5
December, 2025

A News 365Times Venture

5
Friday
December, 2025

A News 365Times Venture

ಸರ್ಕಾರ ಸೀಜ್ ಮಾಡಿದ ಮನೆಗೆ ನುಗ್ಗಿದ ಕಳ್ಳರು: ವಸ್ತುಗಳನ್ನು ದೋಚಲು ಯತ್ನ?

Date:

ಮೈಸೂರು,ಅಕ್ಟೋಬರ್,21,2025 (www.justkannada.in): ಸರ್ಕಾರ ಸೀಜ್ ಮಾಡಿದ ಮನೆಗೆ ಕಳ್ಳರು ನುಗ್ಗಿರುವ ಘಟನೆ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ದಾರ್ ವಲ್ಲಭಬಾಯಿ ಪಟೇಲ್ ನಗರದಲ್ಲಿ ನಡೆದಿದೆ.

ಗ್ರೀನ್ ಬಡ್ಸ್ ಆಗ್ರೋ ಫಾರಂ ಪ್ರೈ.ಲಿ.ಗೆ ಸೇರಿದ ಮನೆಯಲ್ಲಿ ಈ ಘಟನೆ ನಡೆದಿದೆ. ಈ ಮನೆಯನ್ನು 14 ವರ್ಷಗಳ ಹಿಂದೆ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು.  ಕಳ್ಳರು ನುಗ್ಗಿದ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ವಸ್ತುಗಳ ಚೆಲ್ಲಾಪಿಲ್ಲಿಯಾಗಿದ್ದವು. ಮನೆಯಲ್ಲಿದ್ದ ವಸ್ತುಗಳನ್ನ ದೋಚಲು ಕಳ್ಳರು ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

ಇನ್ನು ಮನೆಯಲ್ಲಿರುವ ಚರಾಸ್ಥಿಗಳನ್ನ ಸ್ಥಳಾಂತರಿಸುವ ಉದ್ದೇಶದಿಂದ ಸೀಜ್ ಆದ ಮನೆಗೆ ತಹಸೀಲ್ದಾರ್ ಶಿರೀನ್ ತಾಜ್, ಕಾನೂನು ಅಧಿಕಾರಿ ರಕ್ಷಿತ್ ಹಾಗೂ ರಾಜಸ್ವ ನಿರೀಕ್ಷಕರಾದ ಹೇಮಂತ್ ಕುಮಾರ್ ಭೇಟಿ ನೀಡಿದ್ದು,ಈ ವೇಳೆ ಘಟನೆ ಬೆಳಕಿಗೆ ಬಂದಿದೆ.

ಸೀಜ್ ಮಾಡಿದ ಬಾಗಿಲು ತೆಗೆಯಲು ಸಾಧ್ಯವಾಗಿಲ್ಲ. ಹಿಂಬದಿಯಲ್ಲಿರುವ ಸೀಜ್ ಮಾಡದಿರುವ ಬಾಗಿಲ ಬಳಿ ಹೋದಾಗ ಘಟನೆ ಬೆಳಕಿಗೆ ಬಂದಿದೆ.  ಅಪರಿಚಿತ ವ್ಯಕ್ತಿಗಳು ಬಾಗಿಲು ಹೊಡೆದು ಪ್ರವೇಶಿಸಿರೋದು ಖಚಿತವಾಗಿದ್ದು, ಆಲನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನ ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ಸರ್ಕಾರಿ ಅಧಿಕಾರಿಗಳದ್ದಾಗಿದ್ದು. ಸೀಜ್ ಆಗಿದ್ದ ಮನೆಗೆ ಯಾವುದೇ ಭದ್ರತೆ ಒದಗಿಸಿರಲಿಲ್ಲ. ಇದರಿಂದ ಕಿಡಿಗೇಡಿಗಳು ಬಾಗಿಲು ಮುರಿದು ಒಳ ನುಗ್ಗಿದ್ದಾರೆ‌. ಹೀಗಾಗಿ ಮನೆಗೆ ಸಿಬ್ಬಂದಿ ನಿಯೋಜಿಸುವಂತೆ ಪೊಲೀಸರಿಗೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Key words: Mysore, Thieves, government, seized house

The post ಸರ್ಕಾರ ಸೀಜ್ ಮಾಡಿದ ಮನೆಗೆ ನುಗ್ಗಿದ ಕಳ್ಳರು: ವಸ್ತುಗಳನ್ನು ದೋಚಲು ಯತ್ನ? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....