ನವದೆಹಲಿ,ಮಾರ್ಚ್,10,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪೆಟ್ರೋಲಿಯಂ ಕ್ಷೇತ್ರದಲ್ಲಿ ಆತ್ಮನಿರ್ಭರ್ ಇಲ್ಲ. ಶೇ 80ರಿಂದ ಶೇ.90 ಇಂಧನ ಮಧ್ಯಪ್ರಾಚ್ಯದಿಂದ ಬರಬೇಕು. ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಸಿಲಿಂಡರ್ ಸಮಸ್ಯೆ ಆಗುತ್ತಿದೆ. ಹೋಟೆಲ್ ಉದ್ಯಮಗಳು ಸಂಘಟನೆಗಳು ಈ ಬಗ್ಗೆ ಪ ತ್ರಬರೆದಿದ್ದಾರೆ ಸಿಲಿಂಡರ್ ಸಮಸ್ಯೆ ಬಗ್ಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ ಎಂದರು.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಜೊತೆ ಮಾತಾಡಿ ಸಮಸ್ಯೆ ಬಗ್ಗೆ ಮಾಹಿತಿ ಪಡೆಯುತ್ತೇನೆ. ದೇಶದಲ್ಲಿ 33 ಕೋಟಿಗೂ ಅಧಿಕ ಜನರ ಮನೆಗಳಿಗೆ ಅನಿಲ ಪೂರೈಕೆಗೆ ಕ್ರಮ ಕೈಗೊಳ್ಳುತ್ತೇವೆ. ಮನೆಗಳಿಗೆ ಗ್ಯಾಸ್ ಪೂರೈಕೆ ಮಾಡೋದು ನಮ್ಮ ಸರ್ಕಾರದ ಆದ್ಯತೆ. ಆಸ್ಪತ್ರೆಗಳು ಹೋಟಲ್ ಗಳಿಗೂ ಸಿಲಿಂಡರ್ ಪೂರೈಸುವುದು ನಮ್ಮ ಆದ್ಯತೆಯಾಗಿದೆ ಎಂದರು.
ಯುದ್ದ ಸೇರಿದಂತೆ ತುರ್ತು ಸಂದರ್ಭದಲ್ಲಿ ಎಲ್ಲರೂ ಸ್ಪಂದಿಸಬೇಕು. ದೇಶದ ಜೊತೆ ಎಲ್ಲರೂ ಒಟ್ಟಾಗಿ ನಿಲ್ಲಬೇಕು. ಕರ್ನಾಟಕ ಸರ್ಕಾರ ಕೂಡ ಸ್ಪಂದಿಸಬೇಕು. ಯುದ್ದ ನಿಲ್ಲುವ ಬಗ್ಗೆ ಸ್ಪಷ್ಟತೆ ಇಲ್ಲ ಭಾರತ ಸರ್ಕಾರ ಜನಪರ ನಿಂತಿದೆ ಎಂದು ತಿಳಿಸಿದರು.
Key words: LPG Cylender, Middle East, Union Minister, Shobha Karandlaje
The post ಶೇ 80ರಿಂದ 90 ರಷ್ಟು ಇಂಧನ ಮಧ್ಯಪ್ರಾಚ್ಯದಿಂದ ಬರಬೇಕಿದೆ: ಗ್ಯಾಸ್ ಪೂರೈಕೆ ನಮ್ಮ ಆದ್ಯತೆ- ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





