2
July, 2026

A News 365Times Venture

2
Thursday
July, 2026

A News 365Times Venture

ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜುಲೈ,2,2026 (www.justkannada.in):  ಬೆಂಗಳೂರು ದಕ್ಷಿಣ ಜಿಲ್ಲೆಯ ಮಾದಪಟ್ಟಣದಲ್ಲಿ ಕಲ್ಲುಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕ್ರಷರ್ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿರುವುದು ತೀವ್ರ ದುಃಖವನ್ನುಂಟು ಮಾಡಿದೆ.

ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ದಯಪಾಲಿಸಲಿ, ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ನೀಡಲಿ ಹಾಗೂ ಗಾಯಾಳುಗಳು ಶೀಘ್ರವೇ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು  ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

 ವರದಿ ತರಿಸಿಕೊಂಡು ಕ್ರಮ

ಘಟನೆ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್,  ಮಾಗಡಿ ರಸ್ತೆಯಲ್ಲಿ 2 ಕ್ವಾರಿಯಲ್ಲಿ ದುರಂತ ಸಂಭವಿಸಿದೆ. ಬಂಡೆ ಕುಸಿತವಾಗಿ 7 ಕಾರ್ಮಿಕರು ಮೃತಪಟ್ಟಿದ್ದಾರೆಂದು ಮಾಹಿತಿ ಬಂದಿದೆ.  ಮೃತದೇಹಗಳು ಸಿಕ್ಕಿವೆ.   ಸ್ಥಳಕ್ಕೆ ಅಧಿಕಾರಿಗಳೂ ಭೇಟಿ  ನೀಡಿದ್ದಾರೆ. ಅಲ್ಲಿ ಸ್ಪೋಟ ಆಗಿಲ್ಲ ಎಂದು ಗೊತ್ತಾಗಿದೆ ಮಧ್ಯಾಹ್ನ  ವರದಿ ತರಿಸಿಕೊಳ್ಳುವೆ. ಕ್ವಾರಿ ಲೀಗಲ್ ಅಥವಾ ಅಕ್ರಮವಾಗಿ ನಡೆಸುತ್ತಿದ್ದಾರಾ ಅಂತಾ ಗೊತ್ತಾಗಬೇಕು. ನಿಯಮ ಪಾಲಿಸಬೇಕಾಗಿದೆ ಯಶವಂತಪುರ ಶಾಸಕರು ಮಾಹಿತಿ ನೀಡಿದ್ದಾರೆ.  ರಿಪೋರ್ಟ್ ತರಿಸಿಕೊಂಡು ನಾನು ಕ್ರಮ ತೆಗದುಕೊಳ್ಳುತ್ತೇನೆ  ಎಂದು ಹೇಳಿದರು.

Key words: Condolences, Workers, died, quarry, action, CM, DK Shivakumar

The post ಕಲ್ಲುಕ್ವಾರಿ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ: ವರದಿ ಪಡೆದು ಸೂಕ್ತ ಕ್ರಮ – ಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

15 തവണ ജനപ്രതിനിധിയായവളെ തോല്‍പ്പിച്ച് ഫലസ്തീന്‍ അനുകൂല കുടിയേറ്റക്കാരി; കൊളറാഡോയില്‍ വന്‍ അട്ടിമറി

  കൊളറാഡോ: അമേരിക്കന്‍ രാഷ്ട്രീയത്തെ അമ്പരപ്പിച്ചുകൊണ്ട് കൊളറാഡോയിലെ ഡെമോക്രാറ്റിക് പ്രൈമറി തെരഞ്ഞെടുപ്പില്‍...

"தவெக செய்வது Horse Trading அல்ல, Horse Racing" – பிரவீன் சக்கரவர்த்தி விளக்கம்

கோவை விமான நிலையத்தில் காங்கிரஸ் கட்சியின் மாநிலங்களவை உறுப்பினர் பிரவீன் சக்கரவர்த்தி...

Rythu Bharosa: రైతులకు అలర్ట్.. నేడు మూడో విడత రైతు భరోసా నిధుల విడుదల!

Rythu Bharosa 3rd Installment Released Today: తెలంగాణ ప్రభుత్వం ‘రైతు...

ಸಚಿವ ಯತೀಂದ್ರ ಸಿದ್ದರಾಮಯ್ಯ ಅವರ ಸಚಿವಾಲಯದ ಕಚೇರಿ ಉದ್ಘಾಟನೆ

ಬೆಂಗಳೂರು, ಜುಲೈ,2,2026 (www.justkannada.in):  ನಗರಾಭಿವೃದ್ಧಿ ಸಚಿವ  ಡಾ. ಯತೀಂದ್ರ ಸಿದ್ದರಾಮಯ್ಯ...