19
February, 2025

A News 365Times Venture

19
Wednesday
February, 2025

A News 365Times Venture

ಜ. 27ರಂದು ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ

Date:

ಬೆಂಗಳೂರು, ಜನವರಿ, 25,2025 (www.justkannada.in):  ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧದ ಪಶ್ಚಿಮ ದ್ವಾರದಲ್ಲಿ ನಿರ್ಮಿಸಲಾಗಿರುವ 25 ಅಡಿ ಎತ್ತರದ ಭುವನೇಶ್ವರಿ ಕಂಚಿನ ಪ್ರತಿಮೆ ಜನವರಿ 27 ರಂದು ನಿತ್ಯ ಆರ್ಚನೆ ನೆರವೇರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದರು.

ವಿಕಾಸಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿ ಮಾಹಿತಿ ನೀಡಿದ ಸಚಿವ ಶಿವರಾಜ್ ತಂಗಡಗಿ , ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಹಾಗೂ ಉಸಿರಾಗಲಿ’ ಕನ್ನಡ ಎಂಬ ಶೀರ್ಷಿಕೆಯಡಿ ವರ್ಷವಿಡೀ ರಾಜ್ಯಾದ್ಯಂತ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಅದರಂತೆ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಲು ನಿರ್ಧರಿಸಲಾಗಿತ್ತು. ಪ್ರತಿಮೆ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಜನವರಿ 27ರಂದು ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಈ ಹಬ್ಬದ ವಾತಾವರಣದಲ್ಲಿ ಸಾರ್ವಜನಿಕರು ಹಾಗೂ ಕನ್ನಡಪರ ಸಂಘಟನೆಗಳು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಬಿಬಿಎಂಪಿಯನ್ನು ಮೆರವಣಿಗೆಗೆ ಬಳಸಿಕೊಳ್ಳಲಾಗಿದ್ದು, ಅಂದು ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳನ್ನು ಕನ್ನಡದ ಧ್ವಜ ಹಾರಾಡಲಿದೆ. ಉಚಿತವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡದ ಧ್ವಜವನ್ನು ವಿತರಿಸಲಾಗುವುದು ಎಂದರು.‌

ಹೊಯ್ಸಳ ಶೈಲಿಯ ಪೀಠ ನಿರ್ಮಾಣ

ನಾಡದೇವಿ ಪ್ರತಿಮೆಯ ಹಿಂದೆ ಕರ್ನಾಟಕ ನಕ್ಷೆ ಹಾಗೂ ಉಬ್ಬು ಶಿಲ್ಪ ಇರಲಿದೆ‌. ಮುಂಭಾಗದಲ್ಲಿ‌ ಭೌಗೋಳಿಕ ನಕ್ಷೆ ಇದ್ದರೆ, ಹಿಂಬದಿಯಲ್ಲಿ ನಾಡಗೀತೆಯನ್ನು ಕೆತ್ತಲಾಗಿದೆ. ಕರ್ನಾಟಕದ ಪ್ರಸಿದ್ಧ ಶಿಲ್ಪಕಲಾ ಶೈಲಿಗಳಾದ ಹೊಯ್ಸಳ, ಚಾಲುಕ್ಯ ಕದಂಬ ಹಾಗೂ ಆಧುನಿಕ ನೈಜ ಶಿಲ್ಪಗಳ ಶೈಲಿಗಳನ್ನು ಅಳವಡಿಸಿ ಪ್ರತಿಮೆಯನ್ನು ನಿರ್ಮಿಸಲಾಗಿದೆ. ಇದರಲ್ಲಿ ರಾಜಲಾಂಛನಗಳಾದ ಹೊಯ್ಸಳ ಲಾಂಛನ, ವೈಜಯಂತಿ ಮಾಲೆ, ಕಂಠಿಹಾರ, ಗಂಡ ಭೇರುಂಡ ಇರಲಿದೆ. ನಾವು ಅಂದುಕೊಂಡಕ್ಕಿಂತ ಚೆನ್ನಾಗಿ ಪ್ರತಿಮೆ ಮೂಡಿ ಬಂದಿದೆ ಎಂದು ಸಚಿವರು ಹೇಳಿದರು.

ಪ್ರತಿಮೆಯ ಸುತ್ತಲೂ ಉದ್ಯಾನವನ, ಆವರಣದ ಸುತ್ತಲೂ ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ. ಪಶ್ಚಿಮದ ದ್ವಾರಕ್ಕೆ ಇರುವ ನಾಡದೇವಿ ವೀಕ್ಷಣೆಗೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆಂದೇ ಪಶ್ಚಿಮಕ್ಕೆ ಪ್ರತ್ಯೇಕ ಗೇಟ್ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಸಂಜೆವರೆಗೆ ಸಾರ್ವಜನಿಕರ ಭೇಟಿಗೆ ಅವಕಾಶ ಇರಲಿದೆ ಎಂದರು.

ಪ್ರತಿಮೆ ಅನಾವರಣದ ಕಾರ್ಯಕ್ರಮದ ಅಂಗವಾಗಿ ಬೆಂಗಳೂರಿನ 4 ದಿಕ್ಕುಗಳಿಂದ ಮೆರವಣಿಗೆ ಆಗಮಿಸಲಿದ್ದು, ಜ್ಞಾನಪೀಠ ಪುರಸ್ಕೃತರು ಹಾಗೂ ನಾಡಿನ ಹೆಸರಾಂತ ಮಹನೀಯರ ಫೋಟೋಗಳನ್ನು ಇಡಲಾದ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ. ಪೂರ್ವ ದಿಕ್ಕಿನಿಂದ (ಇಂದಿರಾ ನಗರ ): ಪಂಪ, ರನ್ನ, ಪೊನ್ನ, ಜನ್ನ, ಸರ್‌.ಎಂ. ವಿಶ್ವೇಶ್ವರಯ್ಯ, ಸರ್‌ ಸಿ.ವಿ. ರಾಮನ್,  ಸಿ.ಎನ್‌.ಆರ್‌. ರಾವ್,  ಭೀಮ್‌ ಸೇನ್‌ ಜೋಷಿ,  ಡಾ. ರಾಜ್‌ ಕುಮಾರ್‌, ಎಸ್.‌ ನಿಜಲಿಂಗಪ್ಪ,  ಶ್ರೀ ಶಿವಕುಮಾರ ಸ್ವಾಮೀಜಿ‌, ದೇ. ಜವರೇಗೌಡ,  ಡಾ. ವಿರೇಂದ್ರ ಹೆಗಡೆ, ಡಾ. ಪುನೀತ್‌ ರಾಜ್‌ ಕುಮಾರ್ ಅವರ ಫೋಟೋವಿರುವ ಪಲ್ಲಕ್ಕಿ ಮೆರವಣಿಗೆಯಲ್ಲಿ ಸಾಗಲಿದೆ.

ಪಶ್ಚಿಮ ದಿಕ್ಕು: (ಕೆಂಗೇರಿ ಉಪನಗರ ): ಜ್ಞಾನಪೀಠ ಪ್ರಶಸ್ತಿ ಪುರಸ್ಕತರು ಹಾಗೂ  ರಾಷ್ಟ್ರಕವಿಗಳಾದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮಕಾರಂತ,  ಮಾಸ್ತಿ ವೆಂಕಟೇಶ ಅಯ್ಯಾಂಗಾರ್‌,  ವಿ‌.ಕೃ. ಗೋಕಾಕ್‌, ಡಾ. ಯು. ಆರ್.‌ ಅನಂತ ಮೂರ್ತಿ, ಡಾ. ಗಿರೀಶ್‌ ಕಾರ್ನಾಡ್‌, ಡಾ. ಚಂದ್ರಶೇಖರ ಕಂಬಾರ, ಮಂಜೇಶ್ವರ ಗೋವಿಂದ ಪೈ, ಡಾ. ಜಿ.ಎಸ್.‌ ಶಿವರುದ್ರಪ್ಪ ಅವರ ಫೋಟೋ ಮೆರವಣಿಗೆಯಲ್ಲಿ ಬರಲಿದೆ.

ಉತ್ತರ ದಿಕ್ಕು : (ಹೆಬ್ಬಾಳ) ಈ ದಿಕ್ಕಿನಿಂದ  ಕದಂಬರು, ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ವಿಜಯನಗರ ಅರಸರು, ಗಂಗರು, ಮೈಸೂರು ರಾಜ್ಯರ ಲಾಂಛನ ಹಾಗೂ  ಹಲ್ಮಿಡಿ ಶಾಸನದ ಪ್ರತಿರೂಪ ಇರಲಿದೆ.

ದಕ್ಷಿಣ ದಿಕ್ಕು : (ಬಸವನಗುಡಿ ಬುಲ್ ಟೆಂಪಲ್ ) ಇನ್ನು ದಕ್ಷಿಣ ದಿಕ್ಕಿನಿಂದ  ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ, ಕನಕದಾಸರು, ಪುರಂದರದಾಸರು, ಸಂಚಿ ಹೊನ್ನಮ್ಮ, ದಾನ ಚಿಂತಾಮಣಿ ಅತ್ತಿಮಬ್ಬೆ, ಅಕ್ಕಮಹಾದೇವಿ, ಕುಮಾರವ್ಯಾಸ, ಸಂತ ಶಿಶುನಾಳ ಷರೀಫ, ರೆವರೆಂಡ್  ಎಫ್  ಕಿಟ್ಟೆಲ್, ಬಿ.ಎಲ್.‌ ರೈಸ್ ಅವರ ಪಲ್ಲಕ್ಕಿ ಬರಲಿದ್ದು, ನಾಲ್ಕು ದಿಕ್ಕುಗಳಿನಿಂದ ಮೆರವಣಿಗೆ ಸಾಗಿ ಅಂತಿಮವಾಗಿ ನಾಡದೇವಿ ಭುವನೇಶ್ವರಿ ಪ್ರತಿಮೆ ಇರುವ ವಿಧಾನಸೌಧದ ಬಳಿ ತಲುಪಲಿವೆ. ಅಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪ್ರತಿಯೊಂದು ದಿಕ್ಕಿನಲ್ಲಿ ಶಾಸಕರು ಮೆರವಣಿಗೆ ಚಾಲನೆ ನೀಡಲಾಗಿದ್ದು, ಹತ್ತಾರು ಕಲಾ ತಂಡಗಳು ಸೇರಿದಂತೆ ಸಾವಿರಾರು ಮಂದಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ನಾಡದೇವಿ ಭುವನೇಶ್ವರಿ ಪ್ರತಿಮೆ ಅನಾವರಣದ ಬಳಿಕ ಕನ್ನಡ ಗೀತೆಗಳ ಕಾರ್ಯಕ್ರಮ ಮತ್ತು ಹೊನ್ನ ಬಿತ್ತೇವು – ನೃತ್ಯ ರೂಪಕ ಕಾರ್ಯಕ್ರಮ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ಇರಲಿವೆ ಎಂದು ಸಚಿವರು ವಿವರಿಸಿದರು.

Key words: CM, Siddaramaiah, Bhuvaneshwari statue, Jan. 27

The post ಜ. 27ರಂದು ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಕಂಚಿನ ಪ್ರತಿಮೆ ಅನಾವರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹായുതിയില്‍ ഭിന്നത; ‘വൈ’ കാറ്റഗറി സുരക്ഷയില്‍ ഷിന്‍ഡെക്ക് അതൃപ്തിയെന്ന് റിപ്പോര്‍ട്ട്

മുംബൈ: 2024 നിയമസഭാ തെരഞ്ഞെടുപ്പിന് ശേഷം മഹാരാഷ്ട്രയിലെ ബി.ജെ.പി നേതൃത്വത്തിലുള്ള മഹായുതി...

"தமிழ்நாடு இன்னொரு மொழிப்போரைச் சந்திக்கவும் தயங்காது…" – உதயநிதி எச்சரிக்கை!

மத்திய கல்வித்துறை அமைச்சர் தர்மேந்திர பிரதான், 'தமிழ்நாடு அரசு புதிய கல்விக்...

Vijayawada Metro Project: స్పీడందుకున్న విజయవాడ మెట్రో రైల్ ప్రాజెక్ట్ పనులు..!

Vijayawada Metro Project: విజయవాడ మెట్రో రైలు ప్రాజెక్టుకు సంబంధించి పనులు...