ನವದೆಹಲಿ,ಜುಲೈ,24,2026 (www.justkannada.in): ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ 26 ದಿನಗಳಿಂದ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ.
ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಹಿನ್ನೆಲೆಯಲ್ಲಿ ಸೋನಂ ವಾಂಗ್ಚುಕ್ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಮತ್ತು ಜೀತೇಂದ್ರ ಸಿಂಗ್ ಆಸ್ಪತ್ರೆಗೆ ಭೇಟಿ ನೀಡಿದ್ದು ಇಬ್ಬರು ಸಚಿವರು ನೀಡಿದ್ದ ಸೂಪ್ ಸೇವಿಸುವ ಮೂಲಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹಕ್ಕೆ ತೆರೆ ಎಳೆದಿದ್ದಾರೆ.
ಹಾಗೆಯೇ ಈ ಕುರಿತು ಟ್ವೀಟ್ ಮಾಡಿರುವ ಸೋನಂ ವಾಂಗ್ಚುಕ್, ಕೇಂದ್ರ ಲಿಖಿತ ಭರವಸೆ ಹಿನ್ನೆಲೆ ಉಪವಾಸ ಅಂತ್ಯಗೊಳಿಸಿದ್ದೇನೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ . ಈಗ ಹೊಣೆಗಾರಿಕೆ ಸಮಯ ಎಂದು ತಿಳಿಸಿದ್ದಾರೆ. ಹಾಗೆಯೇ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಳ್ಳದಂತೆ ಷರತ್ತು ವಿಧಿಸಿದ್ದಾರೆ.
Key words: Fast, ends, Sonam Wangchuk, message
The post ಕೇಂದ್ರ ಲಿಖಿತ ಭರವಸೆ ಹಿನ್ನೆಲೆ ಉಪವಾಸ ಅಂತ್ಯ- ಸೋನಂ ವಾಂಗ್ಚುಕ್ ಸಂದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





