20
June, 2026

A News 365Times Venture

20
Saturday
June, 2026

A News 365Times Venture

ರಾಜ್ಯದಲ್ಲಿ ಹದಗೆಟ್ಟ ಕಾನೂನು ವ್ಯವಸ್ಥೆ, ಜನರ ರಕ್ಷಣೆ ಮಾಡುವವರೇ ಇಲ್ಲ: ಆರ್‌.ಅಶೋಕ್  ಆಕ್ರೋಶ

Date:

ಬೆಂಗಳೂರು, ಜನವರಿ 18, 2025 (www.justkannada.in):  ಕರ್ನಾಟಕ ದರೋಡೆ ರಾಜ್ಯವಾಗಿ ಬದಲಾಗಿದ್ದು, ಕಾನೂನು ವ್ಯವಸ್ಥೆ ಹದಗೆಟ್ಟಿದೆ.  ಜನರು ಆತಂಕದಲ್ಲಿ ಬದುಕುತ್ತಿದ್ದಾರೆ. ಜನರ ರಕ್ಷಣೆಯನ್ನು ಮಾಡುವವರೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್.ಅಶೋಕ್ ಅವರು, ಬೀದರ್‌ ನಲ್ಲಿ ಬ್ಯಾಂಕ್‌ನ ಹಣದ ದರೋಡೆ ಹಾಗೂ ಸಿಬ್ಬಂದಿ ಕೊಲೆ ನಡೆದಿದೆ. ಮಂಗಳೂರಿನಲ್ಲಿ ಹಾಲಿವುಡ್‌ ಸಿನಿಮಾ ಶೈಲಿಯಲ್ಲಿ 15 ಕೋಟಿ ರೂ. ಬ್ಯಾಂಕ್‌ ಹಣ ಲೂಟಿಯಾಗಿದೆ. ರಾಜ್ಯದ ಪೊಲೀಸರ ಬಗ್ಗೆ ಯಾರಿಗೂ ಭಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪೊಲೀಸ್‌ ಅಧಿಕಾರಿಗಳ ಮೇಲೆ ಎಷ್ಟು ಹಿಡಿತ ಇದೆ ಎಂದು ಇದರಿಂದ ತಿಳಿಯುತ್ತದೆ. ರಾಜ್ಯದ ಕಾನೂನು ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎಂದು ಗೊತ್ತಾಗಿದೆ ಎಂದರು.

ಬೇರೆ ರಾಜ್ಯಗಳಿಂದ ಕಳ್ಳರು ಬಂದು ದರೋಡೆ ಮಾಡಿಕೊಂಡು ಬಸ್ಸು, ರೈಲಿನಲ್ಲಿ ಹೋಗುತ್ತಿದ್ದಾರೆ. ಜನರು ಅವರ ರಕ್ಷಣೆಯನ್ನು ಅವರೇ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ಪೊಲೀಸರ ಕೈಯಲ್ಲಿ ಪಿಸ್ತೂಲ್‌ ಇಲ್ಲ. ಆದರೆ ದರೋಡೆ ಮಾಡುವವರ ಕೈಯಲ್ಲಿ ಆಧುನಿಕ ಶಸ್ತ್ರಾಸ್ತ್ರಗಳಿವೆ ಎಂದರು.

ಲವ್‌ ಜಿಹಾದ್‌, ಕೋಮುಗಲಭೆ, ಹಸುಗಳ ಕೆಚ್ಚಲು ಕತ್ತರಿಸಿದ್ದು ಮೊದಲಾದ ಘಟನೆಗಳ ವಿರುದ್ಧ ಕಠಿಣ ಕ್ರಮ ವಹಿಸಲಿಲ್ಲ. ಪೊಲೀಸ್‌ ಇಲಾಖೆ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಅಧಿಕಾರಿಗಳು ಸಾಯುತ್ತಿದ್ದಾರೆ. ಇಷ್ಟಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಇಲಾಖೆಯ ಸಭೆ ಕರೆದು ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್‌-ಸತೀಶ್‌ ಜಾರಕಿಹೊಳಿ ಗಲಾಟೆ, ಸಿಎಂ ನಿರ್ಗಮನ ಮೊದಲಾದ ರಾಜಕೀಯದಲ್ಲೇ ಸರ್ಕಾರ ಮುಳುಗಿದೆ. ಹೀಗಾಗಿ ಅಧಿಕಾರಿಗಳಿಗೆ ಕೆಲಸ ಮಾಡಲು ಆಸಕ್ತಿ ಇಲ್ಲ ಎಂದು ದೂರಿದರು.

ಕರ್ನಾಟಕ ದರೋಡೆಕೋರರ ಸ್ವರ್ಗವಾಗಿರುವುದರಿಂದ ಹೂಡಿಕೆದಾರರು ಮುಂದೆ ಬರುತ್ತಿಲ್ಲ. ಇದು ಪಶ್ಚಿಮ ಬಂಗಾಳದಂತೆಯೇ ಆಗುತ್ತಿದೆ. ಎಲ್ಲರೂ ಆತಂಕದಲ್ಲೇ ಬದುಕುತ್ತಿದ್ದಾರೆ ಎಂದರು.

ಶ್ವೇತಪತ್ರ ಬಿಡುಗಡೆ ಮಾಡಿ

ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಎಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.  ಸಿಎಂ ಸಿದ್ದರಾಮಯ್ಯ ಎಷ್ಟು ಅನುದಾನ ನೀಡಿದ್ದಾರೆ ಎಂದು ಶ್ವೇತಪತ್ರ ಬಿಡುಗಡೆ ಮಾಡಲಿ. ಬಿಜೆಪಿ ಅವಧಿಯಲ್ಲಿ ಎಷ್ಟು ಸಾಲ ಮಾಡಲಾಗಿದೆ, ಕಾಂಗ್ರೆಸ್‌ ಅವಧಿಯಲ್ಲಿ 60 ವರ್ಷಗಳಲ್ಲಿ ಎಷ್ಟು ಸಾಲ ಮಾಡಲಾಗಿದೆ ಎಂದು ಕೂಡ ತಿಳಿಸಲಿ ಎಂದು ಆರ್.ಅಶೋಕ್ ಸವಾಲೆಸೆದರು.

ಕ್ಲೀನ್‌ ಚಿಟ್‌ ಗೆ ಸಿದ್ಧತೆ

ಮುಡಾಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ನನಗೆ ಉತ್ತರ ನೀಡಿಲ್ಲ. ಲೋಕಾಯುಕ್ತ ಪೊಲೀಸರು ತನಿಖೆ ಮಾಡಲು ಆಸಕ್ತಿ ತೋರದೆ ಕ್ಲೀನ್‌ ಚಿಟ್‌ ನೀಡಲು ಸಿದ್ಧತೆ ಮಾಡಿಕೊಂಡಿರುವಂತಿದೆ. ಜಾರಿ ನಿರ್ದೇಶನಾಲಯ ಮಧ್ಯವರ್ತಿಗಳ ಹಣವನ್ನು ವಶಕ್ಕೆ ಪಡೆದಿದೆ. ಆದರೆ ಲೋಕಾಯುಕ್ತ ಪೊಲೀಸರು ಏನೂ ಮಾಡಿಲ್ಲ. ಆದ್ದರಿಂದ ಸಿಬಿಐ ತನಿಖೆಗೆ ವಹಿಸಿ ಎಂದು ಒತ್ತಾಯಿಸಿದ್ದೇವೆ ಎಂದರು.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳು ಹೆಚ್ಚಿವೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಬದುಕಿಗೆ ಗ್ಯಾರಂಟಿ ಇಲ್ಲ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ದರ ಏರಿಕೆ ಮಾಡುತ್ತಿದೆ. ಈ ರೀತಿ ಮಾಡುವ ಬದಲು ಒಂದೇ ಬಾರಿಗೆ ದರ ಏರಿಕೆ ಮಾಡಲಿ ಎಂದರು.

Key words: Karnataka  legal system, deteriorated,  R. Ashok

The post ರಾಜ್ಯದಲ್ಲಿ ಹದಗೆಟ್ಟ ಕಾನೂನು ವ್ಯವಸ್ಥೆ, ಜನರ ರಕ್ಷಣೆ ಮಾಡುವವರೇ ಇಲ್ಲ: ಆರ್‌.ಅಶೋಕ್  ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കയുടെ ആഗോള മേധാവിത്വ മോഹങ്ങള്‍ക്ക് ഇറാന്‍ പൂട്ടിട്ടു; സമാധാന കരാര്‍ യു.എസിനുള്ള തിരിച്ചടി: റഷ്യന്‍ രാഷ്ട്രീയ നിരീക്ഷകന്‍

മോസ്‌ക്കോ: അമേരിക്കയുടെ ആഗോള ആധിപത്യം വീണ്ടും ഉറപ്പിക്കനുള്ള യു.എസ് പ്രസിഡന്റ് ഡൊണാള്‍ഡ്...

விஜய் படங்களுக்கு பணியாயாற்றிய பிரபல ஒளிப்பதிவாளர்! – மனோஜ் பரமஹம்சாவுக்கு அரசுப் பொறுப்பு

பிரபல ஒளிப்பதிவாளர் மனோஜ் பரமஹம்சாவுக்கு தமிழ்நாடு அரசுப் பொறுப்பு வழங்கப்பட்டுள்ளது. 'ஈரம்',...

Monsoon 2026: అన్నదాతలకు శుభవార్త.. ఎట్టకేలకు పుంజుకున్న రుతుపవనాలు.. ఈ తేదీల్లో వర్షాలు!

Monsoon 2026: దేశవ్యాప్తంగా దాదాపు రెండు వారాలుగా నత్తనడకన సాగుతూ, తీవ్ర...

ನಗರಾಭಿವೃದ್ಧಿ ಪ್ರಾಧಿಕಾರಗಳು ಕಡ್ಡಾಯವಾಗಿ ಪ್ರತಿ ತಿಂಗಳು ಸಭೆ ನಡೆಸಬೇಕು- ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಜೂನ್,19,2026 (www.justkannada.in): ನಗರಾಭಿವೃದ್ಧಿ ಪ್ರಾಧಿಕಾರಗಳು ಕಾಲ ಕಾಲಕ್ಕೆ ಪ್ರಾಧಿಕಾರದ ಸಭೆ...