27
June, 2026

A News 365Times Venture

27
Saturday
June, 2026

A News 365Times Venture

UPSC: ಅರ್ಜಿ ಸಲ್ಲಿಕೆಗೆ ದಾಖಲೆ ಕಡ್ಡಾಯ

Date:

ನವದೆಹಲಿ,ಜನವರಿ,25,2025 (www.justkannada.in): ಅಭ್ಯರ್ಥಿಗಳು ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವಾಗ ವಯಸ್ಸು ದೃಢಪಡಿಸುವ ಮತ್ತು ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಇದಕ್ಕೂ ಮೊದಲು  ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಅಗತ್ಯ ದಾಖಲೆಗಳನ್ನು ಅಪ್‌ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿತ್ತು. ಈ ಮಧ್ಯೆ ಮಾಜಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರು ನಕಲಿ ದಾಖಲೆಗಳನ್ನು ನೀಡಿದ್ದ ಆರೋಪ ಈಚೆಗೆ ಕೇಳಿಬಂದಿದ್ದು,  ಇದರ ಬೆನ್ನಲ್ಲೇ ಇದೀಗ  ಕೇಂದ್ರ ಸರ್ಕಾರ ನಿಯಮಗಳಲ್ಲಿ ಬದಲಾವಣೆ ತಂದಿದೆ.

ಅಭ್ಯರ್ಥಿಗಳು ನಾಗರಿಕ ಸೇವಾ ಪೂರ್ವಭಾವಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ ವೇಳೆ ವಯಸ್ಸು ದೃಢಪಡಿಸುವ ಮತ್ತು ಮೀಸಲಾತಿ ಸಂಬಂಧಿತ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯ ಎಂದು ತಿಳಿಸಿದೆ.  ಆನ್‌ ಲೈನ್ ಅರ್ಜಿ ನಮೂನೆಯೊಂದಿಗೆ ಅಗತ್ಯ ಮಾಹಿತಿ ಮತ್ತು ದಾಖಲೆಗಳನ್ನು ಒದಗಿಸಲು ವಿಫಲ ‘ವಾದರೆ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಜನವರಿ 22ರಂದು ಹೊರಡಿಸಿರುವ ‘ನಾಗರಿಕ ಸೇವಾ ಪರೀಕ್ಷೆಗಳ ನಿಯಮ- 2025’ರಲ್ಲಿ ತಿಳಿಸಲಾಗಿದೆ.

ಕೇಂದ್ರ ಲೋಕಸೇವಾ ಆಯೋಗವು ಈ ಸಾಲಿನ ನಾಗರಿಕ ಸೇವಾ ಪರೀಕ್ಷೆಯ ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಪರೀಕ್ಷೆಯು ಮೇ 25ರಂದು ನಡೆಯಲಿದೆ. ಐಎಎಸ್, ಐಎಫ್‌ಎಸ್ ಮತ್ತು ಐಪಿಎಸ್ ಸೇರಿದಂತೆ ಒಟ್ಟು 979 ಹುದ್ದೆಗಳನ್ನು ಭರ್ತಿ ಮಾಡಲು ನಿರ್ಧರಿಸಲಾಗಿದೆ. ಅಭ್ಯರ್ಥಿಗಳು http:// upsconline.gov.in ವೆಬ್‌ಸೈಟ್ ಮೂಲಕ ಫೆಬ್ರುವರಿ 11, 2025ರ ಸಂಜೆ  6 ಗಂಟೆ ಒಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

Key words: Documents, mandatory,  filing, application, UPSC, Exam

The post UPSC: ಅರ್ಜಿ ಸಲ್ಲಿಕೆಗೆ ದಾಖಲೆ ಕಡ್ಡಾಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഉറ്റവരും ഉടയരവരും ഏറ്റെടുത്തില്ല; മുന്‍ ആര്‍.എസ്.എസ് പ്രവര്‍ത്തകന്റെ അന്ത്യകര്‍മങ്ങള്‍ ചെയ്ത് ലീഗ് വനിതാ നേതാവ്

കാസര്‍ഗോഡ്: കാന്‍സര്‍ ബാധിച്ച് മരിച്ച മുന്‍ ആര്‍.എസ്.എസ് പ്രവര്‍ത്തകന്റെ അന്ത്യ കര്‍മങ്ങള്‍...

`தமிழ்நாட்டில் தகுதியான பலர் இருக்கையில்..!' – டெல்லி பிரதிநிதி நியமனம்; விளக்கம் கேட்கும் பிரேமலதா!

தமிழ்நாட்டின் டெல்லி சிறப்புப் பிரதிநிதியாக வெங்கட நாராயணாவை நியமித்துள்ளது தமிழ்நாடு அரசு....

Bank Fraud: భారీ బ్యాంకు మోసం.. రూ.3.66 కోట్ల ఇన్సూరెన్స్ పాలసీలను అటాచ్ చేసిన ఈడీ.!

Bank Fraud: బ్యాంకు మోసం కేసులో దర్యాప్తు కొనసాగిస్తున్న ఎన్‌ఫోర్స్‌మెంట్ డైరెక్టరేట్...

ಬಿಡದಿ ಟೌನ್ ಶಿಪ್ ಪರ, ವಿರುದ್ದ ಹೋರಾಟ: HDK ಭೇಟಿ, ಪೊಲೀಸ್‍ ಸರ್ಪಗಾವಲು

ರಾಮನಗರ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ವಿರೋಧಿಸಿ ಒಂದೆಡೆ  ರೈತರ...