25
April, 2026

A News 365Times Venture

25
Saturday
April, 2026

A News 365Times Venture

ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್: ಶಿಕಾರಿಪುರದಿಂದಲೇ ಪ್ರವಾಸ ಮಾಡ್ತೇನೆ, ಸಾಧ್ಯವಾದ್ರ ತಡಿ- ರಮೇಶ್ ಜಾರಕಿಹೊಳಿ ಸವಾಲು

Date:

ಬೆಳಗಾವಿ,ಜನವರಿ,18,2025 (www.justkannada.in): ಯಡಿಯೂರಪ್ಪ ಅವರ ಬಗ್ಗೆ ಮಾತನಾಡುವಾಗ ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು ಎಂದು ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ  ವಿಜಯೇಂದ್ರ ವಿರುದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗುಡುಗಿದ್ದು ಸವಾಲೊಂದನ್ನ ಹಾಕಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ರಮೇಶ್ ಜಾರಕಿಹೊಳಿ,  ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್, ಇಂದಿಗೂ ಯಡಿಯೂರಪ್ಪ ನಮ್ಮ ನಾಯಕ ಅದರಲ್ಲಿ ಎರಡು ಮಾತಿಲ್ಲ. ಇಂದಿಗೂ ನಾನು ಯಡಿಯೂರಪ್ಪ ಮೇಲೆ ಅಗೌರವದಿಂದ ಮಾತಾಡಿಲ್ಲ. ಇಂದಿಗೂ ಅವರ ಮೇಲೆ ಗೌರವ ಇದೆ. ಆದ್ರೇ ನೀನು ಸುಳ್ಳು ಹೇಳುವುದು ಬಿಡು. ನಾನು ಶಿಕಾರಿಪುರಕ್ಕೆ  ಬರುತ್ತೇನೆ. ವಿಜಯೇಂದ್ರ ಮನೆ ಮುಂದಿನಿಂದ ಪ್ರವಾಸ ಶುರು ಮಾಡುತ್ತೇನೆ.  ನಿನ್ನ ಸವಾಲು ಸ್ವೀಕಾರ ಮಾಡಿದ್ದೇನೆ.  ನೀನು ದಿನಾಂಕ ನಿಗದಿ ಮಾಡು, ಬೆಂಬಲಿಗರು ಬರಲ್ಲ, ಗನ್ ಮ್ಯಾನ್ ಬರಲ್ಲ ನಾನು ಒಬ್ಬನೇ ಬರ್ತೇನಿ, ಅಲ್ಲಿಂದ ಪ್ರವಾಸ ಆರಂಭ ಮಾಡುತ್ತೇನೆ ಸಾಧ್ಯವಾದರೆ ತಡಿ ನೋಡೋಣ ಎಂದು ಬಿವೈ ವಿಜಯೇಂದ್ರರಿಗೆ ಸವಾಲು ಹಾಕಿದರು.

ನಮ್ಮಲ್ಲಿ ಜಗಳ ಇರೋದು ಅಧ್ಯಕ್ಷರ ಬದಲಾವಣೆಗೆ ಅಷ್ಟೇ, ಅಧ್ಯಕ್ಷ  ಬದಲಾವಣೆಯಾದರೆ ಓಕೆ ಇಲ್ಲವಾದರೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Key words: BJP,BY Vijayendra, MLA,Ramesh Jarakiholi

The post ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್: ಶಿಕಾರಿಪುರದಿಂದಲೇ ಪ್ರವಾಸ ಮಾಡ್ತೇನೆ, ಸಾಧ್ಯವಾದ್ರ ತಡಿ- ರಮೇಶ್ ಜಾರಕಿಹೊಳಿ ಸವಾಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇപ്പോഴും സൂര്യനെ വരയ്ക്കുന്നു’; ദല്‍ഹിയില്‍ മിനാബ് പെണ്‍കുട്ടികളുടെ കലാസൃഷ്ടികളുടെ പ്രദര്‍ശനം

  ന്യൂദല്‍ഹി: അമേരിക്കയുടെയും ഇസ്രഈലിന്റെയും ആക്രമണത്തിന്റെ ഇരകളായ കുരുന്നുകളുടെ സ്വപ്‌നങ്ങളും കണ്ണീരും...

Dwcra Group: డ్వాక్రా మహిళలకు గుడ్ న్యూస్.. 22 లక్షల మంది అకౌంట్లోకి డబ్బులు..

ఆంధ్రప్రదేశ్‌లోని డ్వాక్రా మహిళల చిరకాల నిరీక్షణకు తెరపడింది. ‘అభయహస్తం’ పథకం కింద...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ...