20
June, 2026

A News 365Times Venture

20
Saturday
June, 2026

A News 365Times Venture

ಹೆಚ್ ಡಿಡಿ ಭಾವನಾತ್ಮಕ ಮಾತು: ನೀರಾವರಿ ಯೋಜನೆಗಳನ್ನ ಜಾರಿ ಮಾಡಿಸಿದ್ರೆ ಸಂತಸ-ಶಾಸಕ ಶಿವಲಿಂಗೇಗೌಡ

Date:

ಬೆಂಗಳೂರು,ಫೆಬ್ರವರಿ,5,2026 (www.justkannada.in):  ರಾಜ್ಯದ ನೀರಾವರಿ ಯೋಜನೆಗಳಿಗೆ ಅನುಮತಿ ಕೇಳಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಭಾವನಾತ್ಮಕವಾಗಿ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಕೆ.ಎಂ ಶಿವಲಿಂಗೇಗೌಡ, ರಾಜ್ಯದ ನೀರಾವರಿ ಯೋಜನೆಗಳನ್ನ ಜಾರಿ ಮಾಡಿಸಿದರೆ ಸಂತಸವಾಗುತ್ತೆ ಎಂದಿದ್ದಾರೆ.

ಇಂದು ಮಾತನಾಡಿದ ಶಾಸಕ ಶಿವಲಿಂಗೇಗೌಡ, ಹೆಚ್ ಡಿ ದೇವೇಗೌಡರು ಭಾವನಾತ್ಮಕವಾಗಿ ಮಾತನಾಡಿದ್ದಾರೆ. ರಾಜ್ಯದ ನೀರಾವರಿ ಯೋಜನೆ ಬಗ್ಗೆ ಮಾತಾಡಿದ್ದನ್ನ ಸ್ವಾಗತಿಸುವೆ. ಹೆಚ್ ಡಿ ದೇವೇಗೌಡರು ಆಡಳಿತ ಪಕ್ಷದ ಜೊತೆ ಮೈತ್ರಿಯಲ್ಲಿದ್ದಾರೆ. ಕೇಂದ್ರ ಸರ್ಕಾರದ ಜೊತೆ ಮಾತನಾಡಿ ನೀರಾವರಿ ಯೋಜನೆಗಳಿಗೆ ಅನುಮತಿ ಕೊಡಿಸಬೇಕು ರಾಜ್ಯದ ನೀರಾವರಿ ಯೋಜನೆಗಳನ್ನ ಜಾರಿ ಮಾಡಿಸಿದರೆ ಸಂತಸವಾಗುತ್ತದೆ ಎಂದರು.

ನಿನ್ನೆ ವಿಧಾನಸಭೆ ಕಲಾಪದಲ್ಲಿ ವಿಪಕ್ಷ ಬಿಜೆಪಿ ವಿರುದ್ದ ಏಕವಚನದಲ್ಲಿ ಮಾತನಾಡಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಶಿವಲಿಂಗೇಗೌಡ, ನಿನ್ನೆ ಸದನದಲ್ಲಿ ಅಹಿತಕರ ಘಟನೆ ನಡೆಯಿತು. ವಿಪಕ್ಷ ಸದಸ್ಯರು ಪ್ರತಿಭಟನೆ ಮಾಡುತಿದ್ದರು. ಈ ವೇಳೆ ನನಗೆ ಮಾತನಾಡಲು ಅವಕಾಶ ಕೊಟ್ಟರು. ಆಗ ನನ್ನ ಮೇಲೆ ವೈಯಕ್ತಿಕ ನಿಂದನೆ ಮಾಡಿದರು.  ಹಾಗಾಗಿ ಬಿರುಸಿನಿಂದ ಮಾತನಾಡಿದೆ ಎಂದು ಸ್ಪಷ್ಟಪಡಿಸಿದರು.

Key words: Former PM, HD Devegowda, emotional speech, MLA, Shivalingegowda

The post ಹೆಚ್ ಡಿಡಿ ಭಾವನಾತ್ಮಕ ಮಾತು: ನೀರಾವರಿ ಯೋಜನೆಗಳನ್ನ ಜಾರಿ ಮಾಡಿಸಿದ್ರೆ ಸಂತಸ-ಶಾಸಕ ಶಿವಲಿಂಗೇಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഗ്രേറ്റ് നിക്കോബാര്‍: കേന്ദ്രത്തിന് സുതാര്യതയില്ലാത്ത നയമെന്ന് ജയറാം രമേശ്

ന്യൂദല്‍ഹി: ഗ്രേറ്റ് നിക്കോബാര്‍ പദ്ധതിയില്‍ കേന്ദ്രസര്‍ക്കാര്‍ സ്വീകരിക്കുന്നത് അസാധാരണമായ തരത്തില്‍ സുതാര്യതയില്ലാത്ത...

தவெகவில் இணைந்த சி.மகேந்திரன்: 'அமைப்பு விதிகளுக்கு விரோதமாக செயல்பட்டவர்' – CPI கருத்து

இந்திய கம்யூனிஸ்ட் கட்சியின் மூத்த உறுப்பினர் சி.மகேந்திரன் நேற்று தவெகவில் இணைந்தார்....

Paraquat Herbicide Ban: హైకోర్టుకు చేరిన గడ్డి మందు వివాదం.. ప్రభుత్వ జీవోపై సవాల్

Paraquat Herbicide Ban: పారాక్వాట్ డైక్లోరైడ్ 24% ఎస్‌ఎల్ (Paraquat Dichloride...

ಪೌರ ಕಾರ್ಮಿಕರ ತ್ಚರಿತ ನೇಮಕಾತಿಗೆ  ಸೂಚಿಸಿದ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ.

  ಬೆಂಗಳೂರು, ಜೂ.೧೯,೨೦೨೬:  ಎಲ್ಲಾ ನಗರಗಳಲ್ಲಿ ಪೌರ ಕಾರ್ಮಿಕರ ಕೊರತೆ ಇದೆ....