6
December, 2025

A News 365Times Venture

6
Saturday
December, 2025

A News 365Times Venture

ರಾಜ್ಯದಲ್ಲಿ ಹೂಡಿಕೆ: ಭಾರತ್ ಫೋರ್ಜ್ ಜತೆ ಸಚಿವ ಎಂ ಬಿ ಪಾಟೀಲ ಮಾತುಕತೆ

Date:

 

ಬೆಂಗಳೂರು, ನ.೦೫,೨೦೨೫ : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಭಾರತ್ ಫೋರ್ಜ್ ಕಂಪನಿಯ ಉಪಾಧ್ಯಕ್ಷ ಮತ್ತು ಜಂಟಿ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಕಲ್ಯಾಣಿ ಅವರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಭೇಟಿಯಾಗಿ, ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕಲ್ಯಾಣಿ ಅವರು, ತಮ್ಮ‌ ಕಂಪನಿಯ ಸದ್ಯದ ಕಾರ್ಯ ಚಟುವಟಿಕೆಗಳು, ಮುಂದಿನ ಕಾರ್ಯತಂತ್ರಗಳು, ಉತ್ಪಾದನಾ ಸಾಮರ್ಥ್ಯ ಹೆಚ್ಚಳ ಮತ್ತು ಘಟಕಗಳ ವಿಸ್ತರಣೆ, ಅಮೆರಿಕನ್ ಆ್ಯಕ್ಸೆಲ್ ಅಂಡ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯ ಸ್ವಾಧೀನ ಮುಂತಾದವುಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಭಾರತ್ ಫೋರ್ಜ್ ಕಂಪನಿಯು ಫೋರ್ಜಿಂಗ್ ಮತ್ತು ಪ್ರಿಸಿಷನ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಪ್ರಪಂಚದ ಬೃಹತ್ ಕಂಪನಿಗಳಲ್ಲಿ ಒಂದಾಗಿದೆ.

ಸಚಿವರು ಕಲ್ಯಾಣಿ ಅವರಿಗೆ  ರಾಜ್ಯದ ಹೊಸ ಕೈಗಾರಿಕಾ ನೀತಿ, ಇಲ್ಲಿನ ಉದ್ಯಮ ಪರಿಸರ, ಪ್ರೋತ್ಸಾಹನಾ ಭತ್ಯೆಗಳು ಮುಂತಾದವುಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿ, ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅಮಿತ್ ಕಲ್ಯಾಣಿ ಅವರು ಹೆಸರಾಂತ ಉದ್ಯಮಿಯಾಗಿದ್ದ ಬಾಬಾ ಕಲ್ಯಾಣಿ ಅವರ ಪುತ್ರ.

ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮುಂತಾದವರಿದ್ದರು.

key words: Investment in Karnataka, Minister M B Patil, talks with, Bharat Forge

SUMMARY:

Investment in the state: Minister M B Patil talks with Bharat Forge

Large and Medium Industries Minister M B Patil met and held discussions with Bharat Forge Company Vice President and Joint Managing Director Amit Kalyani in Pune, Maharashtra, regarding investment in Karnataka.

The post ರಾಜ್ಯದಲ್ಲಿ ಹೂಡಿಕೆ: ಭಾರತ್ ಫೋರ್ಜ್ ಜತೆ ಸಚಿವ ಎಂ ಬಿ ಪಾಟೀಲ ಮಾತುಕತೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....