9
September, 2026

A News 365Times Venture

9
Wednesday
September, 2026

A News 365Times Venture

ಮೈಸೂರಿನಲ್ಲಿ ಫಿಲಂ ಸಿಟಿ ಯೋಜನೆ: ಪರಿಶೀಲನಾ ಸಭೆ ನಡೆಸಿ ಚರ್ಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

Date:

ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ಇಂದು ವಿಕಾಸಸೌಧದ ಸಭಾಂಗಣದಲ್ಲಿ ಮೈಸೂರಿನಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆ (PPP) ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ ಯೋಜನೆಯ ಪ್ರಗತಿ ಕುರಿತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಮೈಸೂರು ಈಗಾಗಲೇ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಪ್ರವಾಸೋದ್ಯಮದ ಪ್ರಮುಖ ತಾಣವಾಗಿದ್ದು, ಚಿತ್ರನಗರಿಯಂತಹ ಮಹತ್ವಾಕಾಂಕ್ಷೆಯ ಯೋಜನೆಯು ನಗರದ ಸಾಂಸ್ಕೃತಿಕ ಮತ್ತು ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡುವ ಸಾಮರ್ಥ್ಯ ಹೊಂದಿದೆ. ಈ ಹಿನ್ನೆಲೆಯಲ್ಲಿ, ಉದ್ದೇಶಿತ ಚಿತ್ರನಗರಿಯನ್ನು ಕೇವಲ ಚಿತ್ರೀಕರಣಕ್ಕೆ ಸೀಮಿತವಾಗಿರದೆ, ಅತ್ಯಾಧುನಿಕ ಚಿತ್ರೀಕರಣ ಸೌಲಭ್ಯಗಳು, ಸ್ಟುಡಿಯೋಗಳು, ತಾಂತ್ರಿಕ ಮೂಲಸೌಕರ್ಯ, ಪೋಸ್ಟ್-ಪ್ರೊಡಕ್ಷನ್ ಸೌಲಭ್ಯಗಳು ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ಅಗತ್ಯವಿರುವ ಸಮಗ್ರ ವ್ಯವಸ್ಥೆಗಳನ್ನು ಒಳಗೊಂಡ ದೇಶದ ಅತ್ಯುತ್ತಮ ಚಿತ್ರನಗರಿಯಾಗಿ ರೂಪಿಸುವ ನಿಟ್ಟಿನಲ್ಲಿ ಸಭೆಯಲ್ಲಿ ವಿವರವಾದ ಚರ್ಚೆ ನಡೆಸಿದರು.

ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಪ್ರತಿ ಹಂತದ ಕಾರ್ಯಯೋಜನೆ, ಪ್ರಗತಿ ಹಾಗೂ ಎದುರಾಗಬಹುದಾದ ಸವಾಲುಗಳ ಕುರಿತು ನಿರಂತರವಾಗಿ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಮೈಸೂರಿನ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಾಮರ್ಥ್ಯವನ್ನು ಗಮನದಲ್ಲಿಟ್ಟುಕೊಂಡು, ಯೋಜನೆಯನ್ನು ಪರಿಣಾಮಕಾರಿಯಾಗಿ ಹಾಗೂ ಗುಣಮಟ್ಟದೊಂದಿಗೆ ಸಾಕಾರಗೊಳಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಮಾಹಿತಿ ಕಾರ್ಯದರ್ಶಿಗಳಾದ ಜೆ. ಮಂಜುನಾಥ್ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Film City, project, Mysore:,  Minister, Dr. Yathindra Siddaramaiah, meeting

The post ಮೈಸೂರಿನಲ್ಲಿ ಫಿಲಂ ಸಿಟಿ ಯೋಜನೆ: ಪರಿಶೀಲನಾ ಸಭೆ ನಡೆಸಿ ಚರ್ಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വഖഫ് ബോര്‍ഡ്: ഇടത് സര്‍ക്കാരിന്റെ മൂന്ന് വീഴ്ചകള്‍ പ്രശ്‌നമായി; അവര്‍ തെറ്റിധാരണ പടര്‍ത്തുന്നു: നാസര്‍ ഫൈസി കൂടത്തായി

കോഴിക്കോട്‌: വഖഫ് ബോര്‍ഡ് ഭേദഗതിയെ ചെറുക്കാനുള്ള അവസരങ്ങള്‍ കഴിഞ്ഞ എല്‍.ഡി.എഫ് സര്‍ക്കാര്‍...

‘அதுவே பழகிடும்’ ஹார்முஸ் நீர்ச்சந்தி மூடலைப் பழகிக்கொண்ட உலக நாடுகள்; இப்போது எப்படி சமாளிக்கின்றன?

அமெரிக்காவும், இஸ்ரேலும் நவீன ஆயுதங்கள், தொழில்நுட்பம் மிகுந்த ஏவுகணைகளை வைத்து, ஈரானை...

Supreme Court: సీజేపీ నిరసనకారుడికి నోటీసు.. ఎగ్జిక్యూటివ్ మేజిస్ట్రేట్‌పై సుప్రీంకోర్టు ఆగ్రహం

ఢిల్లీ జంతర్‌మంతర్‌లో జరిగిన విద్యార్థుల నిరసనలకు సంబంధించి గౌతమ్ బుద్ధ యూనివర్సిటీకి...

ರೈತರ ವಿಮೆ ಹಣ ಕಟ್ಟದ, ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸೂಚನೆ

ಬೆಂಗಳೂರು, ಸೆಪ್ಟಂಬರ್, 08,2026 (www.justkannada.in): ಬೆಳಗಾವಿಯ ಜೇವರ್ಗಿ ತಾಲ್ಲೂಕಿನ ಇಟ್ಟನಹಳ್ಳಿ...