24
April, 2026

A News 365Times Venture

24
Friday
April, 2026

A News 365Times Venture

ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪ : ಇಬ್ಬರ ವಿರುದ್ದ FIR ದಾಖಲು

Date:

ಮೈಸೂರು,ಜನವರಿ,18,2025 (www.justkannada.in): ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪದ ಮೇಲೆ ಇಬ್ಬರ ವಿರುದ್ದ ಮೈಸೂರು ಜಿಲ್ಲೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಷಯ್ ಕುಮಾರ್ ಹಾಗೂ ತೇಜಸ್ವಿನಿ ಎಂಬುವವರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.  ಟಿ ಎಲ್ ಎಂಟರ್‌ಪ್ರೈಸಸ್ ಎಟಿಎಂಗೆ ಹಣ‌ ತುಂಬವ ಏಜೆನ್ಸಿ‌ ಪಡೆದಿತ್ತು. ಈ  ಟಿ ಎಲ್ ಎಂಟರ್ ಪ್ರೈಸಸ್‌ ನಲ್ಲಿ ಅಕ್ಷಯ್ ಕೆಲಸ ಮಾಡುತ್ತಿದ್ದರು. ಮೈಸೂರು ಜಿಲ್ಲೆಯ ಒಟ್ಟು 16 ಎಟಿಎಂಗಳಿಗೆ ಅಕ್ಷಯ್ ಹಣ‌ ತುಂಬುತ್ತಿದ್ದ. ಕಂಪನಿ ಪರವಾಗಿ ಹೋಗಿ ಹಣ ತುಂಬುವ ಕೆಲಸ ಮಾಡುತ್ತಿದ್ದನು.

ಈ ಮಧ್ಯೆ ಕಂಪನಿ ಆಡಿಟ್ ಮಾಡಿದಾಗ ಹಣದಲ್ಲಿ ವ್ಯತ್ಯಾಸ ಕಂಡು ಬಂದಿದೆ.  ಎಟಿಎಂ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಲಾಗಿದ್ದು ಈ ವೇಳೆ ಆಕ್ಷಯ್ ಎಟಿಎಂ ಹಣ ಹಾಕದೆ ಬ್ಯಾಗ್‌ ನಲ್ಲಿ ತುಂಬಿಕೊಂಡು  ಹೋದ ದೃಶ್ಯ ಸೆರೆಯಾಗಿದೆ.

ಅಕ್ಷಯ್ ಗದ್ದಿಗೆ ಗ್ರಾಮದ ಎಟಿಎಂ ನಲ್ಲಿ 5 ಲಕ್ಷದ 80 ಸಾವಿರ ಹಣ ಲೋಡ್ ಮಾಡಿಲ್ಲ. ಈ ಕೃತ್ಯಕ್ಕೆ ಆಕೆಯ ಪರಿಚಯದ ತೇಜಸ್ವಿನಿ‌ ಎಂಬಾಕೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು,  ಇಬ್ಬರು ಈ ಹಣದಿಂದ ಚಿನ್ನ ಖರೀದಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಬ್ಬರು ಚಿನ್ನದ ಅಂಗಡಿಯಲ್ಲಿ ಚಿನ್ನ ಖರೀದಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದುಈ ಹಿನ್ನೆಲೆ ಇದೀಗ ಇಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.

Key words: FIR , money, ATM, without, filling, Mysore

The post ಎಟಿಎಂಗೆ ಹಣ ತುಂಬದೆ‌ ತೆಗೆದುಕೊಂಡ ಹೋದ ಆರೋಪ : ಇಬ್ಬರ ವಿರುದ್ದ FIR ದಾಖಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനുമായുള്ള യുദ്ധം ഇസ്രഈലിന്റെ ആവശ്യപ്രകാരം; ഔദ്യോഗികമായി സ്ഥിരീകരിച്ച് യുഎസ്

വാഷിങ്ടണ്‍: ഇറാനെതിരെ അമേരിക്ക നടത്തിവരുന്ന സൈനിക നടപടികള്‍ (ഓപ്പറേഷന്‍ എപിക് ഫ്യൂറി)...

“ரத்தம், வியர்வை சிந்தி நான் வளர்த்த கட்சி, இன்று..!"- ஆம் ஆத்மியிலிருந்து ராகவ் சதா விலகல்

ஆம் ஆத்மி கட்சியின் முக்கியத் தலைவர்களில் ஒருவரான ராகவ் சதா மற்றும்...

Telangana High Court: కేసీఆర్, కేటీఆర్, హరీష్‌రావుకు హైకోర్టులో ఊరట

Telangana High Court: బీఆర్ఎస్ అధినేత కల్వకుంట్ల చంద్రశేఖర్ రావు, పార్టీ...

ಚೆಲುವಾಂಬ ಆಸ್ಪತ್ರೆಗೆ ಭೇಟಿ: ಹತ್ತೇ ನಿಮಿಷದಲ್ಲಿ ರೋಗಿಗಳ ಬೇಡಿಕೆ ಪೂರೈಸಿದ ಸಂಸದ ಯದುವೀರ್‌

ಮೈಸೂರು, ಏಪ್ರಿಲ್,24,2026 (www.justkannada.in): ಇತ್ತೀಚಿನ ದಿನಗಳಲ್ಲಿ ಭಾರಿ ಸುದ್ದಿಯಾಗಿದ್ದ ಮೈಸೂರಿನ...