27
June, 2026

A News 365Times Venture

27
Saturday
June, 2026

A News 365Times Venture

ಸೆಸ್ಕ್‌ ನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Date:

ಮೈಸೂರು, ಮೇ ,11, 2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್​​ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)ದಿಂದ 2026-27ನೇ ಸಾಲಿನ ಇಂಜಿನಿಯರಿಂಗ್‌ ಪದವೀಧರರು, ತಾಂತ್ರಿಕ ಪದವಿ, ಡಿಪ್ಲೊಮಾ ಮತ್ತು ಇತರೆ ಪದವೀಧರರಿಗೆ ಅಪ್ರೆಂಟಿಸ್ ತರಬೇತಿಗೆ​ ಅರ್ಜಿ ಆಹ್ವಾನಿಸಲಾಗಿದೆ.

ಅಪ್ರೆಂಟಿಸ್‌ ತರಬೇತಿಯ ಒಟ್ಟು 200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇಂಜಿನಿಯರಿಂಗ್‌ ​ಪದವಿ ಹೊಂದಿರುವ 80 ಹುದ್ದೆಗಳು, ಡಿಪ್ಲೊಮಾ ಪದವೀಧರರು 55 ಹಾಗೂ ಇತರೆ ಪದವಿ ಹೊಂದಿರುವ 65 ಅಪ್ರೆಂಟಿಸ್‌ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಲಾಗುವುದು. ಈ ಅವಧಿಯಲ್ಲಿ ಗೌರವಧನ ನೀಡಲಾಗುತ್ತದೆ.

ತರಬೇತಿಯಲ್ಲಿ ಇಂಜಿನಿಯರಿಂಗ್ ಅಪ್ರೆಂಟಿಸ್​ ಹುದ್ದೆಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್​ ಮತ್ತು ಎಲೆಕ್ಟ್ರಾನಿಕ್ಸ್ ಹಾಗೂ ಸಿವಿಲ್​ ಇಂಜಿನಿಯರಿಂಗ್​ ವಿಷಯದಲ್ಲಿ ಪದವಿ ಹೊಂದಿರಬೇಕು. ಡಿಪ್ಲೊಮಾ ಅಪ್ರೆಂಟಿಸ್​ ಹುದ್ದೆಗೆ ಎಲೆಕ್ಟ್ರಿಕಲ್​ ಮತ್ತು ಎಲೆಕ್ಟ್ರಾನಿಕ್ಸ್​ ಹಾಗೂ ಸಿವಿಲ್​ ಇಂಜಿನಿಯರಿಂಗ್​ ಡಿಪ್ಲೊಮಾ ಪದವಿ ಪಡೆದಿರಬೇಕು. ಪದವೀಧರ ಅಪ್ರೆಂಟಿಸ್​ ಹುದ್ದೆಗೆ ಬಿಕಾಂ, ಬಿಬಿಎ, ಬಿಸಿಎ, ಬಿಎ, ಬಿಎಸ್ಸಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2022, 2023, 2024, 2025 ಮತ್ತು 2026ನೇ ಸಾಲಿನಲ್ಲಿ ಉತ್ತೀರ್ಣರಾದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ.

ಅಭ್ಯರ್ಥಿಗಳು ಆನ್‌ ಲೈನ್‌ ಅಪ್ಲಿಕೇಷನ್‌ ಸಲ್ಲಿಸಲು ಮೇ 8ರಿಂದ  ಪ್ರಕ್ರಿಯೆ ಆರಂಭವಾಗಿದ್ದು, ಮೇ 29 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಾವಿಸನಿನಿಯ ಅಧಿಕೃತ ವೆಬ್‌ಸೈಟ್‌ https://cescmysore.karnataka.gov.in (ಪ್ರಕಟಣೆಗಳು/ಪ್ರಕಟಣೆಗಳು 2026-27/ನಲ್ಲಿ ಕ್ಲಿಕ್‌ ಮಾಡಿ) ಮಾಹಿತಿ ಪಡೆಯಬಹುದಾಗಿದೆ.

Key words: Applications, invited, apprentice, CESC

The post ಸೆಸ್ಕ್‌ ನಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ജനങ്ങളുടെ വിശ്വാസം വെച്ച് കളിക്കരുത്; ഫണ്ട് തട്ടിപ്പുമായി ബന്ധപ്പെട്ട പ്രതിപക്ഷ ആരോപണങ്ങള്‍ രാഷ്ട്രീയ ലാഭത്തിനെന്ന് യോഗി

ന്യൂദല്‍ഹി: അയോധ്യ രാമക്ഷേത്ര ഫണ്ട് തട്ടിപ്പ് കേസില്‍ പ്രതിപക്ഷത്തിനെതിരെ യു.പി മുഖ്യ...

வெங்கட நாராயணா நியமனம்: 'மேகதாது அணைக்கு எதிராகப் போராடுகையில், கர்நாடகாவைச் சேர்ந்தவரே.!' – சீமான்

ஜனநாயகன் திரைப்படத்தின் தயாரிப்பாளர் வெங்கட நாராயணா . இவரை தமிழ்நாட்டின் டெல்லி...

Ketan Murder Case: కేతన్ హత్య కేసులో కొత్త ట్విస్ట్.. ఇద్దరు తల్లుల మధ్య మాటల యుద్ధం!

Ketan Agarwal Murder Case: పుణెలో సంచలనం సృష్టించిన కేతన్ అగర్వాల్...

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ...