19
February, 2025

A News 365Times Venture

19
Wednesday
February, 2025

A News 365Times Venture

ಎಸೆನ್ಸ್ ಸೇವಿಸಿ ಕೈದಿಗಳ ಸಾವು: ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಶ್ಯಾಮ ಭಟ್ ಸೂಚನೆ

Date:

ಮೈಸೂರು,ಜನವರಿ,20,2025 (www.justkannada.in): ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ಎಸೆನ್ಸ್ ಸೇವನೆಯಿಂದ ಮೂವರು ಕೈದಿಗಳು ಮೃತಪಟ್ಟ ಪ್ರಕರಣ ಸಂಬಂಧ ಮಾಹಿತಿ ಪಡೆದಿದ್ದೇನೆ. ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಜೈಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಕರ್ನಾಟಕ ಮಾನವ ಹಕ್ಕು ಆಯೋಗದ ಅಧ್ಯಕ್ಷ ಶ್ಯಾಮ ಭಟ್ ತಿಳಿಸಿದರು.

ಇಂದು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದ್ದ ಕರ್ನಾಟಕ ಮಾನವ ಹಕ್ಕು ಆಯೋಗದ ಅಧ್ಯಕ್ಷ ಶ್ಯಾಮ ಭಟ್ ಅವರನ್ನು ಕೆ ಆರ್ ಆಸ್ಪತ್ರೆ ವೈದ್ಯಾಧಿಕಾರಿಗಳ ಭೇಟಿಯಾಗಿದ್ದು ಈ ವೇಳೆ ವೈದ್ಯರಿಂದ ಮಾಹಿತಿ ಪಡೆದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

ಇತ್ತೀಚಿಗೆ ಮೈಸೂರು ಕೇಂದ್ರ ಕಾರಾಗೃಹದಲ್ಲಿ ಎಸೆನ್ಸ್ ಸೇವನೆ ಮಾಡಿ ಮೂವರು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಭೇಟಿ ನೀಡಿ ಅಧಿಕಾರಿಗಳ ಬಳಿ ಮಾಹಿತಿ ಪಡಿದಿದ್ದೇನೆ. ಕ್ರಿಸ್ಮಸ್ ಪ್ರಯುಕ್ತ ಜೈಲಿನಲ್ಲಿ ಕೇಕ್ ತಯಾರಿಸಲು ಕೇವಲ 60 ಎಂಎಲ್ ಎಸೆನ್ಸ್ ಅನ್ನ ಕೊಡಲಾಗಿತ್ತು. ಡಿ.28 ರಂದು ಹೊಟ್ಟೆ ನೋವು ಎಂದು ಮೂವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಾದೇಶ್, ನಾಗರಾಜು ಮತ್ತು ರಮೇಶ ಎಂಬ ಕೈದಿಗಳು ಚಿಕಿತ್ಸೆ ಫಲಕಾರಿಯಾಗದೆ  ಸಾವನ್ನಪ್ಪಿದ್ದರು. ಮಾದೇಶ ಎಂಬಾತ ಎಸೆನ್ಸ್ ತಿಂದಿರಿವ ಬಗ್ಗೆ ವೈದ್ಯರ ಬಳಿ ಹೇಳಿಕೊಂಡ ಬಳಿಕ ಮೇಲ್ನೋಟಕ್ಕೆ ಎಸೆನ್ಸ್ ತಿಂದ ಕಾರಣದಿಂದ ಸಾವು ಸಂಭವಿಸಿದೆ ಎಂದು ವೈದ್ಯರೂ ಕೂಡ ಅಭಿಪ್ರಾಯ ಪಟ್ಟಿದ್ದಾರೆ. ಎಫ್ಎಸ್ಎಲ್ ವರದಿ ಇನ್ನೂ ಬಂದಿಲ್ಲ. ಇನ್ನು ಎರಡು ವಾರದದೊಳಗೆ ವರದಿ ಬರಲಿದೆ. ಆಗ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಶ್ಯಾಮ್ ಭಟ್ ತಿಳಿಸಿದರು.

ಎಸೆನ್ಸ್ ಒಬ್ಬ ವ್ಯಕ್ತಿ 4 ರಿಂದ 5 ಎಂಎಲ್ ಸೇವನೆ ಮಾಡಿದ್ರೆ ಸಾವಾಗುವ ಸಂಭವ ಇರುತ್ತದೆ. ಹಾಗಾಗಿ ಈ ಮೂವರು ಎಸೆನ್ಸ್ ಸೇವನೆ ಮಾಡಿಯೇ ಸಾವನ್ನಪ್ಪಿದ್ದಾರೆ . ಅವರು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ತೆಗೆದುಕೊಂಡಿಲ್ಲ. ಅದರಲ್ಲಿ ಏನೋ ನಶೆ ಬರುತ್ತೆ ಎಂದು ತೆಗೆದುಕೊಂಡಿರಬಹುದು. ಮುಂದೆ ಈ ರೀತಿ ಘಟನೆ ಸಂಭವಿಸದಂತೆ ಎಚ್ಚರಿಕೆ ವಹಿಸಲು ಜೈಲು ಅಧಿಕಾರಿಳಿಗೆ ಸೂಚನೆ ನೀಡಿದ್ದೇವೆ ಎಂದರು.

Key words: Death,  prisoners, Mysore Central jail, Shyama Bhatt

The post ಎಸೆನ್ಸ್ ಸೇವಿಸಿ ಕೈದಿಗಳ ಸಾವು: ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಶ್ಯಾಮ ಭಟ್ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹായുതിയില്‍ ഭിന്നത; ‘വൈ’ കാറ്റഗറി സുരക്ഷയില്‍ ഷിന്‍ഡെക്ക് അതൃപ്തിയെന്ന് റിപ്പോര്‍ട്ട്

മുംബൈ: 2024 നിയമസഭാ തെരഞ്ഞെടുപ്പിന് ശേഷം മഹാരാഷ്ട്രയിലെ ബി.ജെ.പി നേതൃത്വത്തിലുള്ള മഹായുതി...

"தமிழ்நாடு இன்னொரு மொழிப்போரைச் சந்திக்கவும் தயங்காது…" – உதயநிதி எச்சரிக்கை!

மத்திய கல்வித்துறை அமைச்சர் தர்மேந்திர பிரதான், 'தமிழ்நாடு அரசு புதிய கல்விக்...

Vijayawada Metro Project: స్పీడందుకున్న విజయవాడ మెట్రో రైల్ ప్రాజెక్ట్ పనులు..!

Vijayawada Metro Project: విజయవాడ మెట్రో రైలు ప్రాజెక్టుకు సంబంధించి పనులు...