ಬೆಂಗಳೂರು, ಆಗಸ್ಟ್, 18,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಎಸ್ ಸಿ ಅಧ್ಯಕ್ಷ ಶಿವಶಂಕರಪ್ಪರನ್ನು ಅಮಾನತು ಮಾಡಲಾಗಿದ್ದ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ರದ್ದುಮಾಡಿದೆ.
7 ದಿನಗಳಲ್ಲಿ ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಅವರನ್ನು ಮರುನೇಮಕ ಮಾಡುವಂತೆ ಹೈಕೋರ್ಟ್ ನ್ಯಾ.ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಕೆಪಿಎಸ್ಸಿ ಅಧ್ಯಕ್ಷರನ್ನು ಅಮಾನತುಗೊಳಿಸುವಂತೆ ಸಚಿವ ಸಂಪುಟ ಸಲಹೆ, ಶಿಫಾರಸು ಮಾಡಿಲ್ಲ. ರಾಜ್ಯಪಾಲರು ಸಚಿವ ಸಂಪುಟದ ತೀರ್ಮಾನವನ್ನಷ್ಟೇ ಅನುಸರಿಸಬೇಕು ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.
ಶಿವಶಂಕರಪ್ಪ ಸಾಹುಕಾರ್ ಪುತ್ರಿಯರ ನೇಮಕ ಸಂಬಂಧ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವಂತಿಲ್ಲ. ಕೆಪಿಎಸ್ ಸಿ ಅಧ್ಯಕ್ಷರ ವಿರುದ್ಧದ ಆರೋಪದ ಬಗ್ಗೆ ಕೋರ್ಟ್ ತೀರ್ಮಾನಿಸಿಲ್ಲ ಎಂದು ಏಕಸದಸ್ಯ ಪೀಠ ಸ್ಪಷ್ಟನೆಯನ್ನು ನೀಡಿದೆ. ಸಚಿವ ಸಂಪುಟದ ಘಟನೋತ್ತರ ಅನುಮೋದನೆ ಕಾನೂನುಬಾಹಿರವೆಂದು ಶಿವಶಂಕರಪ್ಪ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದಿಸಿದ್ದರು.
Key words: High Court, orders, reappointment, Shivashankarappa, KPSC Chairman
The post KPSC ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಮರುನೇಮಕಕ್ಕೆ ಹೈಕೋರ್ಟ್ ಆದೇಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





