12
July, 2026

A News 365Times Venture

12
Sunday
July, 2026

A News 365Times Venture

ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ

Date:

ಬೆಂಗಳೂರು,ಜುಲೈ,10,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಿದ್ದತೆ ಆರಂಭಿಸಿದ್ದು ಈ ನಡುವೆ ಅಕ್ಟೋಬರ್ 11 ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದೆ.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ  ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ದಸರಾ ಉದ್ಘಾಟನೆ, ಜಂಬೂಸವಾರಿ ಮೆರವಣಿಗೆ ದಿನಾಂಕ ಸಮಯ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದೆ.

ಅದರಂತೆ  ಅಕ್ಟೋಬರ್ 11ರಂದು ಚಾಮುಂಡಿಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂದು  ಬೆಳಿಗ್ಗೆ 11.50ಕ್ಕೆ ಶುಭ ಧನುರ್ ಲಗ್ನದಲ್ಲಿ ದಸರಾಗೆ ಚಾಲನೆ ದೊರೆಯಲಿದೆ.

ಇನ್ನು ಅಕ್ಟೋಬರ್ 21 ರಂದು ಮೈಸೂರು ದಸರಾ ಪ್ರಮುಖ ಆಕರ್ಷಣೆ ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದ್ದು ಅಂದು ಸಂಜೆ 4.10ರಿಂದ 4.35ರ ನಡುವೆ ತಾಯಿ ಚಾಮುಂಡೇಶ್ವರಿಗೆ ಸಿಎಂ  ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ಸಿಗಲಿದೆ.

Key words: High-level, meeting, Mysore Dasara, inauguration, Jambu Savari

The post ಉನ್ನತ ಮಟ್ಟದ ಸಭೆ: ಅ.11ಕ್ಕೆ ಮೈಸೂರು ದಸರಾ ಉದ್ಘಾಟನೆ, ಅ.21ಕ್ಕೆ ಜಂಬೂಸವಾರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒന്നുകില്‍ മാപ്പ്, അല്ലെങ്കില്‍ തെളിവ്; കുതിരക്കച്ചവട ആരോപണത്തില്‍ ഒമര്‍ അബ്ദുള്ളയ്‌ക്കെതിരെ ബി.ജെ.പി

ശ്രീനഗര്‍: നാഷണല്‍ കോണ്‍ഫറന്‍സ് എം.എല്‍.എമാരെ പണം നല്‍കി വശത്താക്കാന്‍ ശ്രമിച്ചെന്ന ജമ്മു...

'தவெக அரசு முடியும் போது கடன் 15 லட்சம் கோடியா இருக்கும், எழுதி வச்சுகோங்க' – மாநாட்டில் அண்ணாமலை

பாஜக முன்னாள் மாநில தலைவராக இருந்த அண்ணாமலை அக்கட்சியில் இருந்து விலகி...

ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ, ಡಿಕೆಶಿ ಟೆಂಡರ್ ಸಿಎಂ- ಆರ್.ಅಶೋಕ್ ವ್ಯಂಗ್ಯ

ಮೈಸೂರು,ಜುಲೈ,11,2026 (www.justkannada.in): ರಾಜ್ಯದಲ್ಲಿ ಇರೋದು ಟೆಂಡರ್ ಸರ್ಕಾರ. ಡಿಕೆ ಶಿವಕುಮಾರ್...