23
February, 2026

A News 365Times Venture

23
Monday
February, 2026

A News 365Times Venture

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

Date:

ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ನಡೆಯುತ್ತಿರುವುದು ಬೇಸರದ ಸಂಗತಿ. ಜಾತೀಯತೆ, ಮೂಢನಂಬಿಕೆ ವಿಜೃಂಭಿಸುತ್ತಲೇ ಇದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ಬೇಸರ ವ್ಯಕ್ತಪಡಿಸಿದರು.

ಮನ್ವಂತರ ಪ್ರಕಾಶನ ಮತ್ತು ತರಬೇತಿ ಸಂಸ್ಥೆ ಆಯೋಜಿಸಿದ್ದ ನಾನಾ ಶ್ರಮಿಕ ಕ್ಷೇತ್ರಗಳ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕೆ.ವಿ ಪ್ರಭಾಕರ್ ಮಾತನಾಡಿದರು.‌

ಮನ್ವಂತರ ಮಾಧ್ಯಮ ಕೌಶಲ್ಯಾಭಿವೃದ್ಧಿ ತರಬೇತಿ ಸಂಸ್ಥೆ ಕಳೆದ ಏಳು ವರ್ಷಗಳಿಂದ “ಸಹೃದಯತೆ, ಸದ್ವಿಚಾರ, ಸಹಬಾಳ್ವೆ ಎನ್ನುವ ಮೂರು ಮಂತ್ರಗಳನ್ನು ಪಾಲಿಸುತ್ತಾ, ಸಮಾಜದಲ್ಲಿ ಹೃದಯವಂತಿಕೆಯ ಬೀಜಗಳನ್ನು ಬಿತ್ತುತ್ತಿದೆ.  ತಂತ್ರಜ್ಞಾನದ ಬೆಳವಣಿಗೆಯಿಂದ ಮನುಷ್ಯ ಜಗತ್ತಿನಲ್ಲಿ ಒಂದು ಹೊಸ ಮನ್ವಂತರವೇ ಆರಂಭವಾಗಿದೆ. ಮನೆಗಳ ಒಳಗೂ ಮನುಷ್ಯ ಸಂಬಂಧ, ಮಾನವೀಯ ಬೆಸುಗೆ ಕಾಣೆಯಾಗುತ್ತಿರುವ ಹೊತ್ತಲ್ಲಿ ಕೋಲಾರದ ಮಣ್ಣಿನಲ್ಲಿ ಮನ್ವಂತರ ಸಂಸ್ಥೆ ಮಾನವೀಯ ಬೆಸುಗೆಗಳನ್ನು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮನ್ವಂತರ ಸಂಸ್ಥೆ ದೊಡ್ಡ ದೊಡ್ಡ ಉದ್ಯಮಿಗಳನ್ನು, IAS, IPS ಅಧಿಕಾರಿಗಳು, ಅಧಿಕಾರಸ್ಥರು, ಹಣವಂತರನ್ನು ಕರೆಸಿ ಸನ್ಮಾನಿಸಿ ದೊಡ್ಡ ಹೆಸರನ್ನು ಸಂಪಾದಿಸಬಹುದಿತ್ತು. ಆದರೆ, ಪಾನಿಪೂರಿ ಮಾಡಿ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡ ರಮೇಶ್ ಅವರನ್ನು ಗುರುತಿಸಿದೆ. ನಾವು ಬೆಳಗ್ಗೆ ಎದ್ದು ಮನೆಯಿಂದ ಹೊರಗೆ ಕಾಲಿಡುವ ಮೊದಲೇ ಬೀದಿಯನ್ನು ಗುಡಿಸಿ ಸ್ವಚ್ಚವಾಗಿಡುವ ಪೌರ ಕಾರ್ಮಿಕ ಸಮುದಾಯದ ಕೋಕಿಲಾ ಅವರನ್ನು ಗುರುತಿಸಿದೆ ಎಂದರು.

ಕೋಲಾರ ಅಂದರೆ ಸೌಹಾರ್ದತೆಯ ಮಂಟಪ ಇದ್ದ ಹಾಗೆ. ಎಲ್ಲಾ‌ ಧರ್ಮದವರೂ ಒಟ್ಟಾಗಿ ಬೆಸೆದುಕೊಂಡಿರುವ ಶ್ರಮಿಕ ಸಮಾಜ. ಈ ಕೋಲಾರದ ಮಣ್ಣಿನ ಸೌಹಾರ್ದತೆ ಮತ್ತು ಸಹಬಾಳ್ವೆಗೆ ನೀರು ಗೊಬ್ಬರ ಹಾಕುತ್ತಿರುವ ಮುಬಾರಕ್ ಬಾಗಬಾನ್ ಅವರನ್ನು ಗುರುತಿಸಿದೆ. ಎಲ್ಲರೂ ಸಿನಿಮಾ ಮತ್ತು ಸೀರಿಯಲ್ ನಟ ನಟಿಯರನ್ನು ಹುಡುಕಿಕೊಂಡು ಓಡುತ್ತಿರುವ ಹೊತ್ತಿನಲ್ಲಿ ಮನ್ವಂತರ ಸಂಸ್ಥೆ, ಸಾಂಪ್ರದಾಯಿಕ ಕಲೆ ಲಾವಣಿ ಹಾಡುವ ಅರಳು ಮಲ್ಲಿಗೆ ಪ್ರಭುದೇವರನ್ನು, ನಾದಸ್ವರ ಕಲಾವಿದ ವಿದ್ವಾನ್ ಬಿ.ಎನ್.ಗೋಪಾಲ್, ಜಾನಪದ ಕ್ಷೇತ್ರದ ಲಲಿತಮ್ಮ, ಕ್ರೀಡಾಪಟು ಮಹಾದೇವಿ, ನಿವೃತ್ತ ಶಿಕ್ಷಕಿ ಕುಮುದಾ, ವಕೀಲರೂ ಹಿರಿಯ ಕ್ರಿಕೆಟ್ ಪಟು ಗ್ರಾಮೀಣ ಪ್ರತಿಭೆ ಬಿ.ಸಿ.ಪರಮೇಶ್ ಅವರನ್ನು ಗುರುತಿಸಿ ಗೌರವಿಸುತ್ತಿದೆ. ಮಾತ್ರವಲ್ಲದೆ ಬಹುಭಾಷಿಕ ನೆಲದಲ್ಲಿ ಕನ್ನಡಕ್ಕಾಗಿ‌ ಶ್ರಮಿಸಿದ ಬಿ.ಎನ್.ಮೋಹನ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪುರಸ್ಕಾರ ನೀಡುತ್ತಿರುವುದಕ್ಕೆ ವಿಶೇಶವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಇವರೆಲ್ಲರ ಕ್ಷೇತ್ರಗಳೂ ಬೇರೆ ಬೇರೆ ಇರಬಹುದು. ಆದರೆ, ಎಲ್ಲರನ್ನೂ ನಾನು “ಸಾಮಾಜಿಕ‌ ಶುಶ್ರೂಶಕರು. ಸಮಾಜದ ಆರೋಗ್ಯಕ್ಕಾಗಿ ಶ್ರಮಿಸುತ್ತಿರುವ Social Doctors ಎಂದು ಕರೆಯಲು ಇಚ್ಚಿಸುತ್ತೇನೆ. ಇಂಥಾ ಸಹೃದಯರನ್ನು ಸನ್ಮಾನಿಸುವ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಬಹಳ ಖುಷಿ ಕೊಟ್ಟಿದೆ ಎಂದರು.

ನಮ್ಮ ಜಿಲ್ಲೆಯ ಮಣ್ಣಿನಲ್ಲಿ ಮನ್ವಂತರ ಬಿತ್ತುತ್ತಿರುವ ಈ ಹೃದಯವಂತಿಕೆ ಮತ್ತು ಸೌಹಾರ್ದದ ಬೀಜಗಳು ಬೆಳೆದು ಹೆಮ್ಮರವಾಗಿ “ಸಹಬಾಳ್ವೆ” ಎನ್ನುವ ನೆರಳನ್ನು ಸದಾ ಕಾಲ ನೀಡುತ್ತಿರಲಿ ಎಂದು ಹಾರೈಸುತ್ತೇನೆ.  ಉಳಿದಂತೆ, ಮನ್ವಂತರ ಸಂಸ್ಥೆ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಮೂಲಕ ಗ್ರಾಮೀಣ ಭಾಗದ ಯುವಜನರ ಬಾಳಿಗೆ ಆಸರೆ ಆಗುತ್ತಿದೆ. ನನ್ನ ಸಹಕಾರ ಸದಾ ಈ ಸಂಸ್ಥೆಯ ಜೊತೆಗೆ ಇರುತ್ತದೆ ಎಂದು ಹೇಳಲು ಬಯಸುತ್ತೇನೆ.‌ ಕೇವಲ ಪಠ್ಯಪುಸ್ತಕದ ಜ್ಞಾನವಲ್ಲದೆ, ಪ್ರಾಯೋಗಿಕವಾಗಿ ಕೆಲಸ ಕಲಿಯಲು  ಹೆಚ್ಚಿನ ಆದ್ಯತೆ ಕೊಡುವ ಅಗತ್ಯವಿದೆ. ಈ ಕೆಲಸವನ್ನು ಮನ್ವಂತರ ಮಾಡುತ್ತಿದೆ.

ಯುವ ಸಮುದಾಯದಲ್ಲಿ ಕೌಶಲ್ಯದ ತರಬೇತಿ ಮೂಲಕ ಆತ್ಮವಿಶ್ವಾಸವನ್ನು ತುಂಬುವುದು ಬಹಳ ಅರ್ಥಪೂರ್ಣ ಕೆಲಸ. ಏಕ ಕಾಲಕ್ಕೆ ಹತ್ತಾರು ಮಂದಿಯ ವೈಯುಕ್ತಿಕ ಬದುಕಿಗೆ ಆಸರೆ, ಆಗುತ್ತಲೇ ಸಮಾಜದ ಆರೋಗ್ಯಕ್ಕೂ ಶ್ರಮಿಸುತ್ತಿರುವ ಮನ್ವಂತರ ಸಂಸ್ಥಗೆ ರಾಜ್ಯೋತ್ಸವ ಪ್ರಶಸ್ತಿ ಬರಬೇಕು ಎನ್ನುವುದು ನನ್ನ ವೈಯುಕ್ತಿಕ ಅಭಿಲಾಷೆ. ಇದು ಈಡೇರುವ ಮೂಲಕ ಮನ್ವಂತರಕ್ಕೆ ಸಾರ್ಥಕತೆ ದೊರಕಲಿ, ಇದಕ್ಕಾಗಿ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನಾವು ನೀವು ಒಟ್ಟಾಗಿ ಶ್ರಮಿಸೋಣ ಎಂದು ಕರೆ ನೀಡಿದರು.

ಓದಿದ ಶಾಲೆಯಲ್ಲೇ ಸನ್ಮಾನಿತನಾಗಿದ್ದು ಧನ್ಯತೆಯ ಕ್ಷಣ ಎಂದು ಕೆ.ವಿ.ಪ್ರಭಾಕರ್‌ ಧನ್ಯತೆ ಅರ್ಪಿಸಿದರು. ಮನ್ವಂತರ ಸಂಸ್ಥೆಯ ಅನಂತರಾಮು ಹಾಗೂ ಬಂಗಾರಪೇಟೆ ಪತ್ರಕರ್ತರ ಸಂಘದ ಮತ್ತು ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Key words: achievers, Manvantara Publishing and Training Institute, K.V. Prabhakar

The post ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ത്യാ ബ്ലോക്കിന്റെ ചുമതല മമതക്ക് നല്‍കണം: രാഹുല്‍ ഗാന്ധിയോട് മണിശങ്കര്‍ അയ്യര്‍; രാജ്യസഭാ സീറ്റ് മോഹിച്ചാണോയെന്ന് കോണ്‍ഗ്രസ്

ന്യൂദല്‍ഹി: ഇന്ത്യാ ബ്ലോക്കിന്റെ തലപ്പത്ത് വരേണ്ടത് പ്രാദേശിക പാര്‍ട്ടി നേതാക്കളാണെന്ന് കോണ്‍ഗ്രസ്...

സനാതന ധര്‍മത്തെ വ്രണപ്പെടുത്തിയാല്‍ വീട്ടില്‍ കയറി ആക്രമിക്കും; സിനിമാപ്രവര്‍ത്തകരെ ഭീഷണിപ്പെടുത്തി കര്‍ണിസേന

മുംബൈ: സനാതന ധര്‍മത്തെയും ഹിന്ദുമതത്തിലെ ജാതികളെയും വ്രണപ്പെടുത്തിയാല്‍ ഒരു പാഠം പഠിപ്പിക്കുമെന്ന്...