11
September, 2026

A News 365Times Venture

11
Friday
September, 2026

A News 365Times Venture

ಕಸ್ತೂರಿ ರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ: ಸಿಎಂ ಡಿ‌.ಕೆ ಶಿವಕುಮಾರ್

Date:

ಬೆಂಗಳೂರು ಸೆಪ್ಟಂಬರ್,11,2026 (www.justkannada.in): ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು ಸೆಪ್ಟೆಂಬರ್‌ 21 ರಿಂದ 23 ರವರೆಗೆ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.

ಅರಣ್ಯ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, “ಅಧಿವೇಶನದಲ್ಲಿ ಎಲ್ಲ ಶಾಸಕರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮುಕ್ತವಾಗಿ ನೀಡಬೇಕು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದರು.

ಎಪಿಎಂಸಿ ಭೇಟಿಗೆ ಹೈಕೋರ್ಟ್‌ ಮೆಚ್ಚುಗೆ

ಕರ್ನಾಟಕ ಹೈಕೋರ್ಟ್‌ ನ ನ್ಯಾಯಾಧೀಶರು ಮುಖ್ಯಮಂತ್ರಿಯವರ ಎಪಿಎಂಸಿ ಭೇಟಿ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸಿದ ಕುರಿತು  ಕೇಳಿದಾಗ, “ನಮ್ಮ ಕೆಲಸವನ್ನು ಗುರುತಿಸಿದ ಹೈಕೋರ್ಟ್ ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಎಲ್ಲ ಸಚಿವರಿಗೂ ಎಪಿಎಂಸಿಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದ್ದೇನೆ. ಏಕೆಂದರೆ ಸಾಮಾನ್ಯ ಜನರು ಯಾವುದೇ ಕಾರಣಕ್ಕೂ ತೊಂದರೆ ಅನುಭವಿಸಬಾರದು ಎಂಬುದು ಸರ್ಕಾರದ ನಿಲುವು” ಎಂದರು.

ಬಾಲಕಾರ್ಮಿಕರ ರಕ್ಷಣೆ ಪೊಲೀಸರ ಕರ್ತವ್ಯವೂ ಹೌದು

ಬಾಲ ಕಾರ್ಮಿಕರ ರಕ್ಷಣೆ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ಬಗ್ಗೆ ಕೇಳಿದಾಗ, “ಬಾಲಕಾರ್ಮಿಕರ ರಕ್ಷಣೆ ವಿಚಾರದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಹೇಳಿಕೆ ದುರದೃಷ್ಟಕರ. ಮಕ್ಕಳನ್ನು ರಕ್ಷಿಸುವುದು ಕಾರ್ಮಿಕ ಇಲಾಖೆ ಮಾತ್ರವಲ್ಲ, ಪೊಲೀಸ್ ಇಲಾಖೆಯ ಜವಾಬ್ದಾರಿಯೂ ಹೌದು.‌ ಬಾಲಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು” ಎಂದರು.

ಜಾರಕಿಹೊಳಿ ವಿರುದ್ಧ ರಾಜಕೀಯ ಟಾರ್ಗೆಟ್

“ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಧೈರ್ಯ ತುಂಬಿದ್ದೇನೆ. ಅವರು ಯಾವುದೇ ತಪ್ಪು ಮಾಡಿಲ್ಲ. ಕಾನೂನು ಚೌಕಟ್ಟಿನಲ್ಲಿಯೇ ವ್ಯವಹಾರ ನಡೆಸುತ್ತಿದ್ದಾರೆ” ಎಂದು ಹೇಳಿದರು.

“ಇದು ರಾಜಕೀಯವಾಗಿ ನಡೆಯುತ್ತಿರುವ ಬೆಳವಣಿಗೆ. ಕಾಂಗ್ರೆಸ್ ಪಕ್ಷದ ನಾಯಕರನ್ನು ಹಾಗೂ ವಿರೋಧ ಪಕ್ಷದವರನ್ನು ಗುರಿ ಮಾಡಲಾಗುತ್ತಿದೆ. ಇನ್ನೂ ಮೂರು–ನಾಲ್ಕು ಜನರನ್ನು ಗುರಿ ಮಾಡುವ ಸಾಧ್ಯತೆ ಇದೆ ಎಂಬ ಅರಿವು ನನಗಿದೆ” ಎಂದರು.

“ಬಿಜೆಪಿ ನಾಯಕರಿಗೆ ಸಂಬಂಧಿಸಿದ ಹಣ ವರ್ಗಾವಣೆ ಹಾಗೂ ವಿದೇಶಿ ಖಾತೆಗಳಿಗೆ ಹಣ ಹೋಗಿರುವ ಆರೋಪಗಳಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ನಾಯಕರ ಮೇಲಷ್ಟೇ ತನಿಖಾ ಸಂಸ್ಥೆಗಳ ಕ್ರಮ ನಡೆಯುತ್ತಿದೆ” ಎಂದು ಹೇಳಿದರು.

ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಸ್ಪಷ್ಟ

ವಂದೇ ಮಾತರಂ ಹಾಡಿನ ವಿಚಾರವಾಗಿ ಕೇಳಿದಾಗ, “ವಂದೇ ಮಾತರಂ ವಿಚಾರದಲ್ಲಿ ಕಾಂಗ್ರೆಸ್ ನಿಲುವು ಬಹಳ ಹಿಂದಿನಿಂದಲೂ ಸ್ಪಷ್ಟವಾಗಿದೆ. ವಂದೇ ಮಾತರಂ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಕಾಂಗ್ರೆಸ್ ಗೌರವ ನೀಡುತ್ತದೆ” ಎಂದು ಹೇಳಿದರು.

“ನಮ್ಮ ಕ್ಷೇತ್ರದಿಂದ ಗೆದ್ದು ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ತಮ್ಮ ಕಾಲದಲ್ಲಿಯೂ ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ಸರ್ಕಾರದ ವಶಕ್ಕೆ ನೀಡಲು ಕರೆ ನೀಡಿದ್ದರು. ಇದರಿಂದ ಸಾವಿರಾರು ಜನ ಮುಂದೆ ಬಂದು ಸರ್ಕಾರದ ವಶಕ್ಕೆ ನೀಡಿದರು” ಎಂದರು‌.

 

Source link

LEAVE A REPLY

Please enter your comment!
Please enter your name here

Share post:

Popular

More like this
Related

IndiGo Flight: టిష్యూ పేపర్‌పై ‘బాంబు’ బెదిరింపు.. అహ్మదాబాద్‌లో ఇండిగో ఎమర్జెన్సీ ల్యాండింగ్

లక్నో నుంచి దమ్మామ్ వెళ్తున్న ఇండిగో విమానంలో కలకలం రేగింది. విమానంలో...

‘ചായ കുടിക്കാന്‍ പോയതല്ലല്ലോ’; ഇ.ഡി നടപടികള്‍ക്കിടെ പിണറായിയെ പരിഹസിച്ച് അലന്‍ ഷുഹൈബ്

കോഴിക്കോട്: സി.എം.ആര്‍.എല്‍ മാസപ്പടി കേസില്‍ പ്രതിപക്ഷ നേതാവ് പിണറായി വിജയന്‍, മകള്‍...

’வீட்டுக்கு அருகிலேயே தலைமைச் செயலகம் கட்டுவேன் என்ற பிடிவாதம் ஆபத்தில் முடியும்’–வானதி சீனிவாசன்!

பா.ஜ.க முன்னாள் தேசிய மகளிரணித் தலைவர் வானதி சீனிவாசன் வெளியிட்டுள்ள அறிக்கையில்,...

Maharashtra: నాందేడ్‌లో ఘోర రోడ్డు ప్రమాదం.. ట్రక్కు-టాటా మ్యాజిక్‌ ఢీ.. 9 మంది మృతి

మహారాష్ట్రలోని నాందేడ్‌లో ఘోర రోడ్డు ప్రమాదం జరిగింది. వేగంగా వస్తున్న ట్రక్కు.....