26
June, 2026

A News 365Times Venture

26
Friday
June, 2026

A News 365Times Venture

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಶೀಘ್ರದಲ್ಲೇ ಬಲಿಷ್ಠ ಕಾನೂನು, ಕಠಿಣ ಕ್ರಮ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಜನವರಿ,25,2025 (www.justkannada.in): ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಶೀಘ್ರದಲ್ಲೇ ಬಲಿಷ್ಠ ಕಾನೂನು ಜಾರಿ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಮೈಕ್ರೋಫೈನಾನ್ಸ್ ಹಾವಳಿ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಕಠಿಣ ಕ್ರಮ ಕೈಗೊಳ್ಳಲು ಬಲಿಷ್ಠ ಕಾನೂನು ತರಲು ಸ್ಪಷ್ಟ ಸೂಚನೆ ನೀಡಿದ್ದಾರೆ.  ಮೈಕ್ರೋಫೈನಾನ್ಸ್ ಹಾವಳಿ ಹೆಚ್ಚಾಗಿದೆ. ಹೀಗಾಗಿ ಇದನ್ನು ಮಟ್ಟ ಹಾಕಲು ಬಲಿಷ್ಠ ಕ್ರಮ ಕೈಗೊಳ್ಳಲು ನಮ್ಮೆಲ್ಲರ ಸಮ್ಮುಖದಲ್ಲಿಯೇ ಸೂಚಿಸಿದ್ದಾರೆ ಎಂದರು.

ಈ ಪ್ರಕರಣ ಕುರಿತು ಹಗುರವಾಗಿ ತೆಗೆದುಕೊಳ್ಳುವುದು ಬೇಡ. ಇದೊಂದು ಗಂಭೀರ ವಿಷಯವಾಗಿದ್ದು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಅಷ್ಟೇ ಗಂಭೀರವಾಗಿದ್ದಾರೆ ಎಂದರು.

ಮುಡಾ ಹಗರಣಖ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ವಿಚಾರ ಬಿಜೆಪಿಯವರ ಟೀಕೆ  ಕುರಿತು ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್,  ಲೋಕಾಯುಕ್ತದ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲವೇ? ಸಿಬಿಐ ತನಿಖೆ ಇದೆ ಎಂದರೆ ಅರ್ಥ ಏನು? ಸಿಬಿಐ ಬಿಜೆಪಿಯ ಅಂಗ ಸಂಸ್ಥೆಯಾ?  ಎಂದು ಕಿಡಿಕಾರಿದರು.

Key words: Strong law, strict action, microfinance, harassment, Minister, M.B. Patil

The post ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಶೀಘ್ರದಲ್ಲೇ ಬಲಿಷ್ಠ ಕಾನೂನು, ಕಠಿಣ ಕ್ರಮ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

அமலுக்கு வரும் பாஸ்போர்ட் திருத்தச் சட்டம்; ஏறும் பாஸ்போர்ட் கட்டணம்; எவ்வளவு, எப்போது முதல்?

மத்திய வெளியுறவுத் துறை அமைச்சகம் 'பாஸ்போர்ட் திருத்தச் சட்டம், 2026'-ஐ கொண்டு...

Benefits of Hugging: భార్యాభర్తలు కౌగిలించుకుని నిద్రపోతే కలిగే అద్భుత ప్రయోజనాలు ఇవే.!

Benefits of Hugging: ప్రస్తుత ఆధునిక జీవితంలో పనిఒత్తిడి, కుటుంబ బాధ్యతలు,...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ...