19
March, 2026

A News 365Times Venture

19
Thursday
March, 2026

A News 365Times Venture

ಚುನಾವಣಾ ವಿಚಾರ ಸಿಎಂ ಕಚೇರಿಯಲ್ಲಿ ಚರ್ಚಿಸಿದ್ದು ತಪ್ಪು – ಆರ್.ಅಶೋಕ್

Date:

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಟಿಕೆಟ್   ಕುರಿತ ವಿಚಾರವನ್ನ ಸಿಎಂ ಸಿದ್ದರಾಮಯ್ಯ ಸಿಎಂ ಕಚೇರಿಯಲ್ಲಿ ಚರ್ಚೆ ನಡೆಸಿದ ಹಿನ್ನೆಲೆಯಲ್ಲಿ ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಆರ್.ಅಶೋಕ್, ಚುನಾವಣಾ ವಿಚಾರವನ್ನ ಸಿಎಂ ಕಚೇರಿಯಲ್ಲಿ ಚರ್ಚೆ ಮಾಡಿದ್ದು ತಪ್ಪು. ಸಿಎಂ ಸಿದ್ದರಾಮಯ್ಯಗೆ ಮರೆವು ಜಾಸ್ತಿಯಾದಂತಿದೆ. ಸಿಎಂ ಸಿದ್ದರಾಮಯ್ಯಗೆ ಏನು ಒತ್ತಡ ಇದೆಯೋ ಏನೋ ಎಂದು ವ್ಯಂಗ್ಯವಾಡಿದರು.

ತಮ್ಮ ಪದವಿಯನ್ನು ಸಿಎಂ ಸಿದ್ದರಾಮಯ್ಯ ಅವರೇ ದುರ್ಬಳಕೆ ಮಾಡಿಕೊಂಡಿದ್ದಾರೆ. ಚುನಾವಣೆ ಬಗ್ಗೆ  ಮಾತನಾಡಲು ಪಕ್ಷದ ಕಚೇರಿ ಇದೆ.  ಅಧ್ಯಕ್ಷರಿದ್ದಾರೆ.  ಸಿಎಂ ಕೊಠಡಿಯಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದು ತಪ್ಪು ಎಂದು ಆರ್. ಅಶೋಕ್ ಕುಟುಕಿದರು.

ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಟಿಕೆಟ್ ಗಾಗಿ ದಿವಂಗತ ಎಚ್.ವೈ ಮೇಟಿ ಅವರ ಮಕ್ಕಳ ನಡುವೆ ಪೈಪೋಟಿ ಏರ್ಪಟ್ಟ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಿಎಂ ಕಚೇರಿಯಲ್ಲಿ ಮೂವರ ಜೊತೆ ಈ ಬಗ್ಗೆ ಚರ್ಚೆ ನಡೆಸಿದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ನಡೆಗೆ ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

Key words: discuss, election issue , CM’s office, CM Siddaramaiah, R. Ashok

 

The post ಚುನಾವಣಾ ವಿಚಾರ ಸಿಎಂ ಕಚೇರಿಯಲ್ಲಿ ಚರ್ಚಿಸಿದ್ದು ತಪ್ಪು – ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ...

എല്‍.ഡി.എഫിനും യു.ഡി.എിനും ഭൂരിപക്ഷം ലഭിക്കില്ല; കേരളത്തിന്റെ ഭാവി ബി.ജെ.പി തീരുമാനിക്കും: കെ. സുരേന്ദ്രന്‍

കോഴിക്കോട്: ഇത്തവണത്തെ നിയമസഭാ തെരഞ്ഞെടുപ്പില്‍ ബി.ജെ.പി നിര്‍ണായക ശക്തിയാകുമെന്ന് മുന്‍ പാര്‍ട്ടി...

Off The Record: తెలంగాణ కేబినెట్ విస్తరణకు ముహూర్తం ఫిక్స్?

Off The Record: తెలంగాణ కాంగ్రెస్‌లో ఇప్పుడు ఎవర్ని కదిలించినా ఒకటే...