15
August, 2026

A News 365Times Venture

15
Saturday
August, 2026

A News 365Times Venture

ಅಕ್ರಮ ಆಸ್ತಿ ಗಳಿಕೆ : ಬಿಲ್ ಕಲೆಕ್ಟರ್ ಗೆ  3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ

Date:

ಬೆಂಗಳೂರು,ಗ್ರಾಮಾಂತರ ಜನವರಿ, 28,2025 (www.justkannada.in): ಸರ್ಕಾರಿ ಸೇವಾವಧಿಯಲ್ಲಿ ತನ್ನ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆಂಬ  ಮಾಹಿತಿಯ ಆಧಾರದ ಮೇಲೆ ಚಿಕ್ಕಜಾಲ ಬಿಲ್ ಕಲೆಕ್ಟರ್  ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50.20 ಲಕ್ಷ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್‌ ಪೆಕ್ಟ‌ರ್ ಎಂ.ಜೆ. ದಯಾನಂದ್ ಅವರು ನೀಡಿದ ಸೋರ್ಸ್ ವರದಿಯ ಆಧಾರದ ಮೇಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಲೋಕಾಯುಕ್ತ ಪೊಲೀಸ್ ಉಪಾಧಿಕ್ಷಕರಾದ ವಿಜಯ್‌ ಕುಮಾರ್ ಅವರು ಪ್ರಕರಣವನ್ನು ದಾಖಲಿಸಿದ್ದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಎನ್. ನವೀನ್ ಕುಮಾರ್ ಅವರು,  ಆರೋಪಿತ ಕೃಷ್ಣಪ್ಪ ತನ್ನ ಹಾಗೂ ತನ್ನ ಕುಟುಂಬದವರ ಹೆಸರಿನಲ್ಲಿ ರೂ. 63,66,528 (400.78%) ಗಳಷ್ಟು ಹೆಚ್ಚುವರಿ ಆಸ್ತಿಯನ್ನು ಗಳಿಸಿರುವ ಬಗ್ಗೆ ಸಿಸಿಹೆಚ್-24 ಬೆಂಗಳೂರು ನಗರ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿ ವಿಚಾರಣೆ ನಡೆಸಲಾಗಿತ್ತು.

ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಆರೋಪಿತರು ತನ್ನ ಹಾಗೂ ತನ್ನ ಕುಟುಂಬದವರ ಹೆಸರಿನಲ್ಲಿ ಅಕ್ರಮ ಆಸ್ತಿಯನ್ನು ಹೊಂದಿರುವುದು ವಿಚಾರಣೆಯಿಂದ ದೃಢಪಟ್ಟ ಕಾರಣ 2025 ರ ಜನವರಿ 27ರಂದು ತೀರ್ಪು ಪ್ರಕಟಿಸಿ, ಆರೋಪಿತರಿಗೆ 03 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಮತ್ತು 50,20,000/-ರೂ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ 06 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನ್ಯಾಯಾಲಯ ತೀರ್ಪು ನೀಡಿದೆ ಎಂದು ಲೋಕಾಯುಕ್ತ ಎಸ್.ಪಿ ಪವನ್ ನೆಜ್ಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Bill collector, sentenced, 3 years, imprisonment, fine

The post ಅಕ್ರಮ ಆಸ್ತಿ ಗಳಿಕೆ : ಬಿಲ್ ಕಲೆಕ್ಟರ್ ಗೆ  3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലുങ്കിവാല അധിക്ഷേപം: സ്വാതന്ത്ര്യദിനത്തില്‍ ലുങ്കിയുടുത്ത് പതാകയുയര്‍ത്തി വി.ടി ബല്‍റാം

പാലക്കാട്: സ്വാതന്ത്ര്യ ദിന ആഘോഷങ്ങള്‍ക്കിടെ ലുങ്കിയുടുത്ത് പതാകയുയര്‍ത്തി വി.ടി ബല്‍റാം എം.എല്‍എ....

விஜய் குறித்து நயினார் சர்ச்சைப் பேச்சு; "தாயை இழிவுபடுத்துவதை ஏற்க முடியாது" – சீறும் அண்ணாமலை

கமலாலயத்தில் நடந்த சுதந்திர தின விழாவில் பேசிய பாஜக மாநிலத் தலைவர்...

IND Vs SL: శ్రీలంకపై వీరవిహారం.. వచ్చిన అవకాశాన్ని సెంచరీ వైపు మలుస్తున్న పడిక్కల్!

దేవదత్ పడిక్కల్ తనకు లభించిన అవకాశాన్ని రెండు చేతులా ఒసిసిపట్టుకుంటూ అద్భుతమైన...

‘കുറ്റവാളിമുക്ത പാർലമെന്റ് സമ്മാനമായി വേണം’; പ്രധാനമന്ത്രിയോട് ആവശ്യപ്പെട്ട് സോനം വാങ്ചുക്

ന്യൂഡൽഹി: ഈ സ്വാതന്ത്ര്യദിനത്തിൽ പ്രധാനമന്ത്രി നരേന്ദ്ര മോദിയോട് ‘കുറ്റവാളിമുക്ത പാർലമെന്റ്’ സമ്മാനമായി...