18
March, 2026

A News 365Times Venture

18
Wednesday
March, 2026

A News 365Times Venture

ಮೈಸೂರಿನಲ್ಲಿ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ-ಸಂಸದ ಯದುವೀರ್

Date:

ಮೈಸೂರು,ನವೆಂಬರ್,5,2025 (www.justkannada.in): ಮೈಸೂರಿನಲ್ಲಿ ಜನರ ವಿರೋಧದ ನಡುವೆ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ರಾಝ್ಯ ಸರ್ಕಾರಕ್ಕೆ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಚ್ಚರಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್.  ಮೈಸೂರು ನಗರದೊಳಗೆ ಎರಡು ಫ್ಲೈ ಓವರ್ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ, ಸಾಯಿಲ್ ಟೆಸ್ಟ್ ಮಾಡ್ತಿದ್ದಾರೆ ಇದಕ್ಕೆ ನಮ್ಮ ವಿರೋಧವಿದೆ. ಜೆ ಎಲ್ ಬಿ ರಸ್ತೆ, ವಿನೋಬ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ  ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ದ ಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದರು.

ವಿನೋಬ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಲು ಮುಂದಾದರೆ ಮರಗಳ ಹನನ ಆಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಸಂಸದ ಯದುವೀರ್ ತಿಳಿಸಿದರು.

ಫ್ಲೈ ಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್ ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ. ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ. ಜನರ ವಿರೋಧದ ನಡುವೆ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ.. ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

Key words: Legal fight, flyover work, Mysore, MP Yaduveer

The post ಮೈಸೂರಿನಲ್ಲಿ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ-ಸಂಸದ ಯದುವೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್...

ഭീരുത്വപരമായ വധം; ഇറാന്‍ ഇന്റലിജന്‍സ് മന്ത്രി കൊല്ലപ്പെട്ടെന്ന് സ്ഥിരീകരിച്ച് പെസസ്‌കിയാന്‍

ടെഹ്‌റാന്‍: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബ് കൊല്ലപ്പെട്ടെന്ന് സ്ഥിരീകരിച്ച് ഇറാന്‍...

தவெக: "நான் முதல் மாநாட்டுல சொன்ன மாதிரிதான்" – கூட்டணி சர்ச்சைகளுக்கு விஜய்யின் விளக்கம் என்ன?

தமிழக வெற்றிக் கழகத்தின் இஃப்தார் நோன்பு திறக்கும் நிகழ்வு இன்று மகாபலிபுரத்திலுள்ள...

Story Board: డబ్బిస్తే.. ఏదైనా చేసుకోవచ్చా..? ఫామ్ హౌస్‌లో ఏం జరుగుతోంది..?

Story Board: హైదరాబాద్ చుట్టుపక్కల ఫామ్‌హౌస్‌ల్లో అసాంఘిక కార్యకలాపాలు పెరిగిపోతున్నాయి. అసలు...