27
August, 2026

A News 365Times Venture

27
Thursday
August, 2026

A News 365Times Venture

ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್: ಜನಪ್ರತಿನಿಧಿಗಳ ಮಾತಿಗೂ ಸ್ಪಂದನೆ ಇಲ್ಲ- ಸಂಸದ ಯದುವೀರ್ ಕಿಡಿ

Date:

ಮೈಸೂರು,ಏಪ್ರಿಲ್,7,2026 (www.justkannada.in):  ಚಾಮುಂಡಿ ಬೆಟ್ಟದಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಸ್ಥಳೀಯ ನಿವಾಸಿಗಳ ಭಾವನೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು  ಚಾಮುಂಡಿ ಬೆಟ್ಟ ಪ್ರಾಧಿಕಾರದ ವಿರುದ್ಧ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಿಡಿಕಾರಿದರು.

ಇಂದು ಮಾತನಾಡಿದ ಸಂಸದ ಯದುವೀರ್, ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ವಿಚಾರ ನ್ಯಾಯಾಲಯದಲ್ಲಿದೆ. ಚಾಮುಂಡಿ ಬೆಟ್ಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಯಾರ ಮಾತಿಗೂ ಬೆಲೆ‌ ಕೊಡುತ್ತಿಲ್ಲ. ಈ ಬಗ್ಗೆ ವ್ಯಾಪಕ ದೂರುಗಳು‌ ಕೇಳಿ ಬಂದಿವೆ. ಸ್ಥಳೀಯ ಆಡಳಿತ ಹಾಗೂ ಅಲ್ಲಿನ ನಿವಾಸಿಗಳ ಮಾತಿಗೂ ಪ್ರಾಧಿಕಾರದ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ಸ್ಥಳೀಯ ನಿವಾಸಿಗಳ ಸಮಸ್ಯೆಗೂ ಸ್ಪಂದಿಸುತ್ತಿಲ್ಲ ಎಂದು ಹರಿಹಾಯ್ದರು.

ಮೈಸೂರಿನ ವಿವಿಧೆಡೆಗಳಲ್ಲಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಂಸದ‌ ಯದುವೀರ್, ಮೈಸೂರಿ ಹಲವೆಡೆ ಎಲ್ಲೆಂದರಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವುದಕ್ಕೆ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಈ ರೀತಿ ಅವೈಜ್ಞಾನಿಕವಾಗಿ ಸಿಗ್ನಲ್ ಲೈಟ್ ಅಳವಡಿಸಲು ಯಾರು ಅನುನತಿ ನೀಡಿದರೋ ಗೊತ್ತಿಲ್ಲ. ಕೆಲವೇ ಮೀಟರ್ ಅಂತರದಲ್ಲಿ ಸಿಗ್ನಲ್ ಲೈಟ್ ಅಳವಡಿಸಿರುವ ಕಾರಣ ವಾಹ‌ನ ಸವಾರರಿಗೆ ತೊಂದರೆ ಆಗುತ್ತಿದೆ. ರಸ್ತೆಯಲ್ಲಿ ಸಂಚರಿಸಲು ಅನಗತ್ಯವಾಗಿ ವಿಳಂಬ ಆಗುತ್ತಿದೆ. ಸಿಗ್ನಲ್‌ ಲೈಟ್ ಅಳವಡಿಕೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಹೇಳಿದರು.

ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್

ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಬೆಲೆ ಇಲ್ಲದಂತಾಗಿದೆ. ಸರ್ಕಾರಿ ಅಧಿಕಾರಿಗಳ ಕಾರ್ಯ ವೈಖರಿ ಸರಿಯಿಲ್ಲ. ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಾಗಿದೆ. ಆದರೆ ಇಲ್ಲಿ ಅಧಿಕಾರಿಗಳ ದರ್ಬಾರು ನಡೆಯುತ್ತಿದೆ. ಜನಪ್ರತಿನಿಧಿಗಳ ಮಾತಿಗೆ ಅಧಿಕಾರಿಗಳು ಕಿವಿಕೊಡುತ್ತಿಲ್ಲ. ಜನಪ್ರತಿನಿಧಿಗಳ ಮನವಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಸಂಸದ ಯದುವೀರ್ ಅಸಮಾಧಾನ ವ್ಯಕ್ತಪಡಿಸಿದರು.

Key words: Officers, No response, public, representatives, Mysore MP, Yaduveer

The post ಸಿಎಂ ತವರಲ್ಲಿ ಅಧಿಕಾರಿಗಳ ದರ್ಬಾರ್: ಜನಪ್ರತಿನಿಧಿಗಳ ಮಾತಿಗೂ ಸ್ಪಂದನೆ ಇಲ್ಲ- ಸಂಸದ ಯದುವೀರ್ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ...

മാഡിസണ്‍ സ്‌ക്വയറില്‍ ആര്‍.എസ്.എസ് വേണ്ട; ന്യൂയോര്‍ക്കിൽ 48 സംഘടനകളുടെ സംയുക്ത യോഗം

ന്യൂയോര്‍ക്ക്: ന്യൂയോര്‍ക്കില്‍ ആര്‍.എസ്.എസ് തലവന്‍ മോഹന്‍ ഭാഗവത് പങ്കെടുക്കുന്ന പരിപാടി നിര്‍ത്തിവയ്ക്കണമെന്ന്...

குப்பை இருக்கும் இடம் தேடி… மதுரையை மாற்ற, களத்தில் இறங்கிய மாநகராட்சி ஆணையர் | Photo Album

மதுரை: விபத்தில் உயிரிழந்த காவலர்; குடும்பத்துக்காக ஒன்றிணைந்து ரூ.22 லட்சம் திரட்டிய...

Nepal Floods: నేపాల్ వరదలపై తెలంగాణ ప్రభుత్వం అలర్ట్.. సీఎం రేవంత్‌ ఆదేశాలతో ప్రత్యేక హెల్ప్‌లైన్ ఏర్పాటు

Nepal Floods: నేపాల్‌లో వరదలకు సంబంధించిన దృశ్యాలు చూస్తేనే షాక్‌ అయ్యే...