20
February, 2026

A News 365Times Venture

20
Friday
February, 2026

A News 365Times Venture

ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ ಭೇಟಿ: ವ್ಯವಸ್ಥೆಗೆ ಪ್ರಶಂಸೆ

Date:

ಬೆಂಗಳೂರು,ಫೆಬ್ರವರಿ,20,2026 (www.justkannada.in):  ಮುಸ್ಸೂರಿಯ ನಾಗರಿಕ ಸೇವಾ ಅಧಿಕಾರಿಗಳ ತರಬೇತಿ ಸಂಸ್ಥೆಯಾದ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿ (ಎಲ್ ಬಿ ಎಸ್ ಎನ್ ಎ ಎ) ವತಿಯಿಂದ ತರಬೇತಿ ನಿರತ 10 ಐಎಎಸ್ ಅಧಿಕಾರಿಗಳ ತಂಡವು ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಭೇಟಿ ನೀಡಿ, ಕಾರ್ಯಾಚರಣಾ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆಯಿತು.

ಅಧಿಕಾರಿಗಳನ್ನು ಸ್ವಾಗತಿಸಿದ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಕೆಇಎ ಕಾರ್ಯವೈಖರಿ ಬಗ್ಗೆ ಅವರಿಗೆ ಪೂರ್ಣ ಮಾಹಿತಿ ನೀಡಿದರು.

ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಮತ್ತು ಕೌನ್ಸೆಲಿಂಗ್ ಪ್ರಕ್ರಿಯೆ ಹಾಗೂ ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳಿಗೆ ಅನುಸರಿಸುವ ಕ್ರಮಗಳ ಕುರಿತು ತಂಡದ ಸದಸ್ಯರಿಗೆ ಗದ್ಯಾಳ ಅವರು ಮಾಹಿತಿ ನೀಡಿದರು.

ಇದೇ ವೇಳೆ, ಸಿಇಟಿ ಅಳವಡಿಸಿಕೊಂಡಿರುವ ಆಧುನಿಕ ಭದ್ರತಾ ಕ್ರಮಗಳಾದ ಮುಖಚಹರೆ ಪತ್ತೆ ತಂತ್ರಜ್ಞಾನ (ಫೇಷಿಯಲ್ ರೆಕಗ್ನಿಷನ್), ಪರೀಕ್ಷೆ ಮುಗಿದ ತಕ್ಷಣವೇ ಓಎಂಆರ್ ಶೀಟ್ ಗಳನ್ನು ಸ್ಕ್ಯಾನ್ ಮಾಡಿ ವೆಬ್ ಸೈಟ್ ಗೆ ಅಪ್ ಲೋಡ್ ಮಾಡುವ ಕ್ರಮದ ಬಗ್ಗೆಯೂ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ನವೀಕೃತ ಕೆಇಎ ಕಚೇರಿ, ಕಾರ್ಪೊರೇಟ್ ಸಂಸ್ಥೆಗಳನ್ನು ಹೋಲುವ ರೀತಿಯಲ್ಲಿ ಅಭಿವೃದ್ಧಿ ಪಡಿಸಿರುವ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಪರೀಕ್ಷೆಗಳ ಫಲಿತಾಂಶವನ್ನು ಸಕಾಲದಲ್ಲಿ ನೀಡಲು ಅನುಸರಿಸುವ ಕ್ರಮದ ಬಗ್ಗೆಯೂ ಮಾಹಿತಿ ಪಡೆದುಕೊಂಡರು.

Key words: Delegation, IAS officers, training, visits, KEA

The post ಕೆಇಎಗೆ ತರಬೇತಿ ನಿರತ ಐಎಎಸ್ ಅಧಿಕಾರಿಗಳ ನಿಯೋಗ ಭೇಟಿ: ವ್ಯವಸ್ಥೆಗೆ ಪ್ರಶಂಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್

ಬೆಂಗಳೂರು,ಫೆಬ್ರವರಿ,20,2026 (www.justkannada.in): ಇತ್ತೀಚೆಗೆ ಪ್ರಕರಣವೊಂದರ ವಿಚಾರಣೆ ವೇಳೆ ರಾಜಕೀಯ ಪಕ್ಷಗಳು...

മലപ്പുറത്തെ ലോറിയപകടം; മണിക്കൂറുകളുടെ ശ്രമം പരാജയപ്പെട്ടു, മുസ്തഫ മരിച്ചു

മലപ്പുറം: ആതവനാട്ടെ 65 അടി താഴ്ചയുള്ള ക്വാറിയിലെ വെള്ളക്കെട്ടിലേക്ക് മറിഞ്ഞ മിനിലോറിയിലെ ക്ലീനർ...

AI மாநாடு: சட்டையை கழற்றிப் போராட்டம் நடத்திய காங்கிரஸ் அணி; கண்டனம் தெரிவிக்கும் பாஜக!

இந்தியாவின் தொழில்நுட்ப வளர்ச்சியைப் பறைசாற்றும் வகையில் டெல்லியில் 'இந்திய AI உச்சிமாநாடு...

Minister Nara Lokesh: మన చరిత్ర, సంస్కృతికి చిహ్నంగా అమరావతి స్టేట్ సెంట్రల్ లైబ్రరీ

Minister Nara Lokesh: ప్రజా రాజధాని అమరావతిలో నిర్మించబోయే స్టేట్ సెంట్రల్...