19
February, 2025

A News 365Times Venture

19
Wednesday
February, 2025

A News 365Times Venture

ಮೀಟರ್ ಬಡ್ಡಿ ದಂಧೆ:  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ

Date:

ಯಾದಗಿರಿ, ಜನವರಿ, 24,2025 (www.justkannada.in):   ಮೀಟರ್ ಬಡ್ಡಿ ದಂಧೆಗೆ ಯುವಕ ಬಲಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ನಗರದ ಲಾಡೇಜಗಲ್ಲಿಯಲ್ಲಿ ಈ ಘಟನರ ನಡೆದಿದೆ. ಖಾಸೀಂ ಮೃತ ವ್ಯಕ್ತಿ. ಮೀಟರ್ ಬಡ್ಡಿ ಸಾಲ ಮರು ಪಾವತಿಸದಕ್ಕೆ ಖಾಸೀಂ ಮೇಲೆ  ಆರೋಪಿ ಯಾಸೀನ್ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಹತ್ಯೆಗೈದಿದ್ದಾನೆ ಎನ್ನಲಾಗಿದೆ

ಮೃತ ಖಾಸೀಂ ಆರೋಪಿ ಯಾಸೀನ್​ ಬಳಿ ಸಾಲ ಪಡೆದಿದ್ದನು. ಜನವರಿ 19ರಂದು 35 ಸಾವಿರ ರೂಪಾಯಿ ಸಾಲ ಮರು ಪಾವತಿಸಬೇಕಿತ್ತು. ಆದರೆ, ಸಾಲ ಮರು ಪಾವತಿಸುವಲ್ಲಿ ತಡವಾಗಿದ್ದಕ್ಕೆ ಯಾಸೀನ್ ಬಾರುಕೋಲ್, ಮೊಣಕಾಲಿನಿಂದ ಒದ್ದು ಖಾಸಿಂ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.

ಗಂಭೀರವಾಗಿ ಗಾಯಗೊಂಡಿದ್ದ ಖಾಸೀಂನನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ವೈದ್ಯರ ಸಲಹೆ ಮೇರೆಗೆ ಕುಟುಂಬಸ್ಥರು ಖಾಸಿಂನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸೀಂ ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಈ ಕುರಿತು ಯಾಸೀನ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Meter interest scam, Youth, killed

The post ಮೀಟರ್ ಬಡ್ಡಿ ದಂಧೆ:  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹായുതിയില്‍ ഭിന്നത; ‘വൈ’ കാറ്റഗറി സുരക്ഷയില്‍ ഷിന്‍ഡെക്ക് അതൃപ്തിയെന്ന് റിപ്പോര്‍ട്ട്

മുംബൈ: 2024 നിയമസഭാ തെരഞ്ഞെടുപ്പിന് ശേഷം മഹാരാഷ്ട്രയിലെ ബി.ജെ.പി നേതൃത്വത്തിലുള്ള മഹായുതി...

"தமிழ்நாடு இன்னொரு மொழிப்போரைச் சந்திக்கவும் தயங்காது…" – உதயநிதி எச்சரிக்கை!

மத்திய கல்வித்துறை அமைச்சர் தர்மேந்திர பிரதான், 'தமிழ்நாடு அரசு புதிய கல்விக்...

Vijayawada Metro Project: స్పీడందుకున్న విజయవాడ మెట్రో రైల్ ప్రాజెక్ట్ పనులు..!

Vijayawada Metro Project: విజయవాడ మెట్రో రైలు ప్రాజెక్టుకు సంబంధించి పనులు...