10
September, 2026

A News 365Times Venture

10
Thursday
September, 2026

A News 365Times Venture

ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ

Date:

ಬೆಂಗಳೂರು,ಸೆಪ್ಟಂಬರ್,9,2026 (www.justkannada.in):  ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಅವರಿಗೆ ಜಾರಿ ನಿರ್ದೇಶನಾಲಯ ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದು, ಅವರಿಗೆ ಸೇರಿದ ಡಾಲರ್ಸ್ ಕಾಲೋನಿ  ನಿವಾಸ, ಕಚೇರಿ ಸೇರಿದಂತೆ 18 ಕಡೆಗಳಲ್ಲಿ  ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜೂನ್ 24ರಂದು ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ವೈ. ಮಂಜುನಾಥ್ ಅವರ ಮೇಲೆ ಇಡಿ ದಾಳಿಯನ್ನು ನಡೆಸಿತ್ತು. ಇದೀಗ ಅದರ ಮುಂದುವರಿದ ತನಿಖೆಯ ಭಾಗವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ (ಭಾವ) ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ದಾಳಿ ನಡೆಸಿದ್ದರು. ಬೇನಾಮಿ ಆಸ್ತಿ ಗಳಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು ಸೇರಿದಂತೆ ರಾಜ್ಯದ ಒಟ್ಟು 6 ಪ್ರಮುಖ ಸ್ಥಳಗಳಲ್ಲಿ ಭಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಇದೀಗ ಆ ತನಿಖೆಯ ಮುಂದುವರಿದ ಭಾಗವಾಗಿ ಈ ದಾಳಿಯನ್ನು ನಡೆಸಲಾಗಿದೆ.

Key words: ED, Raids, Minister, Satish Jarkiholi,

The post ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: ಮನೆ, ಕಚೇರಿ ಸೇರಿ 18 ಕಡೆಗಳಲ್ಲಿ ದಾಳಿ, ಪರಿಶೀಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്ലൊവേനിയയില്‍ ആദ്യമായി ഇസ്രഈല്‍ എംബസി തുറന്നു; തലസ്ഥാനത്ത്‌ വന്‍ പ്രതിഷേധം

ലുബ്ലിയാന: സ്ലൊവേനിയന്‍ തലസ്ഥാനമായ ലുബ്ലിയാനയില്‍ ഇസ്രഈലിന്റെ എംബസി തുറക്കുന്നതില്‍ വന്‍ പ്രതിഷേധം....

'புதின் முயற்சி, தென்னாப்பிரிக்கா என்ட்ரி, மன்மோகன் சிங் யோசனை' – 'BRICS' கதையைப் பகிர்ந்த காங்கிரஸ்

வருகிற செப்டம்பர் 12, 13 தேதிகளில், BRICS மாநாடு புதுடெல்லியில் நடக்கவிருக்கிறது....

Sweet Atukulu Recipe: వినాయక చవితి స్పెషల్.. కరకరలాడే అటుకుల తీపి ప్రసాదం.! సులువుగా చేసుకోండి ఇలా..

Sweet Atukulu Recipe: పండుగలు, విశేష పూజా దినాల్లో దేవుడికి నైవేద్యం...

തമ്പി വിജയ്; നിങ്ങള്‍ക്ക് ചരിത്രം തിരുത്താനാവില്ല: റീല്‍സും ഫോട്ടോഷൂട്ടും നടത്തലല്ല ഭരണം: എം.കെ സ്റ്റാലിന്‍

ചെന്നൈ: തമിഴ്‌നാട് മുഖ്യമന്ത്രി വിജയ്ക്ക് മറുപടിയുമായി ഡി.എം.കെ മേധാവിയും മുന്‍ മുഖ്യമന്ത്രിയുമായ...