೋದ್ಭವವನ್ನು ಕಣ್ತುಂಬಿಕೊಂಡ ನಂತರ  ಮಾತನಾಡಿರುವ ಸಂಸದ ಯದುವೀರ್, ಇದೊಂದು ಅಪೂರ್ವ ಕ್ಷಣ ಮತ್ತು ಕಾವೇರಿ ಮಾತೆಯು ತೀರ್ಥ ಸ್ವರೂಪದಲ್ಲಿ ಉಕ್ಕುತ್ತಿದ್ದಂತೆ ಧಾರ್ಮಿಕ ಭಾವನೆಗಳೂ ಉಕ್ಕುತ್ತವೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ನಮ್ಮ ಕೊಡಗು ಜನರು ಹಾಗೂ ನಮ್ಮ ನಾಯಕರೊಂದಿಗೆ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆಯಲ್ಲಿ ಬಂದಿದ್ದು ನಿಜಕ್ಕೂ ಹೆಮ್ಮೆ ಎನಿಸಿತು. ಇದೊಂದು ಅಪೂರ್ವ ಅವಕಾಶವಾಗಿತ್ತು ಎಂದು ಸಂಸದರು ವಿವರಿಸಿದ್ದಾರೆ.

ಕಾವೇರಿ ಮಾತೆ ಸಮೃದ್ಧತೆಯಿಂದ ಕೂಡಿದ್ದರೆ ನಾಡು ಸಮೃದ್ಧವಾಗಿರುತ್ತದೆ. ನಾಡಿನಲ್ಲಿ ಶಾಂತಿ, ನೆಮ್ಮದಿ, ಸುಭಿಕ್ಷೆ ತುಂಬಿರಲಿ ಇದೇ ಸಂದರ್ಭದಲ್ಲಿ ಮನಸಾರೆ ಪ್ರಾರ್ಥಿಸಿದ್ದೇನೆ ಎಂದು ಯದುವೀರ್‌ ಒಡೆಯರ್‌ ಹೇಳಿದ್ದಾರೆ.

ಕೊಡಗು ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ಮಡಿಕೇರಿ ನಗರ ಸಭಾ ಉಪಾಧ್ಯಕ್ಷರು, ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯ ದರ್ಶಿ ಮಹೇಶ್ ಜೈನಿ, ಜಿಲ್ಲಾ ವಾಕ್ತರ ತಲೂರ್ ಕಿಶೋರ್ ಕುಮಾರ್, ಸತೀಶ್ ಜೋಯಪ್ಪ, ಯಮುನಾ ಚಂಗಪ್ಪ, ಪಂಚಾಯತ್ ಅಧ್ಯಕ್ಷ ಕಾಳನ ರವಿ, ರಾಕೇಶ್ ಶರತ್ ಸೇರಿದಂತೆ ಪಕ್ಷದ ಕಾರ್ಯಕರ್ತರು, ಸಾವಿರಾರು ಭಕ್ತರು ಸಂಸದರ ಜೊತೆಯಲ್ಲಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.

Key words: Kaveri Tirthodbhava, Kodagu, MP, Yaduveer

The post ಕಾವೇರಿ ತೀರ್ಥೋದ್ಭವ: ಸದಾ ಪ್ರೀತಿ ತೋರುವ ಕೊಡಗು ಜನರೊಂದಿಗೆ ಹೆಜ್ಜೆ ಹಾಕಿದ್ದು ಹೆಮ್ಮೆ ಎನಿಸಿತು-ಸಂಸದ ಯದುವೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ജനാധിപത്യത്തില്‍ വിശ്വസിക്കാത്ത ഭരണാധികാരി, ജനങ്ങളെ വോട്ടവകാശത്തില്‍ നിന്ന് അകറ്റുന്നു’: ട്രംപിനെതിരെ സാന്‍ഡേഴ്‌സ്

വാഷിങ്ടണ്‍: യു.എസ് പ്രസിഡന്റ് ഡൊണാള്‍ഡ് ട്രംപിനെതിരെ രൂക്ഷ വിമര്‍ശനവുമായി ഡെമോക്രാറ്റിക് പാര്‍ട്ടി...

தவெக : தமிழகத்தில் ட்ரெண்ட் ஆகும் `ஆயா ராம் காயா ராம்' அரசியல்! – மக்கள் முடிவுக்கு என்ன மரியாதை?

மனம் போன போக்கில் கட்சி மாறும் அரசியல் காட்சிகளை வட இந்தியாவில்...

LA 2028 Olympics: ఒలింపిక్స్‌లో భారత్-పాక్ హైవోల్టేజ్ మ్యాచ్ ఉంటుందా? క్లారిటీ ఇదిగో..

LA 2028 Olympics: ఒలింపిక్స్ వేదికపై భారత్-పాకిస్తాన్ హై-వోల్టేజ్ పోరును చూడాలనుకునే...

ಪೊಲೀಸ್ ಅಧಿಕಾರಿಗಳ ಮಾಧ್ಯಮ ಸಂಪರ್ಕಕ್ಕೆ ನಿರ್ಬಂಧ: ಡಿಜಿಪಿ ಎಂ.ಎ. ಸಲೀಂ ಸುತ್ತೋಲೆ

ಬೆಂಗಳೂರು, ಜೂನ್,29,2026 (www.justkannada.in): ಅಧಿಕೃತ ಮಾಹಿತಿಯ ಅನಧಿಕೃತ ಬಹಿರಂಗಪಡಿಸುವಿಕೆಯನ್ನು ತಡೆಯಲು...