25
March, 2026

A News 365Times Venture

25
Wednesday
March, 2026

A News 365Times Venture

“ಕಲಾಲೋಕ” ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಸಚಿವ ಎಂ ಬಿ ಪಾಟೀಲ

Date:

 

ಬೆಂಗಳೂರು, ಅ.೨೮,೨೦೨೫ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ನಾಟಕದ ಹೆಮ್ಮೆಯ ಉತ್ಪನ್ನಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಆರಂಭಿಸುತ್ತಿರುವ ಸುಸಜ್ಜಿತ ಕಲಾಲೋಕ ಮಳಿಗೆಯನ್ನು ನವೆಂಬರ್ ಎರಡನೇ ವಾರದಲ್ಲಿ ಉದ್ಘಾಟಿಸಲಾಗುವುದು. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರನ್ನೂ ಆಹ್ವಾನಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಮಂಗಳವಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ ಅವರೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಸಿದ್ಧತೆ ಬಗ್ಗೆ ಚರ್ಚಿಸಿದರು.

ಕಲಾಲೋಕ ಮಳಿಗೆಯು ಮುಖ್ಯವಾಗಿ ದೇಶ/ವಿದೇಶಿ ಗ್ರಾಹಕರನ್ನು ಆದ್ಯತೆಯಾಗಿ ಇಟ್ಟುಕೊಂಡಿದೆ. ಕರ್ನಾಟಕದಲ್ಲಿ ಜಿ.ಐ. ಮಾನ್ಯತೆ ಹೊಂದಿರುವ 40ಕ್ಕೂ ಹೆಚ್ಚು ಉತ್ಪನ್ನಗಳಿವೆ. ಮೈಸೂರು ಸಿಲ್ಕ್, ಚನ್ನಪಟ್ಟಣದ ಬೊಂಬೆ, ಬಂಜಾರ ಉತ್ಪನ್ನಗಳು, ಇಳಕಲ್ ಸೀರೆ, ಕಾಫಿ, ಲಿಡ್ಕರ್ ಉತ್ಪನ್ನಗಳು, ಮೈಸೂರು ಸ್ಯಾಂಡಲ್ ಸೋಪ್ ತರಹದ ಉತ್ಪನ್ನಗಳಿಗೆ ಭಾರೀ ಬೇಡಿಕೆ ಇದೆ. ಇವೆಲ್ಲವೂ ಕಲಾಲೋಕ ಮಳಿಗೆಯಲ್ಲಿ ಸಿಗುವಂತೆ ಮಾಡಲಾಗುವುದು. ಈ ಮೂಲಕ ಕರ್ನಾಟಕದ ಅಸ್ಮಿತೆ ಮತ್ತು ಪರಂಪರೆಗೆ ವ್ಯಾಪಕ ಮನ್ನಣೆ ಸಿಗುವಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಕರ್ನಾಟಕದ ವಿಶಿಷ್ಟ ಉತ್ಪನ್ನಗಳ ಬ್ರ್ಯಾಂಡಿಂಗ್ ಮಾಡುವುದು ಸರಕಾರದ ಆಶಯವಾಗಿದೆ. ಇದಕ್ಕೆ ತಕ್ಕಂತೆ ಗ್ರಾಹಕರಿಗೆ ಗಿಫ್ಟ್ ಬಾಕ್ಸ್ ಇತ್ಯಾದಿಗಳು ಸಿಗುವಂತೆ ಮಾಡಲಾಗುವುದು. ಜೊತೆಗೆ ಕಲಾಲೋಕ ಮಳಿಗೆಗೆ ತಾರಾವರ್ಚಸ್ಸಿನ ವ್ಯಕ್ತಿಗಳನ್ನು ಆಮಂತ್ರಿಸಲಾಗುವುದು. ಈ ಮೂಲಕ ವ್ಯವಸ್ಥಿತ ಪ್ರಚಾರ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದು ಸಚಿವರು ತಿಳಿಸಿದರು.

key words: “Kala Loka” store, to be launched, in November, Minister M B Patil

SUMMARY:

“Kala Loka” store to be launched in November: Minister M B Patil

The well-equipped Kalaloka store, which is being set up at Kempegowda International Airport with the aim of selling Karnataka’s proud products, will be inaugurated in the second week of November. This will be inaugurated by Chief Minister Siddaramaiah. Both the Chief Minister and the Deputy Chief Minister will be invited for this purpose, said Minister for Large and Medium Industries M B Patil.

The post “ಕಲಾಲೋಕ” ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಸಚಿವ ಎಂ ಬಿ ಪಾಟೀಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Nepal: శ్రీరామ నవమి రోజున నేపాల్ కొత్త ప్రధాని ప్రమాణస్వీకారం..

Nepal: నేపాల్ కొత్త ప్రధానమంత్రిగా ఇటీవల ఎన్నికల్లో ఘన విజయం సాధించిన...

ಗ್ಯಾಸ್ ಚಾರ್ಜ್ ಎಂದು ಹೆಚ್ಚುವರಿ ಹಣ ವಸೂಲಿ ಮಾಡುವಂತಿಲ್ಲ: ಹೋಟೆಲ್ ಗಳಿಗೆ ಕೇಂದ್ರ ಖಡಕ್ ಸೂಚನೆ

ನವದೆಹಲಿ,ಮಾರ್ಚ್,25,2026 (www.justkannada.in):  ಗ್ಯಾಸ್ ಸಿಲಿಂಡರ್ ಅಭಾವದ ನೆಪ ಹೇಳಿ ಬಿಲ್...

ഫലസ്തീനെ ദ്രോഹിക്കാനുള്ള ലൈസന്‍സ് ലോകം ഇസ്രഈലിന് നല്‍കി: ഫ്രാന്‍സെസ്‌ക ആല്‍ബനീസ്

ന്യൂയോര്‍ക്: ഇസ്രഈലിനെതിരെ രൂക്ഷ വിമര്‍ശനവുമായി ഐക്യരാഷ്ട്രസഭയുടെ പ്രത്യേക പ്രതിനിധി ഫ്രാന്‍സെസ്‌ക ആല്‍ബനീസ്....

'மூப்பனாரின் ஆன்மா மன்னிக்காது.!' – பாஜகவிடம் கட்சியை அடகு வைத்த ஜி.கே.வாசன்?

என்.டி.ஏ கூட்டணியில் 5 தொகுதிகளை வாங்கிக் கொண்டு பாஜக-வின் தாமரை சின்னத்தில்...