ಮಂಡ್ಯ,ಜೂನ್,11,2026 (www.justkannada.in): ಆರೋಪಿಯೊಬ್ಬರ ಬಳಿ 10 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಹಾಯಕ ಎಎಸ್ ಐ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಳವಳ್ಳಿಯಲ್ಲಿ ನಡೆದಿದೆ.
ಮಳವಳ್ಳಿ ಗ್ರಾಮಾಂತರ ಠಾಣೆ ಸಹಾಯಕ ಸಬ್ ಇನ್ ಸ್ಪೆಕ್ಟರ್ ಶಿವಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು. ಆರೋಪಿಯೊಬ್ಬನನ್ನು ‘ಸ್ಟೇಷನ್ ಬೇಲ್’ ಮೇಲೆ ಬಿಡುಗಡೆ ಮಾಡಲು 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದಿದ್ದಾರೆ.
ಗಲಾಟೆ ಪ್ರಕರಣದಲ್ಲಿ ಮಳವಳ್ಳಿ ರಾಜೇಗೌಡ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಠಾಣೆಯಲ್ಲೇ ಜಾಮೀನು ನೀಡುವ ಮೂಲಕ ಪ್ರಕರಣ ಇತ್ಯರ್ಥಗೊಳಿಸುತ್ತೇವೆ ಎಂದು ಎಎಸ್ ಐ ಶಿವಕುಮಾರ್ ಕರೆ ಮಾಡಿ ರಾಜೇಗೌಡ ಅವರಿಗೆ ಆಮಿಷ ಒಡ್ಡಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಮಧ್ಯೆ ರಾಜೇಗೌಡ ಕರೆಯನ್ನು ರೆಕಾರ್ಡ್ ಮಾಡಿಕೊಂಡಿದ್ದು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ನಿನ್ನೆ ರಾತ್ರಿ ಪೊಲೀಸ್ ಠಾಣೆಯಲ್ಲೇ ಲಂಚ ಪಡೆಯುವ ವೇಳೆ ಎಎಸ್ ಐ ಶಿವಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
Key words: ASI, caught, Lokayukta, trap, bribe, Mandya
The post ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ASI appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





