15
August, 2026

A News 365Times Venture

15
Saturday
August, 2026

A News 365Times Venture

ಕೇಂದ್ರ ಬಜೆಟ್​​: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ

Date:

ಬೆಂಗಳೂರು, ಜನವರಿ 25,2025 (www.jsutkannada.in):  ಫೆಬ್ರವರಿ 1 ರಂದು  ಕೇಂದ್ರ ಬಜೆಟ್ ಮಂಡನೆಯಾಗಲಿದ್ದು,  ಈ ಹಿನ್ನೆಲೆಯಲ್ಲಿ ಕೇಂದ್ರ ಬಜೆಟ್​​ ನಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ ಬರೆದಿದ್ದಾರೆ.

ಈ ಸಂಬಂಧ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ಉತ್ತರ- ದಕ್ಷಿಣ ಕಾರಿಡಾರ್ ​ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್​​ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್​ಗೆ 12 ಸಾವಿರ ಕೋಟಿ ರೂ ಅಗತ್ಯವಿದೆ. ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬೆಂಗಳೂರಿನಲ್ಲಿ ಸದ್ಯ ಒಂದುವರೆ ಕೋಟಿ ಜನಸಂಖ್ಯೆ ಇದೆ. ಬಿಸಿನೆಸ್ ಕಾರಿಡಾರ್ ​ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್​ ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಿ ಹೆಚ್ಚಿನ ಅನುದಾನ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚೆಗೆ ಕೇಂದ್ರ ಸರ್ಕಾರ ರಾಜ್ಯಗಳಿಗೆ  ತೆರಿಗೆ ಹಣವನ್ನ ಹಂಚಿಕೆ ಮಾಡಿತ್ತು. ಅತೀ ಹೆಚ್ಚು ಹೆಚ್ಚು ತೆರಿಗೆ ಕಟ್ಟುತ್ತಿರುವುದು ಕರ್ನಾಟಕ. ಆದರೆ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರು ಆರೋಪಿಸಿದ್ದರು.   ನಮ್ಮ ತೆರಿಗೆ ನಮ್ಮ ಹಕ್ಕು. ಬಿಜೆಪಿಯ ಇಷ್ಟೊಂದು ಸಂಸದರಿದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಪ್ರಶ್ನೆ ಮಾಡುತ್ತಿಲ್ಲ ಏಕೆ ಎಂದು ಕಿಡಿಕಾರಿದ್ದರು.

Key words: Union Budget,  DCM, DK Shivakumar’,  letter, Nirmala Sitharaman

The post ಕೇಂದ್ರ ಬಜೆಟ್​​: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಡಿಸಿಎಂ ಡಿಕೆ ಶಿವಕುಮಾರ್​​ ಪತ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

IND Vs SL: శ్రీలంకపై వీరవిహారం.. వచ్చిన అవకాశాన్ని సెంచరీ వైపు మలుస్తున్న పడిక్కల్!

దేవదత్ పడిక్కల్ తనకు లభించిన అవకాశాన్ని రెండు చేతులా ఒసిసిపట్టుకుంటూ అద్భుతమైన...

‘കുറ്റവാളിമുക്ത പാർലമെന്റ് സമ്മാനമായി വേണം’; പ്രധാനമന്ത്രിയോട് ആവശ്യപ്പെട്ട് സോനം വാങ്ചുക്

ന്യൂഡൽഹി: ഈ സ്വാതന്ത്ര്യദിനത്തിൽ പ്രധാനമന്ത്രി നരേന്ദ്ര മോദിയോട് ‘കുറ്റവാളിമുക്ത പാർലമെന്റ്’ സമ്മാനമായി...

பள்ளி மாணவர் கொலை: "அரசு கண்டும் காணாமல் வாயை மூடிக் கொண்டு இருப்பது வெட்கக்கேடு" – உதயநிதி கண்டனம்

சென்னை திருவொற்றியூரில் போதைப்பொருள் புழக்கத்தைத் தட்டிக்கேட்டதால், அரசுப் பள்ளியில் +2 படித்து...