ಬೆಂಗಳೂರು,ಫೆಬ್ರವರಿ,11,2026 (www.justkannada.in): ತಂದೆಯ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಶಾಲಾ ಬಸ್ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾಟರ್ಸ್ ಬಳಿ ಈ ದುರ್ಘಟನೆ ನಡೆದಿದೆ. 4 ವರ್ಷದ ಬಾನು 2ವರ್ಷದ ವರ್ಷ ಮೃತಪಟ್ಟ ಮಕ್ಕಳು ತಂದೆ ಕಾನ್ಸ್ ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹಾಲು ತರಲು ತಂದೆ ನಾಗನಗೌಡ ಅವರು ಮಕ್ಕಳನ್ನು ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ತಿರುವಿನಲ್ಲಿ ಶಾಲಾ ಬಸ್ ಏಕಾ ಏಕಿ ಬೈಕ್ ಗೆ ಡಿಕ್ಕಿಯಾಗಿದೆ. ಈ ಸಮಯದಲ್ಲಿ ಮಕ್ಕಳು ಕೆಳಕ್ಕೆ ಬಿದ್ದಿದ್ದು ಶಾಲಾ ಬಸ್ ಮಕ್ಕಳ ಮೇಲೆ ಹರಿದಿದೆ. ಇದರಿಂದ ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Key words: Two children, death, horrific, accident
The post ಭೀಕರ ಅಪಘಾತಕ್ಕೆ ಇಬ್ಬರು ಮಕ್ಕಳು ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





