15
August, 2026

A News 365Times Venture

15
Saturday
August, 2026

A News 365Times Venture

ಮೀಟರ್ ಬಡ್ಡಿ ದಂಧೆ:  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ

Date:

ಯಾದಗಿರಿ, ಜನವರಿ, 24,2025 (www.justkannada.in):   ಮೀಟರ್ ಬಡ್ಡಿ ದಂಧೆಗೆ ಯುವಕ ಬಲಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ನಗರದ ಲಾಡೇಜಗಲ್ಲಿಯಲ್ಲಿ ಈ ಘಟನರ ನಡೆದಿದೆ. ಖಾಸೀಂ ಮೃತ ವ್ಯಕ್ತಿ. ಮೀಟರ್ ಬಡ್ಡಿ ಸಾಲ ಮರು ಪಾವತಿಸದಕ್ಕೆ ಖಾಸೀಂ ಮೇಲೆ  ಆರೋಪಿ ಯಾಸೀನ್ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಹತ್ಯೆಗೈದಿದ್ದಾನೆ ಎನ್ನಲಾಗಿದೆ

ಮೃತ ಖಾಸೀಂ ಆರೋಪಿ ಯಾಸೀನ್​ ಬಳಿ ಸಾಲ ಪಡೆದಿದ್ದನು. ಜನವರಿ 19ರಂದು 35 ಸಾವಿರ ರೂಪಾಯಿ ಸಾಲ ಮರು ಪಾವತಿಸಬೇಕಿತ್ತು. ಆದರೆ, ಸಾಲ ಮರು ಪಾವತಿಸುವಲ್ಲಿ ತಡವಾಗಿದ್ದಕ್ಕೆ ಯಾಸೀನ್ ಬಾರುಕೋಲ್, ಮೊಣಕಾಲಿನಿಂದ ಒದ್ದು ಖಾಸಿಂ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.

ಗಂಭೀರವಾಗಿ ಗಾಯಗೊಂಡಿದ್ದ ಖಾಸೀಂನನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ವೈದ್ಯರ ಸಲಹೆ ಮೇರೆಗೆ ಕುಟುಂಬಸ್ಥರು ಖಾಸಿಂನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸೀಂ ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಈ ಕುರಿತು ಯಾಸೀನ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Meter interest scam, Youth, killed

The post ಮೀಟರ್ ಬಡ್ಡಿ ದಂಧೆ:  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ട്രംപ്-മോദി സൗഹൃദം ഇന്ത്യ യു.എസ് ബന്ധം ശക്തമാക്കി; സ്വാതന്ത്ര്യ ദിനത്തിൽ ആശംസകൾ നേർന്ന് യു.എസ് സ്റ്റേറ്റ് സെക്രട്ടറി

വാഷിംഗ്ടൺ: ഇന്ത്യയുടെ 80-ാം സ്വാതന്ത്ര്യദിനത്തിൽ രാജ്യത്തെ ജനങ്ങൾക്ക് ആശംസകൾ നേർന്ന് യു.എസ്...

"தமிழ்நாடு முன்னாள் படை வீரர்களின் மகள்கள் திருமணத்திற்கு ரூ.50,000 நிதியுதவி" – விஜய் |சுதந்திர தினம் | Live Updates

தமிழ்நாடு சுதந்திர தின நிகழ்ச்சியில் விருது பெற்றவர்கள்..!சுதந்திர தின விழா உரையில்...

ക്യാമ്പസില്‍ അമ്പലം പണിയണം; അങ്ങനെ കുറേ പണം കിട്ടും; ജെ.എന്‍.യു വി.സിയുടെ ‘മുട്ടന്‍’ ഐഡിയ

ന്യൂദല്‍ഹി: ജെ.എന്‍.യുവിലെ സാമ്പത്തിക പ്രതിസന്ധി പരിഹരിക്കാന്‍ ഒരു ‘ മുട്ടന്‍’ ഐഡിയ...