17
April, 2026

A News 365Times Venture

17
Friday
April, 2026

A News 365Times Venture

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ

Date:

ಮೈಸೂರು, ಏಪ್ರಿಲ್,15,2026 (www.justkannada.in): ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ವಿಧಾನಪರಿಷತ್ ಶಾಸಕ ಡಾ: ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು‌ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು, ಅಧಿಕಾರಿಗಳು ಈಗಾಗಲೇ‌ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳನ್ನು ಗುರುತಿಸಿರುತ್ತೀರಿ, ಈ ಗ್ರಾಮಗಳಿಗೆ ನಿಗದಿತವಾಗಿ ಭೇಟಿ ನೀಡಿ ಕುಡಿಯುವ ನೀರಿನ ಸ್ಥಿತಿ ಗತಿಗಳನ್ನು ತಿಳಿದುಕೊಂಡು ಅಗತ್ಯ ವ್ಯವಸ್ಥೆ ಮಾಡಿ ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಕಾರ್ಯನಿರ್ವಹಣೆಯ ಬಗ್ಗೆ ಪರಿಶೀಲನೆ ನಡೆಸಿ, ಯಾವುದಾದರೂ ತೊಂದರೆ ಇದ್ದಲ್ಲಿ ಸರಿಪಡಿಸಿಕೊಳ್ಳಿ, ಖಾಸಗಿ ಬೋರ್ ವೆಲ್ ಗಳ ಪಟ್ಟಿ ಹಾಗೂ ಟ್ಯಾಂಕರ್ ಗಳ  ಮೂಲಕ ನೀರು ಸರಬರಾಜು ಮಾಡಬೇಕಿರುವ ಗ್ರಾಮಗಳನ್ನು ಪಟ್ಟಿ‌ ಮಾಡಿಕೊಂಡು ಯೋಜನೆ ರೂಪಿಸಿಕೊಳ್ಳಿ ಎಂದರು.

ಕುಡಿಯುವ ನೀರಿನ ಯೋಜನೆಗಳಿಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಅಥವಾ ಯಾವುದೇ ತೊಂದರೆ  ಇದ್ದಲ್ಲಿ ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಮೊದಲ ಆದ್ಯತೆ ನೀಡಿ ಪರಿಹರಿಸಬೇಕು ಎಂದರು.

ಸಭೆಯ ನಂತರ ಸಾರ್ವಜನಿಕರು, ಸ್ಮಶಾನಕ್ಕೆ ಸ್ಥಳ, ಹಕ್ಕು ಪತ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಸಮಸ್ಯೆಗಳ ಬಗ್ಗೆ ಕುಂದು ಕೊರತೆಗಳನ್ನು ಸಲ್ಲಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Key words: drinking water, problems, MLC, Dr. Yathindra Siddaramaiah

The post ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಿ: MLC ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ആർ.എസ്.എസ് നൂറാം വാർഷികത്തിന് പൊതു ഖജനാവിൽ നിന്നും ചെലവാക്കിയത് 76.13 ലക്ഷം

ന്യൂദൽഹി: ആർ.എസ്.എസ് ജന്മ ശതാബ്‌ദി ആഘോഷങ്ങൾക്ക് പൊതു ഖജനാവിൽ നിന്നും ചെലവാക്കിയത്...

20 பேர் பலியான சத்தீஸ்கர் ஆலை விபத்து: வேதாந்தா நிறுவனர் அனில் அகர்வால் மீது வழக்குப் பதிவு!

சத்தீஸ்கர் மாநிலத்தின் சக்தி மாவட்டத்தில் அமைந்துள்ள வேதாந்தா மின் நிலையத்தின் கொதிகலனில்...

ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಸಜೀವ ದಹನ

ಯಾದಗಿರಿ,ಏಪ್ರಿಲ್,17,2026 (www.justkannada.in): ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ...