28
June, 2026

A News 365Times Venture

28
Sunday
June, 2026

A News 365Times Venture

ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ

Date:

ಬೆಂಗಳೂರು,ಜೂನ್,5,2026 (www.justkannada.in):  ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ ನಲ್ಲಿ 200ಕ್ಕೂ ಹೆಚ್ಚು ಮಂದಿ ಜಮಾಯಿಸಿ ಪ್ರತಿಭಟನೆ ನಡೆಸಿದ್ದು “ಜಮೀರ್ ಅಹ್ಮದ್ ಖಾನ್ ಅವರಿಗೆ ನ್ಯಾಯ ಕೊಡಬೇಕು”, ಸಚಿವ ಸ್ಥಾನ ನೀಡಬೇಕು. ಡಿಸಿಎಂ ಸ್ಥಾನ ನೀಡಬೇಕು ಎಂಬ ಘೋಷಣೆ ಕೂಗಿದರು.

ಪ್ರತಿಭಟನಾಸ್ಥಳದಲ್ಲಿ ಹೈಡ್ರಾಮಾ ನಡೆದಿದ್ದು ಬಿಎಂಟಿಸಿ ಬಸ್ ಗೆ ಅಡ್ಡಲಾಗಿ ಕೂತು ರಸ್ತೆ ಮಧ್ಯದಲ್ಲಿ ಕುಳಿತು ಪ್ರತಿಭಟನಾಕಾರರು ಧರಣಿ ನಡೆಸಿದರು. ಷಡ್ಯಂತ್ರ ಮಾಡಿ ಸಚಿವ ಸ್ಥಾನ ಕೈತಪ್ಪಿಸಿದ್ದಾರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮುಸ್ಲೀಂ ಸಮುದಾಯ ಮತ ಹಾಕಲ್ಲ. 2ನೇ ಪಟ್ಟಿಯನ್ನ ನೋಡಿ ಮುಂದಿನ ನಿರ್ಧಾರ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.

ಜಮೀರ್ ಅಹ್ಮದ್ ಖಾನ್ ಅವರಿಗೆ ಸಚಿವ ಸ್ಥಾನ ನೀಡುವಂತೆ  ಆಗ್ರಹಿಸಿ ವಿಜಯನಗರದಲ್ಲೂ ಪ್ರತಿಭಟನೆ ನಡೆದಿದೆ. ಹೊಸಪೇಟೆಯ ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಪ್ರತಿಭಟನೆ  ನಡೆಸಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Demand, ministerial post, Zameer Ahmed Khan, Protest

The post ಜಮೀರ್ ಅಹ್ಮದ್ ಖಾನ್ ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ಬೆಂಬಲಿಗರಿಂದ ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Pawan Kalyan: వైసీపీకి పవన్ కల్యాణ్ స్ట్రాంగ్ వార్నింగ్.. మౌనం బలహీనత కాదు..!

Pawan Kalyan: జనసేన పార్టీ సంస్థాగత బలోపేతంపై దృష్టి సారిస్తూ పార్టీ...

ಚಂಗ್ಲು ತರ ಆಡ್ತಿರೋ ಕೇಂದ್ರ ಸಚಿವ ಎಚ್ಡಿಕೆ; ಶಾಸಕ ಉದಯ್

ಮಂಡ್ಯ,ಜೂನ್,27,2026 (www.justkannada.in): ಬಿಡದಿ ಟೌನ್‌ ಶಿಪ್ ಯೋಜನೆ ವಿಚಾರವಾಗಿ ರಾಜಕೀಯ...

അയോധ്യ ക്ഷേത്രക്കൊള്ള: ഇപ്പോള്‍ മോദിക്കും യോഗിക്കും ഒച്ചയില്ലേ, എന്തേ മൗനം? രൂക്ഷവിമര്‍ശനവുമായി പ്രിയങ്ക് ഖാര്‍ഗെ

ബെംഗളൂരു: അയോധ്യയിലെ രാമക്ഷേത്ര നിര്‍മാണത്തിനായി ഭക്തര്‍ നല്‍കിയ സംഭാവനകളില്‍ വന്‍ സാമ്പത്തിക...