14
February, 2025

A News 365Times Venture

14
Friday
February, 2025

A News 365Times Venture

ಮಡಿವಾಳ ಮಾಚಿದೇವರಂತೆ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಾಣಬೇಕು : ಬಿ.ಸಿ ಶಿವಾನಂದಮೂರ್ತಿ

Date:

ಮೈಸೂರು,ಫೆಬ್ರವರಿ,1,2025 (www.justkannada.in): ಮಡಿವಾಳ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಂಡವರುವರು ಮಡಿವಾಳ ಮಾಚಿದೇವ ಎಂದರೆ ತಪ್ಪಾಗುವುದಿಲ್ಲ. ತಮ್ಮ ಕೆಲಸವನ್ನು ಅವರು ವೃತ್ತಿ ಎಂದು ಪರಿಗಣಿಸದೆ ದೇವರ ಕೆಲಸ ಎಂದು ಜನರ ಸೇವೆ ಮಾಡುತ್ತಿದರು. ಅವರ ಆಲೋಚನೆಗಳನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ ಅವರು ಹೇಳಿದರು.

ಇಂದು ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲ್ಲಾಗಿದ್ದ ಮಡಿವಾಳ ಮಾಚಿದೇವ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ಅಂಟಿಕೊಂಡಿದ್ದ ಮೋಸ, ದರೋಡೆ, ವಂಚನೆಗಳಂತಹ ಅನಾಚಾರಗಳನ್ನು ಹೋಗಲಾಡಿಸಲು ದೃಢ ಸಂಕಲ್ಪ ತೊಟ್ಟಿ ನಿಂತ ದಾರ್ಶನಿಕ ವ್ಯಕ್ತಿ. ಸಮಾಜದ ಒಳಿತಿಗಾಗಿ ಶ್ರಮಿಸಿದ ಮಾಚಿದೇವ ಅವರ ಕೊಡುಗೆ ನಿಜಕ್ಕೂ ಅಪಾರವಾದದ್ದು ಎಂದರು.

ಉಪ ಪ್ರಾಂಶುಪಾಲರಾದ ಕೊತ್ತತ್ತಿ ರಾಜು ಅವರು ಮಡಿವಾಳ ಮಾಚಿದೇವ ಅವರ ಬಗ್ಗೆ ಉಪನ್ಯಾಸ ನೀಡಿ ಮಾತನಾಡಿದರು.

ಸಮಾಜದಲ್ಲಿ ಹೀನಾಯವಾಗಿ ಕಾಣುತ್ತಿದ ಮಡಿವಾಳ ವೃತ್ತಿಗೆ ಘನತೆ, ಗೌರವ ತಂದು ಕೊಟ್ಟವರು ಮಡಿವಾಳ ಮಾಚಿದೇವ ಅವರು ಎಂದರೆ ತಪ್ಪಾಗಲಾರದು, ಅವರು ಬಟ್ಟೆಯನ್ನು ಮಾತ್ರ ಮಡಿ ಮಾಡಿದವರಲ್ಲ  ಸಮಾಜದಲ್ಲಿದ್ದ ಅನಾಚಾರಗಳನ್ನು ತೊಳೆದು ಸಮಾಜವನ್ನು ಮಡಿ ಮಾಡಿದವರು ಎಂದರು.

12 ನೇ ಶತಮಾನದ ವಚನಕಾರರಲ್ಲಿ ಒಬ್ಬರಾದ ಇವರು ವೇದಾ ಪುರಾಣ, ಪರಾಂಗತ, ಸಾಹಿತ್ಯ, ಸಂಸ್ಕೃತಿ, ಬರವಣಿಗೆಗಳಲ್ಲಿ ಅನೇಕ ಕೊಡುಗೆ ನೀಡಿದ್ದಾರೆ. ನಿಜಕ್ಕೂ ಇವರ ಕೊಡುಗೆ ಅಪಾರವಾದದ್ದು ಇಂದಿನ ಯುವ ಪೀಳಿಗೆಗೆ ಇವರ ವಚನಗಳನ್ನು ಓದುವಂತೆ ನಾವೆಲ್ಲ ಒಟ್ಟುಗೂಡಿ ಅರಿವು ಮೂಡಿಸಬೇಕು ಎಂದು ಹೇಳಿದರು.

ಸಮುದಾಯದಲ್ಲಿ ಸಾಧನೆ ಗೈದಿರುವ ಹಾಗೂ ಸಮಾಜ ಸೇವೆ ಮಾಡಿರುವಂತಹ ಗಣ್ಯವ್ಯಕ್ತಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮಡಿವಾಳ ಸಂಘದ ಅಧ್ಯಕ್ಷ ಎಂಎನ್  ರವಿ, ನಗರ ಸಭಾ ಅಧ್ಯಕ್ಷ ನಾಗೇಶ್, ಮಾಜಿ ನಗರ ಸಭೆ ಸದಸ್ಯೆ ಪದ್ಮ ನವೀನ್, ವೃತ್ತಿ ಅರೋಗ್ಯ ನಿರೀಕ್ಷಕರಾದ ಗೋವಿಂದ ಮತ್ತು ಮಡಿವಾಳ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Key words: profession, Loyalty, Madiwala Machideva Jayanthi, B.C. Shivanandamurthy

The post ಮಡಿವಾಳ ಮಾಚಿದೇವರಂತೆ ವೃತ್ತಿಯಲ್ಲಿ ಕಾಯಕ ನಿಷ್ಠೆ ಕಾಣಬೇಕು : ಬಿ.ಸಿ ಶಿವಾನಂದಮೂರ್ತಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹೂಡಿಕೆದಾರರ ಸಮಾವೇಶ: ಉತ್ಸಾಹದಿಂದ ಓಡಾಡಿದ ಎಂ ಬಿ ಪಾಟೀಲ

ಬೆಂಗಳೂರು, Feb.12,2025: ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ದಿನವಿಡೀ ಬೃಹತ್...

മലയോര ഹൈവേ; 250 കി.മീ പണി പൂര്‍ത്തിയായി, ഒരു വര്‍ഷത്തിനകം 200 കി.മീ കൂടി; ആദ്യ റീച്ചിന്റെ ഉദ്ഘാടനം നാളെ

തിരുവനന്തപുരം: കാസര്‍ഗോഡ് ജില്ലയിലെ നന്ദാരപ്പടവ് മുതല്‍ തിരുവനന്തപുരം ജില്ലയിലെ പാറശ്ശാലവരെ നീളുന്ന...

`மனைவி கணவரை தவிர்த்து வேறொருவர் மீது காதலும், நெருக்கமும் கொண்டிருப்பது தகாத உறவாகாது'- MP ஹைகோர்ட்

மத்தியப் பிரதேசத்தைச் சேர்ந்த ஒருவர் தன்னுடைய மனைவிக்கு வேறு ஒருவருடன் தொடர்பு...

Lalu Prasad Yadav: “మా బావకు కిడ్నాపర్లలో సంబంధం”.. లాలూ బావమరిది సంచలన ఆరోపణ..

Lalu Prasad Yadav: లాలూ ప్రసాద్ యాదవ్‌పై ఆయన బావమరిది,...