9
September, 2026

A News 365Times Venture

9
Wednesday
September, 2026

A News 365Times Venture

ತೆರಿಗೆ ವಿನಾಯಿತಿ ಪಡೆದ ಸಂಸ್ಥೆಗಳಿಂದ ಸೇವಾ ಶುಲ್ಕ ಕಡ್ಡಾಯ ವಸೂಲಿಗೆ ಮೈಸೂರು ಪಾಲಿಕೆ ಆಯುಕ್ತರಿಂದ ಸೂಚನೆ

Date:

ಮೈಸೂರು,ಸೆಪ್ಟಂಬರ್,7,2026 (www.justkannada.in): ಮೈಸೂರು ಮಹಾನಗರ ಪಾಲಿಕೆಯ ಕಂದಾಯ ವಿಭಾಗದ ವತಿಯಿಂದ ಇಂದು ನಡೆದ ಕಂದಾಯ ಪರಿಶೀಲನಾ ಸಭೆಯಲ್ಲಿ, ಆಸ್ತಿ ತೆರಿಗೆಯಿಂದ ವಿನಾಯಿತಿ ಪಡೆದಿರುವ ವಿವಿಧ ಸಂಸ್ಥೆಗಳಿಂದ ಸೇವಾ ಶುಲ್ಕ ವಸೂಲಾತಿ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.

ಸರ್ಕಾರಿ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು ಹಾಗೂ ಇತರೆ ಅರ್ಹ ಸಂಸ್ಥೆಗಳಿಗೆ ನಿಯಮಾನುಸಾರ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡಲಾಗಿದ್ದರೂ, ಪಾಲಿಕೆಯಿಂದ ಒದಗಿಸಲಾಗುವ ನಾಗರಿಕ ಸೌಲಭ್ಯಗಳು ಹಾಗೂ ಸೇವೆಗಳಿಗೆ ಸಂಬಂಧಿಸಿದಂತೆ ಅನ್ವಯವಾಗುವ ಸೇವಾ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸಬೇಕಾಗುತ್ತದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಎಂ.ಕೆ ಸವಿತಾ ಅವರು  ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಇದುವರೆಗೆ ಆಸ್ತಿ ತೆರಿಗೆ ವಿನಾಯಿತಿ ಪಡೆದಿರುವ ಎಲ್ಲಾ ಸಂಸ್ಥೆಗಳ ವಿವರಗಳನ್ನು ವಲಯವಾರು ಪರಿಶೀಲಿಸಿ, ಅವರಿಗೆ ಅನ್ವಯವಾಗುವ ಸೇವಾ ಶುಲ್ಕವನ್ನು ನಿಗದಿಪಡಿಸಿ, ಬಾಕಿ ಉಳಿದಿರುವ ಮೊತ್ತವನ್ನು ಕಡ್ಡಾಯವಾಗಿ ವಸೂಲಿ ಮಾಡುವಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ತೆರಿಗೆ ವಿನಾಯಿತಿ ಪಡೆದಿರುವ ಸಂಸ್ಥೆಗಳ ಸಂಪೂರ್ಣ ಪಟ್ಟಿಯನ್ನು ಪುನರ್‌ಪರಿಶೀಲಿಸಿ, ಸೇವಾ ಶುಲ್ಕದ ಬಾಕಿ ಮೊತ್ತವನ್ನು ಗುರುತಿಸಿ, ಸಂಬಂಧಿಸಿದ ಸಂಸ್ಥೆಗಳಿಗೆ ಬೇಡಿಕೆ ನೋಟಿಸ್‌ಗಳನ್ನು ಜಾರಿಗೊಳಿಸಿ, ನಿಗದಿತ ಅವಧಿಯೊಳಗೆ ಶುಲ್ಕ ಪಾವತಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಸೇವಾ ಶುಲ್ಕ ವಸೂಲಾತಿಯಲ್ಲಿ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶ ನೀಡುವುದಿಲ್ಲ. ವಲಯವಾರು ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಬಾಕಿ ಮೊತ್ತದ ವಸೂಲಾತಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಪಾಲಿಕೆ ಆಯುಕ್ತೆ ಎಂ.ಕೆ ಸವಿತಾ ಅವರು ನಿರ್ದೇಶನ ನೀಡಿದ್ದಾರೆ.

Key words: MCC, Commissioner, collection,  service charges, tax exempted, organizations

The post ತೆರಿಗೆ ವಿನಾಯಿತಿ ಪಡೆದ ಸಂಸ್ಥೆಗಳಿಂದ ಸೇವಾ ಶುಲ್ಕ ಕಡ್ಡಾಯ ವಸೂಲಿಗೆ ಮೈಸೂರು ಪಾಲಿಕೆ ಆಯುಕ್ತರಿಂದ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KPSC ಹಗರಣ: ಜ್ಞಾನೇಂದ್ರ ಮತ್ತು ಕನ್ನಾಳೆಗೆ ನ್ಯಾಯಾಂಗ ಬಂಧನ

ಬೆಂಗಳೂರು,ಸೆಪ್ಟಂಬರ್,9,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಐಎಎಸ್...

വഖഫ് ബോര്‍ഡ്: ഇടത് സര്‍ക്കാരിന്റെ മൂന്ന് വീഴ്ചകള്‍ പ്രശ്‌നമായി; അവര്‍ തെറ്റിധാരണ പടര്‍ത്തുന്നു: നാസര്‍ ഫൈസി കൂടത്തായി

കോഴിക്കോട്‌: വഖഫ് ബോര്‍ഡ് ഭേദഗതിയെ ചെറുക്കാനുള്ള അവസരങ്ങള്‍ കഴിഞ്ഞ എല്‍.ഡി.എഫ് സര്‍ക്കാര്‍...

‘அதுவே பழகிடும்’ ஹார்முஸ் நீர்ச்சந்தி மூடலைப் பழகிக்கொண்ட உலக நாடுகள்; இப்போது எப்படி சமாளிக்கின்றன?

அமெரிக்காவும், இஸ்ரேலும் நவீன ஆயுதங்கள், தொழில்நுட்பம் மிகுந்த ஏவுகணைகளை வைத்து, ஈரானை...

Supreme Court: సీజేపీ నిరసనకారుడికి నోటీసు.. ఎగ్జిక్యూటివ్ మేజిస్ట్రేట్‌పై సుప్రీంకోర్టు ఆగ్రహం

ఢిల్లీ జంతర్‌మంతర్‌లో జరిగిన విద్యార్థుల నిరసనలకు సంబంధించి గౌతమ్ బుద్ధ యూనివర్సిటీకి...