14
February, 2025

A News 365Times Venture

14
Friday
February, 2025

A News 365Times Venture

ಫೇಸ್‌ಬುಕ್‌ ನಲ್ಲಿ ಫೇಕ್ ಅಕೌಂಟ್ ಸೃಷ್ಟಿಸಿ ವಂಚಿಸಿದ್ದ 7 ಆರೋಪಿಗಳು ಅಂದರ್

Date:

ಬೆಂಗಳೂರು, ಜನವರಿ,31,2025 (www.justkannada.in): ಫೇಸ್‌ಬುಕ್‌ ನಲ್ಲಿ ನಕಲಿ ಅಕೌಂಟ್ ಸೃಷ್ಟಿಸಿ ವಂಚಿಸುತ್ತಿದ್ದ 7 ಆರೋಪಿಗಳನ್ನ ಆಡುಗೋಡಿ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.

ಮುದಾಸೀರ್, ಸೈಯ್ಯದ್ ಡ್ಯಾನಿಶ್, ಶಶಿಕುಮಾರ್, ಕಾಸೀಫ್, ಅಜರುದ್ದೀನ್, ಇಮ್ತಿಯಾಜ್ ಹಾಗೂ ಶಫಿವುಲ್ಲಾ ಷರೀಫ್  ಬಂಧಿತ ಆರೋಪಿಗಳು. ಆರೋಪಿಗಳನ್ನ ಮೈಸೂರಿನ ವಿವಿಧೆಡೆಗಳಲ್ಲಿ ಬಂಧಿಸಲಾಗಿದೆ.

ಬಂಧಿತ 7 ಆರೋಪಿಗಳು  ಮೊಹಮ್ಮದ್ ಕಾಶಿಫ್ ಎಂಬುವವರ ಸ್ನೇಹಿತನ ಹೆಸರಿನಲ್ಲಿ ಫೇಸ್‌ಬುಕ್‌  ನಕಲಿ ಖಾತೆ ಸೃಷ್ಟಿಸಿದ್ದ ಆರೋಪಿಗಳು 1.50 ಲಕ್ಷ ರೂ ಲಪಟಾಯಿಸಿದ್ದರು. ಈ ಕುರಿತು ಮೊಹಮ್ಮದ್ ಕಾಶಿಫ್ ದೂರು ನೀಡಿದ್ದರು.  ಇದೀಗ 7 ಆರೋಪಿಗಳನ್ನ ಬಂಧಿಸಲಾಗಿದೆ.

ಈ ಕುರಿತು ಮಾತನಾಡಿ ಮಾಹಿತಿ ನೀಡಿರುವ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು, ಪ್ರಕರಣದ ತನಿಖೆ  ನಡೆಸಿದ ಪೊಲೀಸರು, ಹಣ ವರ್ಗಾವಣೆಯಾದ ಬ್ಯಾಂಕ್‌ ನ ಮಾಹಿತಿ ಕಲೆ ಹಾಕಿದಾಗ ಮೈಸೂರಿನಲ್ಲಿರುವ ಬ್ಯಾಂಕ್‌ ವೊಂದರ ಖಾತೆಗೆ ಹಣ ವರ್ಗಾವಣೆಯಾಗಿರುವುದು ತಿಳಿದು ಬಂದಿತ್ತು. ಆರೋಪಿಯನ್ನ ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಆತ ನೀಡಿದ ಮಾಹಿತಿ ಅನ್ವಯ ಉಳಿದ 6 ಜನ ಆರೋಪಿಗಳನ್ನ ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 9 ಮೊಬೈಲ್ ಫೋನ್‌ಗಳು, 11 ಬ್ಯಾಂಕ್ ಪಾಸ್‌ಬುಕ್, 6 ಚೆಕ್ ಬುಕ್, 31 ಎಟಿಎಂ ಕಾರ್ಡ್, 9 ಆಧಾರ್ ಕಾರ್ಡ್‌ಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

Key words: 7 accused,creating, fake accounts, Facebook, arrest

The post ಫೇಸ್‌ಬುಕ್‌ ನಲ್ಲಿ ಫೇಕ್ ಅಕೌಂಟ್ ಸೃಷ್ಟಿಸಿ ವಂಚಿಸಿದ್ದ 7 ಆರೋಪಿಗಳು ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Kishan Reddy: మాజీ సీఎం కేసీఆర్, సీఎం రేవంత్ రెడ్డిలకు కేంద్రమంత్రి సవాల్!

మాజీ సీఎం కేసీఆర్, సీఎం రేవంత్ రెడ్డిలకు కేంద్రమంత్రి కిషన్ రెడ్డి...

ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಬೆಂಗಳೂರು, Feb.12,2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್...

മലയോര ഹൈവേ; 250 കി.മീ പണി പൂര്‍ത്തിയായി, ഒരു വര്‍ഷത്തിനകം 200 കി.മീ കൂടി; ആദ്യ റീച്ചിന്റെ ഉദ്ഘാടനം നാളെ

തിരുവനന്തപുരം: കാസര്‍ഗോഡ് ജില്ലയിലെ നന്ദാരപ്പടവ് മുതല്‍ തിരുവനന്തപുരം ജില്ലയിലെ പാറശ്ശാലവരെ നീളുന്ന...

`மனைவி கணவரை தவிர்த்து வேறொருவர் மீது காதலும், நெருக்கமும் கொண்டிருப்பது தகாத உறவாகாது'- MP ஹைகோர்ட்

மத்தியப் பிரதேசத்தைச் சேர்ந்த ஒருவர் தன்னுடைய மனைவிக்கு வேறு ஒருவருடன் தொடர்பு...