17
March, 2026

A News 365Times Venture

17
Tuesday
March, 2026

A News 365Times Venture

ಕಬ್ಬಿಗೆ ಬೆಲೆ ನಿಗದಿ: ಹೋರಾಟ ಹಿಂಪಡೆದು ರೈತರ ಸಂಭ್ರಮಾಚರಣೆ: ಮತ್ತೊಂದೆಡೆ ರೈತರಿಂದ ಪ್ರತಿಭಟನೆ

Date:

ಬೆಳಗಾವಿ,ನವೆಂಬರ್,8,2025 (www.justkannada.in): ಪ್ರತಿಟನ್  ಕಬ್ಬಿಗೆ 3300 ರೂಪಾಯಿ ಬೆಂಬಲ ಬೆಲೆ  ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹಿನ್ನೆಲೆಯಲ್ಲಿ  ಬೆಳಗಾವಿ ಗುರ್ಲಾಪುರದಲ್ಲಿ ರೈತರು ನಡೆಸುತ್ತಿದ್ದ ಹೋರಾಟವನ್ನ ಹಿಂಪಡೆದು ಸಂಭ್ರಮನಿಸಿದ್ದಾರೆ.

ಕಬ್ಬಿಗೆ 3500 ರೂ. ನಿಗದಿಗೆ ಆಗ್ರಹಿಸಿ ಕಬ್ಬುಬೆಳಗಾರರು ಬೃಹತ್ ಹೋರಾಟ ನಡೆಸಿದ್ದು ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ನಿನ್ನೆ ಸಭೆ ನಡೆಸಿ ಪ್ರತಿಟನ್  ಕಬ್ಬಿಗೆ 3300 ರೂಪಾಯಿ ನೀಡುವುದಾಗಿ ಘೋಷಿಸಿತ್ತು.  ಇದೀಗ ಇಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಬೆಳಗಾವಿ ಗುರ್ಲಾಪುರದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ತೆರಳಿ ರೈತ ಮುಖಂಡ ಚೂನಪ್ಪ ಪೂಜಾರಿ ಅವರುಗೆ ಸರ್ಕಾರದ ಆದೇಶ ಪತ್ರ ನೀಡಿದರು. ಕಬ್ಬು ಬೆಳೆಗೆ ಬೆಲೆ ನಿಗದಿಗೆ ಸರ್ಕಾರ ಒಪ್ಪಿದ್ದು, ಹೋರಾಟ ಕೈಬಿಡುವಂತೆ  ಮನವ ಮಾಡಿದರು. ಸರ್ಕಾರದ ಆದೇಶ ಪ್ರತಿ ಸಿಗುತ್ತಿದಂತೆಯೇ ಕಬ್ಬು ಬೆಳೆಗಾರರು ಪ್ರತಿಭಟನೆ ಹಿಂಪಡೆದು ಸಂಭ್ರಮಾಚರಿಸಿದರು.

ಬಾಗಲಕೋಟೆಯಲ್ಲಿ ಮುಂದುವರೆದ ಪ್ರತಿಭಟನೆ

ಪ್ರತಿಟನ್  ಕಬ್ಬಿಗೆ 3300 ರೂಪಾಯಿ ಬೆಂಬಲ ಬೆಲೆ  ನಿಗದಿ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿ 3,500 ರೂ ನಿಗದಿ ಮಾಡಲೇಬೇಕೆಂದು ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ.

ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ರೈತರು ರಸ್ತೆ ತಡೆದು  ಪ್ರತಿಭಟನೆ ನಡೆಸಿದ್ದು,  ಸ್ಥಳದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ರೈತರು ಸೇರಿದ್ದಾರೆ.  ಪ್ರತಿ ಟನ್ ಕಬ್ಬಿಗೆ 3500 ರೂ ಮತ್ತು ಬಾಕಿ ನೀಡುವಂತೆ ಒತ್ತಾಯ ಮಾಡಿದ್ದಾರೆ.

Key words: Sugarcane price, fixing, Farmers, celebrate,

The post ಕಬ್ಬಿಗೆ ಬೆಲೆ ನಿಗದಿ: ಹೋರಾಟ ಹಿಂಪಡೆದು ರೈತರ ಸಂಭ್ರಮಾಚರಣೆ: ಮತ್ತೊಂದೆಡೆ ರೈತರಿಂದ ಪ್ರತಿಭಟನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್...

Bihar Rajya Sabha Election; എ.ഐ.എം.ഐ.എമ്മും ബി.എസ്.പിയും വോട്ട് ചെയ്തു; കോണ്‍ഗ്രസ്-ആര്‍.ജെ.ഡി എം.എല്‍.എമാര്‍ വിട്ടുനിന്നു, എന്‍.ഡി.എയ്ക്ക് വിജയം

പാട്‌ന: ബീഹാറിലെ രാജ്യസഭാ സീറ്റുകളിലേക്കുള്ള തെരഞ്ഞെടുപ്പില്‍ എന്‍.ഡി.എ സഖ്യത്തിന് വിജയം. സംസ്ഥാനത്തെ...

பேராவூரணி தொகுதியை கூட்டணிக்கு தரமாட்டார் எடப்பாடி! – அதிமுக வேட்பாளர் ரேஸில் முந்துவது யார்?

தஞ்சாவூர் மாவட்டத்தில் உள்ள எட்டு சட்டமன்றத் தொகுதிகளில் ஒன்று பேராவூரணி. கடமைடை...

Nepali Gang : అన్నం పెట్టిన ఇంటికే కన్నం వేశారు..

హైదరాబాద్‌లో నేపాలీ గ్యాంగ్ మరోసారి రెచ్చిపోయింది. జస్ట్ ఇంట్లో పని మనుషులుగా...