28
June, 2026

A News 365Times Venture

28
Sunday
June, 2026

A News 365Times Venture

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

Date:

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್,  ಸರ್ಕಾರ ಬದಲಾದರೂ..ಆರೋಗ್ಯ ಸಚಿವರು ಬದಲಾದರೂ… ಆರೋಗ್ಯ ಇಲಾಖೆಯ ಹಣೆಬರಹ ಮಾತ್ರ ಬದಲಾಗಲಿಲ್ಲ! ಮುಖ್ಯಮಂತ್ರಿ ಬದಲಾದರು. ಆರೋಗ್ಯ ಸಚಿವರು ಬದಲಾದರು. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ಆಡಳಿತ ಮಾತ್ರ ಬದಲಾಗಲಿಲ್ಲ! ಇಂದು ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ ಎಂದು ಕಿಡಿಕಾರಿದ್ದಾರೆ.

35,196 ಹುದ್ದೆಗಳು ಖಾಲಿ!

ಜೀವ ಉಳಿಸಬೇಕಾದ ಇಲಾಖೆಯಲ್ಲೇ ಬರೋಬ್ಬರಿ 35,196 ಹುದ್ದೆಗಳು ಖಾಲಿ ಇವೆ. ಸರ್ಕಾರಿ ಆಸ್ಪತ್ರೆಗಳು ಕೇವಲ ಹೆಸರಿಗಷ್ಟೇ ಉಳಿದಿದ್ದು, ಸಮಸ್ಯೆಗಳ ಆಗರಗಳಾಗಿವೆ. ರಾತ್ರಿ ವೇಳೆ ತುರ್ತು ಚಿಕಿತ್ಸೆಗೆ ಬರುವ ರೋಗಿಗಳನ್ನು ನೋಡಿಕೊಳ್ಳುವವರೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕನಿಷ್ಠ ಪ್ಯಾರಾಸಿಟಮಾಲ್ ಮಾತ್ರೆಗಳೂ ಸಿಗದೆ ಬಡ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ ಎಂದು ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ನಮ್ಮ ಕ್ಲಿನಿಕ್’ ಸಿಬ್ಬಂದಿಗೆ ಮೂರು ತಿಂಗಳಿಂದ ವೇತನವೇ ಇಲ್ಲ!

ಬಡವರು ಹಾಗೂ ಕೂಲಿ ಕಾರ್ಮಿಕರ ಆರೋಗ್ಯ ರಕ್ಷಣೆಗಾಗಿ ಆರಂಭವಾಗಿದ್ದ ‘ನಮ್ಮ ಕ್ಲಿನಿಕ್’ ಯೋಜನೆಗೂ ಕಾಂಗ್ರೆಸ್ ಸರ್ಕಾರ ಗರ ಬಡಿದಿದೆ. ಹಗಲಿರುಳು ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್‌ಗಳು ಹಾಗೂ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನವನ್ನೇ ನೀಡಿಲ್ಲ! ದುಡಿಯುವ ಕೈಗಳಿಗೆ ಸಂಬಳ ಕೊಡಲೂ ಸಾಧ್ಯವಾಗದ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಾದರೂ ಇದೆಯೇ?

ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ! ಎಂದು ಅಶೋಕ್ ಟೀಕಿಸಿದ್ದಾರೆ.

ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರೇ, ತಕ್ಷಣವೇ 35,196 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ. ‘ನಮ್ಮ ಕ್ಲಿನಿಕ್’ ಸಿಬ್ಬಂದಿಯ ಬಾಕಿ ವೇತನವನ್ನು ಕೂಡಲೇ ಬಿಡುಗಡೆ ಮಾಡಿ. ಇಲ್ಲದಿದ್ದರೆ ಬಡವರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿರುವ ಈ ಜನವಿರೋಧಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಿದೆ ಎಂದು ಅಶೋಕ್ ಎಚ್ಚರಿಕೆ ನೀಡಿದ್ದಾರೆ.

Key words: Health Department, ICU, R. Ashok, criticizes

The post 35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രിയുടെ നിര്‍ദേശമില്ലാതെയാണ് വി.സി നിയമനമെന്ന് വിശ്വസിക്കുന്ന യു.ഡി.എഫ് അണികളും വിസ്മയത്തിന്റെ ഇരകള്‍: എസ്.എഫ്.ഐ

തിരുവനന്തപുരം: കാര്‍ഷിക സര്‍വകലാശാല വൈസ് ചാന്‍സിലറായി ബി.ജെ.പി അനുകൂല സംഘടനാ നേതാവിനെ...

Congress: மாணிக்கம் தாகூர் தலைவராக நியமனம்; தமிழ்நாடு காங்கிரஸ் கமிட்டியில் அதிரடி மாற்றம்!

தமிழ்நாடு காங்கிரஸ் தலைவராக மாணிக்கம் தாகூர் நியமிக்கப்பட்டுள்ளார். இதற்கு முன் செல்வப்பெருந்தகை...

Amaravati Tension: ఉండవల్లిలో హైటెన్షన్.. వైసీపీ నేతలపై కోడిగుడ్లు, రాళ్ల దాడి

Amaravati Tension: అమరావతి రాజధాని ప్రాంతంలో పర్యటించేందుకు వచ్చిన వైఎస్సార్ కాంగ్రెస్...

വിദ്യാര്‍ത്ഥി പ്രതിസന്ധിക്കും ചോദ്യപേപ്പര്‍ ചോര്‍ച്ചയ്ക്കുമെതിരെ കോണ്‍ഗ്രസിന്റെ ഘൊരാവോ; പാര്‍ലമെന്റ് വളയും

ന്യൂദല്‍ഹി: രാജ്യത്തെ വിദ്യാര്‍ത്ഥികളും യുവാക്കളും നേരിടുന്ന വിവിധ പ്രശ്‌നങ്ങള്‍ ഉയര്‍ത്തിക്കാട്ടുന്നതിനായി ‘ഛാത്രോം...