14
February, 2025

A News 365Times Venture

14
Friday
February, 2025

A News 365Times Venture

ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಿಸಲು ಸಮ್ಮತಿ-ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು, ಜನವರಿ,30,2025 (www.justkannada.in): ಬೆಂಗಳೂರು ನಗರದ ಹೆಸರುಘಟ್ಟ ಹುಲ್ಲುಗಾವಲಿನ ಪ್ರದೇಶವನ್ನು “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ” ಎಂದು ಘೋಷಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ವನ್ಯಜೀವಿ ಮಂಡಳಿ ಸಭೆ ಅಂಗೀಕಾರ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಸಭೆಯ ಬಳಿಕ  ಮಾಧ್ಯಮಗಳಿಗೆ ವಿವರ ನೀಡಿದ ಅವರು, ಹೆಸರಘಟ್ಟವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಬೇಕು ಎಂಬುದು ಬಹು ದಿನಗಳ ಬೇಡಿಕೆಯಾಗಿತ್ತು.  ಈ ಬಗ್ಗೆ ಆಂದೋಲನವೂ ನಡೆದಿತ್ತು. ಪ್ರಕೃತಿ ಪರಿಸರ ಸಂರಕ್ಷಣೆಗೆ ಶ್ರಮಿಸುತ್ತಿರುವ ಸರ್ಕಾರ ಇಂದು ಈ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದರು.

2021ರ ಜನವರಿ 19ರಂದು ನಡೆದಿದ್ದ 15ನೇ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಈ ಪ್ರಸ್ತಾಪ ತಿರಸ್ಕರಿಸಲಾಗಿತ್ತು. ರಾಜ್ಯ ಹೈಕೋರ್ಟ್ ಈ ಕುರಿತು ಪುನರ್ ನಿರ್ಣಯ ಕೈಗೊಳ್ಳುವಂತೆ ಸೂಚಿಸಿತ್ತು. ಬೆಂಗಳೂರು ಕಾಂಕ್ರೀಟ್ ಕಾಡಾಗಿ ಮಾತ್ರ ಬೆಳೆಯದೆ, ಹಚ್ಚ ಹಸುರಿನ ತಾಣವಾಗಿಯೂ ಉಳಿಯಬೇಕು ಎಂಬ ಮಹತ್ವದ ಉದ್ದೇಶದಿಂದ ನಮ್ಮ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.

ಹೆಸರಘಟ್ಟ ಹುಲ್ಲುಗಾವಲಿನ 356 ಎಕರೆ, ಬೈರಾಪುರ ಕೆರೆಯ 383 ಎಕರೆ, ಬೈತಾ ಕೆರೆಯ 165 ಎಕರೆ, ಹೆಸರಘಟ್ಟ ಕೆರೆಯ 1356 ಎಕರೆ ಮತ್ತು ಪಶುಸಂಗೋಪನಾ ಇಲಾಖೆಯವರ ಸ್ವಾಧೀನದಲ್ಲಿರುವ 2750 ಎಕರೆ ಸೇರಿ ಒಟ್ಟು. 5010 ಎಕರೆ ಪ್ರದೇಶವನ್ನು ವನ್ಯಜೀವಿ (ಸಂರಕ್ಷಣಾ) ಕಾಯ್ದೆ, 1972 ಸೆಕ್ಷನ್ 36ಎ ಪ್ರಕಾರ “ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ”ವನ್ನಾಗಿ ಘೋಷಿಸಲು ಸಭೆ ಸಮ್ಮತಿಸಿದೆ ಎಂದು ವಿವರಿಸಿದರು.

Key words: Hesarghatta, Protected, Grassland Wildlife Board, Minister, Ishwar Khandre

The post ಗ್ರೇಟರ್ ಹೆಸರುಘಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಎಂದು ಘೋಷಿಸಲು ಸಮ್ಮತಿ-ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Kishan Reddy: మాజీ సీఎం కేసీఆర్, సీఎం రేవంత్ రెడ్డిలకు కేంద్రమంత్రి సవాల్!

మాజీ సీఎం కేసీఆర్, సీఎం రేవంత్ రెడ్డిలకు కేంద్రమంత్రి కిషన్ రెడ్డి...

ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಬೆಂಗಳೂರು, Feb.12,2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್...

മലയോര ഹൈവേ; 250 കി.മീ പണി പൂര്‍ത്തിയായി, ഒരു വര്‍ഷത്തിനകം 200 കി.മീ കൂടി; ആദ്യ റീച്ചിന്റെ ഉദ്ഘാടനം നാളെ

തിരുവനന്തപുരം: കാസര്‍ഗോഡ് ജില്ലയിലെ നന്ദാരപ്പടവ് മുതല്‍ തിരുവനന്തപുരം ജില്ലയിലെ പാറശ്ശാലവരെ നീളുന്ന...

`மனைவி கணவரை தவிர்த்து வேறொருவர் மீது காதலும், நெருக்கமும் கொண்டிருப்பது தகாத உறவாகாது'- MP ஹைகோர்ட்

மத்தியப் பிரதேசத்தைச் சேர்ந்த ஒருவர் தன்னுடைய மனைவிக்கு வேறு ஒருவருடன் தொடர்பு...