17
February, 2026

A News 365Times Venture

17
Tuesday
February, 2026

A News 365Times Venture

ಕೆಆರ್ ಪೇಟೆ ಅಭ್ಯರ್ಥಿ ಘೋಷಣೆ ವಿಚಾರ: ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ

Date:

ಮಂಡ್ಯ,ಫೆಬ್ರವರಿ,6,2026 (www.justkannada.in): ಕೆಆರ್ ಪೇಟೆ  ಅಭ್ಯರ್ಥಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ನಿಖಿಲ್ ಕುಮಾರಸ್ವಾಮಿ, ಇದು ಹಾದಿಬೀದಿಯಲ್ಲಿ ಚರ್ಚೆ ಮಾಡುವ ವಿಚಾರ ಅಲ್ಲ. ಅಂತಹ ಅನಿವಾರ್ಯ ಸೃಷ್ಠಿ ಆಗಿಲ್ಲ. ಕಾಮನ್ ಸೆನ್ಸ್ ಇರುವ ವ್ಯಕ್ತಿ ಹೇಗೆ ಮಾತಾಡಬೇಕೆಂದು ಅರಿಯಬೇಕು. ಕೆಆರ್ ಪೇಟೆ ಜೆಡಿಎಸ್ ಶಾಸಕರಾಗಿ ಮಂಜಣ್ಣ ಆಯ್ಕೆಯಾಗಿದ್ದಾರೆ. ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಸಹಜವಾಗಿ  ಹೇಳಿದ್ದೆ ಅಷ್ಟೆ.  ನನ್ನ ಹೇಳಿಕೆಯಲ್ಲಿ ತಪ್ಪೇನಿದೆ ಎಂದರು.

ಮೈತ್ರಿ ಮೇಲ್ಮಟ್ಟದಲ್ಲಿ ಆಗಿದೆ.  ಹೆಚ್ ಡಿಕೆ ವ್ಯಕ್ತಿತ್ವ ಬಗ್ಗೆ ರಾಜ್ಯದ ಜನತೆಗೆ ಗೊತ್ತಿದೆ. ಕುಮಾರಸ್ವಾಮಿ ಮೇಲೆ ಗೂಬೆ ಕೂರಿಸುವುದು ಬೇಡ. ವಿಶ್ವಾಸದ ಕೊರತ ಇದ್ದರೆ ಹಾದಿ ಬಿದಿಯಲ್ಲಿ ಏಕೆ ಚರ್ಚೆ ಮಾಡುತ್ತೀರಿ.  ಮೈತ್ರಿ ಉಳಿಸಿಕೊಳ್ಳಬೇಕು ಅಂತಾ ಇದ್ದರೆ ಬನ್ನಿ ಹೆಚ್ ಡಿಕೆ ಮನೆ ಬಾಗಿಲು ಯಾವಾಗಲೂ ತೆರೆದಿರುತ್ತದೆ.  ಸಮಸ್ಯೆ ಇದ್ದರೆ ಸರಿಪಡಿಸುವ ಕೆಲಸ ಮಾಡೋಣ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ನಿಖಿಲ್ ಕುಮಾರಸ್ವಾಮಿ, ಮುಂದೆಯೂ  ಶಾಸಕ ಮಂಜು ಅವರ ಕೈ ಹಿಡಿಯಿರಿ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಬಿಜೆಪಿ ಮುಖಂಡರಾದ ಮಾಜಿ ಶಾಸಕರಾದ ನಾರಾಯಣಗೌಡ,  ಪ್ರೀತಂ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದರು.

Key words: KR Pete, candidate, issue, JDS, Nikhil Kumaraswamy

The post ಕೆಆರ್ ಪೇಟೆ ಅಭ್ಯರ್ಥಿ ಘೋಷಣೆ ವಿಚಾರ: ಸ್ಪಷ್ಟನೆ ಕೊಟ್ಟ ನಿಖಿಲ್ ಕುಮಾರಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾಯಕತ್ವ ಬದಲಾವಣೆ: ಸಮಯ ಬಂದಾಗ ಸಿಎಂ ಸಿದ್ದರಾಮಯ್ಯನವರೇ ಉತ್ತರ ಕೊಡ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,17,2026 (www.justkannada.in):  ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಹಿನ್ನೆಲೆಯಲ್ಲಿ ಈ...

നിലമേലിലെ മരണം: അലര്‍ജിയല്ല, ഭക്ഷ്യവിഷബാധയെന്ന് പ്രാഥമിക പോസ്റ്റ്മോര്‍ട്ടം റിപ്പോര്‍ട്ട്

തിരുവനന്തപുരം: കൊല്ലം നിലമേലില്‍ രണ്ട് പേര്‍ മരണപ്പെട്ട സംഭവം ഭക്ഷ്യവിഷബാധ കാരണമെന്ന്...

பட்ஜெட் 2026: “இது விடியா அரசின் கடைசி அத்திப்பழ பட்ஜெட்" – எடப்பாடி பழனிசாமி கடும் விமர்சனம்!

தமிழக சட்டமன்றத்தில் இன்று தாக்கல் செய்யப்பட்ட 2026-27-ம் ஆண்டிற்கான இடைக்கால நிதிநிலை...

AP Speaker Ayyanna Patrudu: స్పీకర్‌ అయ్యన్నపాత్రుడు సంచలన వ్యాఖ్యలు.. ఆ ఎమ్మెల్యేలను రీకాల్‌ చేయాలి..!

AP Speaker Ayyanna Patrudu: ఆంధ్రప్రదేశ్‌ అసెంబ్లీ స్పీకర్‌ చింతకాయల అయ్యన్నపాత్రుడు...