9
March, 2026

A News 365Times Venture

9
Monday
March, 2026

A News 365Times Venture

ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ.

Date:

ಮೈಸೂರು,ಮಾರ್ಚ್,9,2026 (www.justkannada.in): ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ  ಹೋಟೆಲ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮೈಸೂರಿನ ರಾಜಮಾತೆ ಕೆಂಪನಂಜಮ್ಮಣ್ಣಿ ಅವರನ್ನು ಸ್ಮರಿಸಿದರು.

ಭಾರತ ಮಾತೆ ಹಾಗೂ ಕೆಂಪನಂಜಮಣ್ಣಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಬಿಜೆಪಿ ಸಹ ಪ್ರಭಾರಿ  ಡಾ.ಈ.ಸಿ.ನಿಂಗರಾಜ್ ಗೌಡ ರವರು ಮೈಸೂರು ನಗರಕ್ಕೆ ರಾಜಮಾತೆ ಕೊಡುಗೆ ಅಪಾರ ,ಕೆ.ಆರ್.ಎಸ್‌. ಅಣೆಕಟ್ಟು ಕಟ್ಟುವಾಗ ಹಣಕಾಸಿನ ಕೊರತೆಯಾದಾಗ ತಮ್ಮ ಮೈ ಮೇಲಿದ್ದ ಒಡವೆ ಮಾರಿ ಅಣೆಕಟ್ಟು ಪೂರ್ಣಗೊಳ್ಳಲು ಸಹಾಯ ಮಾಡಿದ ನಮ್ಮ ಹೆಮ್ಮೆಯ ಮಹಾರಾಣಿ ಕೆಂಪ ನಂಜಮ್ಮಣ್ಣಿ  ಅವರ ಸ್ಮರಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು.

ಮೈಸೂರು ನಗರದ ವಿಸ್ತರಣೆ ಹಾಗೂ ಪೈಪ್ ಗಳಮೂಲಕ ನೀರು ಸರಬರಾಜು ಮತ್ತು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಂಕುಸ್ಥಾಪನೆ, ಭಾರತದಲ್ಲಿಯೇ ಮೊದಲ ಬಾರಿಗೆ ಶಿವನ ಸಮುದ್ರ ವಿದ್ಯುತ್ ಉತ್ಪಾದನೆ, ರೈತರ ಅನೂಕೂಲಕ್ಕಾಗಿ ಚೆತ್ರದುರ್ಗದಲ್ಲಿ ಮಾರಿ ಕಣಿವೆ ಅಣೆಕಟ್ಟು, ಮಹಿಳೆಯರ ವಿದ್ಯಾಭ್ಯಾಸಕ್ಕೆ ಅನುಕೂಲಕ್ಕಾಗಿ ಮಹಾರಾಣಿ ಕಾಲೇಜು ಸ್ಧಾಪನೆ, ಬೆಂಗಳೂರಿನಲ್ಲಿ ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ಪ್ರಾಂರಂಭಸಿರುವುದು ಇವರ ಕಾರ್ಯಕ್ಕೆ ಉತ್ತಮ ಸಾಕ್ಷಿಯಾಗಿದೆ.

ಅವರು ಕಟ್ಟಾ ಹಿಂದೂ ಧರ್ಮದ ಅನುಯಾಯಿಯಾಗಿದ್ದರು, ಇಂತಹ ಮಹಾನ್ ಸಾಧಕೀಯರು ಇಂದಿನ ಮಹಿಳೆಯರಿಗೆ ಸ್ಪೂರ್ತಿದಾಯಕರು ಎಂದು ಡಾ.ಈ.ಸಿ.ನಿಂಗರಾಜ್ ಗೌಡ ಹೇಳಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪರಮೇಶ್ ಗೌಡ, ಬಾಲಣ್ಣ, ಸಂದೇಶ್, ಉಮೇಶ್, ಪ್ರಮೋದ್ ಗೌಡ, ಭೈರಪ್ಪ, ಗಂಗಣ್ಣ, ಗೋಪಾಲ್, ಅಶ್ವಥ್, ಜಯಪ್ಪ, ಕೆ.ಎನ್. ಸಂತೋಷ್, ಮಂಜುನಾಥ್ ಎಸ್. ಗೌಡ, ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ವಸಂತ ಮನೀಶ್, ಚಂದ್ರಕಲಾ, ರಶ್ಮಿ, ಮಧು, ಗೀತಾ, ಒಕ್ಕಲಿಗರ ಸಂಘದ ನಿರ್ದೇಶಕ ಚೇತನ್ ಗೌಡ , ಪ್ರವೀಣ್, ರಾಜಣ್ಣ, ವಿಜಯ್, ಅಭಿ ಇನ್ನಿತರರು ಹಾಜರಿದ್ದರು.

Key words: Women’s Day,  Veer Savarkar Youth Grou,  Rajmata, Kempananjammanni.

The post ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ: MDA ಬಜೆಟ್‌ ನಲ್ಲಿ ಅಭಿವೃದ್ಧಿಗೆ ಒತ್ತು

ಮೈಸೂರು,ಮಾರ್ಚ್,9,2026 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಪ್ರಸಕ್ತ ಆರ್ಥಿಕ...

‘ചേട്ടന്‍ തിരുവനന്തപുരത്തെത്തി’ സഞ്ജു സാംസണെ ഔദ്യോഗികമായി സ്വീകരിച്ച് മന്ത്രി വി. ശിവന്‍കുട്ടി

തിരുവനന്തപുരം: ടി-20 ലോകകപ്പ് നേടിയതിന് പിന്നാലെ തിരുവനന്തപുരത്തെത്തിയ ഇന്ത്യന്‍ ക്രിക്കറ്റ് താരം...

`கிரிக்கெட்டின் லாஸ்ட் ஓவரில் சிக்ஸர் போல இந்த மாநாடுகள்' – திருச்சியில் முதல்வர் ஸ்டாலின் உரை

சட்டமன்றத் தேர்தலுக்குத் தயாராகி வரும் அரசியல் கட்சிகள் தொடர்ந்து மாநாடு, நிர்வாகிகள்...

25 అప్‌డేట్లతో మార్కెట్‌లోకి Hyundai Verna.. ధర, ఫీచర్స్‌..

Hyundai Verna 2026: కాలం మారుతుంది.. ఒకప్పుడు కారు ఉంటే చాలు.....