19
May, 2026

A News 365Times Venture

19
Tuesday
May, 2026

A News 365Times Venture

ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC

Date:

ಬೆಂಗಳೂರು,ಮೇ,18,2026 (www.justkannada.in):  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮೇ 20ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.

ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಪ್ರತಿಭಟನೆ ಹಾಗೂ ಮುಷ್ಕರಕ್ಕೆ ಕರೆ ನೀಡಿದ್ದು ಮುಷ್ಕರ ನಡೆದರೆ ಸರ್ಕಾರಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಕೆಎಸ್‌ ಆರ್‌ಟಿಸಿ  ಎಂ.ಡಿ ಅಕ್ರಂ ಪಾಷಾ ಶಾಕ್ ನೀಡಿದ್ದು ಮುಷ್ಕರದಲ್ಲಿ ಭಾಗಿಯಾಗುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

ಮುಷ್ಕರದ ದಿನದಂದು ಕರ್ತವ್ಯಕ್ಕೆ ಗೈರುಹಾಜರಾಗುವ ನೌಕರರಿಗೆ  ‘ನೋ ವರ್ಕ್ ನೋ ಪೆ’ ಆದೇಶ ಜಾರಿ ಮಾಡಲಿದ್ದಾರೆ. ಅಂದರೆ ಅಂದು ಯಾವುದೇ ವೇತನವನ್ನು ನೀಡಲಾಗುವುದಿಲ್ಲ. ಸಾರ್ವಜನಿಕ ಸಾರಿಗೆಗೆ ಅಡ್ಡಿಪಡಿಸುವುದು ಅಥವಾ ನಿಯಮ ಉಲ್ಲಂಘಿಸಿ ಮುಷ್ಕರದಲ್ಲಿ ಭಾಗಿಯಾಗುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ಧ ಇಲಾಖಾ ಮಟ್ಟದ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಕ್ರಂಪಾಷ ತಿಳಿಸಿದ್ದಾರೆ.

ಮುಷ್ಕರದ ಅವಧಿಯಲ್ಲಿ ಯಾವುದೇ ರೀತಿಯ ಮುಂಗಡ ರಜೆಗಳನ್ನು ಮಂಜೂರು ಮಾಡದಂತೆ ಮತ್ತು ಈಗಾಗಲೇ ರಜೆ ಪಡೆದಿರುವವರ ರಜೆಯನ್ನು (ಅತ್ಯಗತ್ಯ ಸಂದರ್ಭಗಳನ್ನು ಹೊರತುಪಡಿಸಿ) ರದ್ದುಗೊಳಿಸುವಂತೆ ಅಧಿಕಾರಿಗಳಿಗೆ  ಎಂ.ಡಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.

Key words: Transport, employees, strike, KSRTC

The post ಮೇ 20ರಂದು ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ: ಕಠಿಣ ಕ್ರಮಕ್ಕೆ ಮುಂದಾದ KSRTC appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനെതിരായ എണ്ണ ഉപരോധത്തില്‍ ഇളവ് വരുത്താമെന്ന് സമ്മതിച്ച് യു.എസ്: പാക് മധ്യസ്ഥതയില്‍ 14 ഇന നിര്‍ദേശങ്ങള്‍ വെച്ച് ഇറാന്‍

ഇസ്താംബുള്‍: ഇറാന്റെ എണ്ണ മേഖലയ്ക്ക് മേലുള്ള കടുത്ത ഉപരോധങ്ങള്‍ താത്ക്കാലികമായി ഒഴിവാക്കാന്‍...

”கொளத்தூர் மக்கள் நன்றி மறந்தவர்கள்; திருச்சி கிழக்கில்..!” – அனிதா ராதாகிருஷ்ணன்

நடந்து முடிந்த சட்டமன்ற தேர்தலில் திருச்செந்தூர் சட்டமன்ற தொகுதியில் தொடர்ந்து 7வது...

Water Board Manager: జలమండలి మేనేజర్ ఇంట్లో ఏసీబీ దాడులు.. రూ.100 కోట్లకు పైగా ఆస్తులు గుర్తింపు!

హైదరాబాద్ జలమండలిలో మేనేజర్‌గా పనిచేస్తున్న అనంత లక్ష్మి కుమార్ ఇంటిపై అవినీతి...

ನಾಳಿನ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್

ಬೆಂಗಳೂರು,ಮೇ,19,2026 (www.justkannada.in): ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾಸಮಿತಿ...