20
March, 2026

A News 365Times Venture

20
Friday
March, 2026

A News 365Times Venture

ಸಂಕಷ್ಟದಲ್ಲಿ ಕಬ್ಬು ಬೆಳೆಗಾರರು: ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ- ಬಿವೈ ವಿಜಯೇಂದ್ರ

Date:

ಬೆಳಗಾವಿ,ನವೆಂಬರ್,4,2025 (www.justkannada.in): ಕಬ್ಬು ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯ ಸರ್ಕಾರ ರೈತರ ಸಂಕಷ್ಟ ಆಲಿಸುತ್ತಿಲ್ಲ. ಹೀಗಾಗಿ ನಾವು ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,  ಕಬ್ಬಿಗೆ ದರ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ.  ರಾಜ್ಯ ಸರ್ಕಾರವೇ ಮುಂದಾಳತ್ವ ವಹಿಸಿ ಕಬ್ಬಿನ ಬೆಳೆಗಾರರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಬೇಕಿತ್ತು. ಆದರೆ, ರಾಜ್ಯ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಅವರ ಹೋರಾಟಕ್ಕೆ ಬೆಂಬಲ ಸೂಚಿಸಲು  ಬಂದಿದ್ದೇವೆ ಎಂದರು.

‘ಭಾರೀ  ಮಳೆಯಿಂದಾಗಿ ಬೆಳೆಹಾನಿಯಾಗಿ ರೈತರು ತೊಂದರೆಗೀಡಾದಾಗ ಸಹ ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಕಂದಾಯ ಸಚಿವರು ಮತ್ತು ಕೃಷಿ ಸಚಿವರು ಉತ್ತರ ಕರ್ನಾಟಕದಲ್ಲಿ ಪ್ರವಾಸ ಮಾಡಲಿಲ್ಲ. ಸರ್ಕಾರಕ್ಕೆ ರೈತರ ಪರ ಕಾಳಜಿ ಇಲ್ಲ. ಹಾಗಾಗಿ ಇಂದು ಕಬ್ಬಿನ ದರಕ್ಕಾಗಿ ರೈತರು ಮತ್ತೆ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬಂದಿದೆ ಎಂದು ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

Key words: Sugarcane, growers, government, BY Vijayendra

The post ಸಂಕಷ್ಟದಲ್ಲಿ ಕಬ್ಬು ಬೆಳೆಗಾರರು: ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

AP IAS Transfers: ఏపీలో కీలక ఐఏఎస్ అధికారుల బదిలీలు..

AP IAS Transfers: ఆంధ్రప్రదేశ్ ప్రభుత్వం రాష్ట్రంలోని వివిధ విభాగాల్లో కీలక...

ರೂಪಾಯಿ ಮೌಲ್ಯ ಕುಸಿದ್ರೆ ಪ್ರಧಾನಿ ವರ್ಚಸ್ಸು ಕುಸಿದಂತೆ- ರಣದೀಪ್ ಸಿಂಗ್ ಸುರ್ಜೇವಾಲ ಕಿಡಿ

ಬೆಂಗಳೂರು,ಮಾರ್ಚ್,20,2026 (www.justkannada.in): ಡಾಲರ್ ಎದುರು ರೂಪಾಯಿ ಮೌಲ್ಯ  ಐತಿಹಾಸಿಕ ಕುಸಿತ...

വീട്ടുജോലിക്കാരിയല്ല പങ്കാളിയാണ്; വീട്ടുജോലികള്‍ ചെയ്യാത്തത് ക്രൂരതയല്ല; വിവാഹമോചനക്കേസില്‍ സുപ്രീംകോടതി

ന്യൂദല്‍ഹി: സ്ത്രീകള്‍ പാചകം ഉള്‍പ്പെടെയുള്ള വീട്ടുജോലികള്‍ ചെയ്യാത്തത് ക്രൂരതയായി കണക്കാക്കാനാകില്ലെന്ന നിര്‍ണായക...

ராமதாஸ் – சசிகலா `தேர்தல் கூட்டணி' – தைலாபுரத்தில் கையெழுத்தான ஒப்பந்தம்!

வருகிற சட்டமன்றத் தேர்தலை முன்னிட்டு தைலாபுரத்தில் பாமக நிறுவனர் ராமதாஸை, இன்று...