8
September, 2026

A News 365Times Venture

8
Tuesday
September, 2026

A News 365Times Venture

ವಿದ್ಯುತ್ ನಿಗಮಕ್ಕೆ ಆರ್ಥಿಕ ನಷ್ಟ ಆರೋಪ: ನಾಲ್ವರು ಸಿಬ್ಬಂದಿ ಅಮಾನತು

Date:

ಮೈಸೂರು,ಸೆಪ್ಟಂಬರ್,8,2026 (www.justkannada.in):  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ (ಚಾವಿಸನಿನಿ) ಎನ್.ಆರ್.ಮೊಹಲ್ಲಾ ಶಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಹಾಯಕ ಇಂಜಿನಿಯರ್ ಕಿರಣ್,  ಸಹಾಯಕ ಇಂಜಿನಿಯರ್ ನಾಹೀದ ಅಂಜುಮ್, ಕಿರಿಯ ಇಂಜಿನಿಯರ್ ನಾಗೇಂದ್ರ ಹಾಗೂ ಮಾಪಕ ಓದುಗ ಅಪ್ಸರ್ ಪಾಷ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕೆಸರೆ ಬಡಾವಣೆಯ ವಾಣಿಜ್ಯ ಸ್ಥಾವರದ ವಿದ್ಯುತ್ ಸಂಪರ್ಕದಲ್ಲಿ ಜಕಾತಿ ಬದಲಾವಣೆ ಹಾಗೂ ಅಧಿಕ ಹೊರೆ ಮಂಜೂರಾತಿ ವೇಳೆ ಕಟ್ಟಡದ ವಿಸ್ತೀರ್ಣ ತಪ್ಪಾಗಿ ನಮೂದಿಸಿರುವುದು ಮತ್ತು ಗ್ರಾಹಕರಿಂದ ಮೀಟರ್ ಖರೀದಿಸದೇ ನಿಗಮದ ಮೀಟರ್ ಅಳವಡಿಸಿರುವ ಆರೋಪ ಕೇಳಿಬಂದಿತ್ತು.

ಜಾಗೃತದಳದ ವರದಿ ಆಧರಿಸಿ ನಡೆಸಿದ ಪರಿಶೀಲನೆಯಲ್ಲಿ ನಿಗಮದ ನಿಯಮ ಉಲ್ಲಂಘನೆ ಹಾಗೂ ಆರ್ಥಿಕ ನಷ್ಟ ಉಂಟುಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಶಿಸ್ತು ಕ್ರಮಕ್ಕೆ ಮುಂದಾಗಲಾಗಿದೆ.

ದಾಖಲೆಗಳು ಅಥವಾ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಹಿನ್ನೆಲೆಯಲ್ಲಿ ನಾಲ್ವರನ್ನೂ ತಕ್ಷಣದಿಂದಲೇ ಅಮಾನತುಗೊಳಿಸಿ, ಇಲಾಖಾ ವಿಚಾರಣೆಗೆ ಆದೇಶಿಸಲಾಗಿದೆ. ಅಮಾನತು ಅವಧಿಯಲ್ಲಿ ಜೀವನಾಧಾರ ಭತ್ಯೆ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತರಾಗಿರುವ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಬೆಸ್ಕಾಂಗೆ ವರ್ಗಾವಣೆಯಾಗಿರುವ ಸಹಾಯಕ ಇಂಜಿನಿಯರ್ ಕಿರಣ್ ವಿರುದ್ಧವೂ ಕ್ರಮಕ್ಕೆ ಸೂಚನೆ ನೀಡಲಾಗಿದೆ.

Key words: Four employees, suspended, financial loss, CESC, Mysore

The post ವಿದ್ಯುತ್ ನಿಗಮಕ್ಕೆ ಆರ್ಥಿಕ ನಷ್ಟ ಆರೋಪ: ನಾಲ್ವರು ಸಿಬ್ಬಂದಿ ಅಮಾನತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എ.എഫ്.ഡിയുടെ തെരഞ്ഞെടുപ്പ് മുന്നേറ്റം ആശങ്കാകരം; ജര്‍മനി വീണ്ടും തീവ്ര വലതിന്റെ കയ്യിലേക്കെന്ന് യൂറോപ്യന്‍ നേതാക്കള്‍

പാരീസ്: ജര്‍മനിയിലെ സാക്സോണി-അന്‍ഹാള്‍ട്ട് സംസ്ഥാന തെരഞ്ഞെടുപ്പില്‍ തീവ്ര വലതുപക്ഷ പാര്‍ട്ടിയായ ആള്‍ട്ടര്‍നേറ്റീവ്...

"மூன்று கோப்புகள் இருப்பதாக முதல்வர் சொன்னார், ஏன் அதைப் பற்றி பேசவில்லை? சம்மந்தமே.!" – பெ.சண்முகம்

மார்க்சிஸ்ட் கம்யூனிஸ்ட் கட்சியின் மாநில செயலாளர் பெ.சண்முகம் சட்டமன்ற செயல்பாடுகள் குறித்து...

Mojtaba Khamenei: లండన్‌లో మొజ్తబా ఖమేనీ ఇల్లు వేలం.. ఖరీదు ఎంతంటే..!

ఇరాన్ సర్వోన్నత నాయకుడు మొజ్తబా ఖమేనీ లండన్‌లోని నివాసం అమ్మకానికి పెట్టారు....

ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು ಗ್ರಾಮಾಂತರ, ಸೆಪ್ಟಂಬರ್,7,2026 (www.justkannada.in): “ನವ ಯುವ ಪೀಳಿಗೆಯ ಅಗತ್ಯ,‌...