5
May, 2026

A News 365Times Venture

5
Tuesday
May, 2026

A News 365Times Venture

ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಕೇಸ್: ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಕೋಲ್ಕತ್ತಾ,ಜನವರಿ,20,2025 (www.justkannada.in): ಕೋಲ್ಕತ್ತಾದ ಆರ್. ಜಿ ಕಾರ್ ಆಸ್ಪತ್ರೆಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ  ಸಿಲ್ದಾಹ್ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ.

ಸಿಲ್ದಾಹ್ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ ನ್ಯಾಯಾಧೀಶರಾದ ಅನಿರ್ಬನ್ ದಾಸ್ ಅವರು ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಆರ್ ಜಿ ಕರ್ ಪ್ರಕರಣವು ಪಶ್ಚಿಮ ಬಂಗಾಳವನ್ನು ಮಾತ್ರವಲ್ಲದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇಂದು ಈ ಪ್ರಕರಣದ ಅಪರಾಧಿಗೆ ಶಿಕ್ಷೆ ಪ್ರಕಟಿಸಲಾಗಿದೆ.

ಆಗಸ್ಟ್ 9, 2024 ರಂದು, 36 ಗಂಟೆಗಳ ಪಾಳಿಯ ನಂತರ ವಿಶ್ರಾಂತಿ ಪಡೆಯಲು ಆಸ್ಪತ್ರೆಯ ಸೆಮಿನಾರ್ ಹಾಲ್‌ ನಲ್ಲಿ ಮಲಗಿದ್ದ ಯುವ ತರಬೇತಿ ವೈದ್ಯೆ  ಮೇಲೆ ಅತ್ಯಾಚಾರ  ನಡೆದು ಹತ್ಯೆಯಾಗಿತ್ತು.  ಆರ್‌ಜಿ ಕರ್‌ ಆಸ್ಪತ್ರೆಯಲ್ಲಿ ನಡೆದಿದ್ದ ಈ ಘಟನೆಗೆ ದೇಶವ್ಯಾಪಿ ಅಕ್ರೋಶ ವ್ಯಕ್ತವಾಗಿತ್ತು. ಸಿಸಿಟಿವಿ ದೃಶ್ಯಾವಳಿಯ ಆಧಾರದಲ್ಲಿ ಪೊಲೀಸರು ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಂಜಯ್‌ ರಾಯ್‌ ನನ್ನು ಆಗಸ್ಟ್‌ 10 ರಂದು ಬಂಧಿಸಿದ್ದರು.  ಜನವರಿ 18 ರಂದು ಸಂಜಯ್ ರಾಯ್ ಪ್ರಕರಣದಲ್ಲಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿ ಶಿಕ್ಷೆ ಪ್ರಮಾಣ ಪ್ರಕಟಿಸುವುದನ್ನು ಇಂದಿಗೆ ಕಾಯ್ದಿರಿಸಿತ್ತು.

Key words: Doctor, rape, murder case, Convict, life imprisonment

The post ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಕೇಸ್: ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്റ്റാലിന് പിറകെ മമതയും; ബി.ജെ.പി തരംഗത്തിൽ ദീദിക്കും കാലിടറി

കൊൽക്കത്ത: പശ്ചിമ ബംഗാൾ മുഖ്യമന്ത്രി മമത ബാനർജി ഭവാനിപുർ മണ്ഡലത്തിൽ ബി.ജെ.പി...

32 திமுக அமைச்சர்களில் 15 பேர் அவுட்; சபாநாயகரும் தோல்வி! – Minister Candidates Result Details!

தமிழ்நாடு சட்டமன்றத் தேர்தலில் தற்போதுவரை தமிழக வெற்றிக்கழகம் முன்னிலை பெற்று வருகிறது....

MI Vs LSG: ఆకాశమే హద్దుగా చెలరేగిన రోహిత్ శర్మ.. ఆ రికార్డులన్నీ పటాపంచల్..

ఐపీఎల్ 2026లో భాగంగా లక్నో సూపర్ జెయింట్స్‌తో జరిగిన 47వ మ్యాచ్‌లో...

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ...