19
February, 2025

A News 365Times Venture

19
Wednesday
February, 2025

A News 365Times Venture

ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ.ಪಾಟೀಲ

Date:

ನವದೆಹಲಿ, ಫೆ.04, 2025 (www.justkannada.in): ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರು ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ.

ಮೊದಲಿಗೆ ಸೋಮಣ್ಣ ಅವರ ನಿವಾಸಕ್ಕೆ ಭೇಟಿ ಮಾಡಿದ ಸಚಿವರು, ನಂತರ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಅಲ್ಲಿಂದ ಜೋಶಿ ಅವರ ಸಂಸತ್ತಿನ ಕಚೇರಿಗೆ ತೆರಳಿದ ಪಾಟೀಲರು, ಅವರ ಕಚೇರಿಯಲ್ಲಿ ಸಮಾವೇಶ ಕುರಿತು ರಾಜ್ಯದ ನಾಯಕರೊಂದಿಗೆ ಸಭೆ ನಡೆಸಿದರು.

ಬಳಿಕ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಕಂಡ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಮಿಸುವಂತೆ ಆಮಂತ್ರಣ ನೀಡಿದರು.

ಪಾಟೀಲ ಅವರು ಬುಧವಾರ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಕೇಂದ್ರ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ, ಸಮಾವೇಶಕ್ಕೆ ಆಹ್ವಾನಿಸಲಿದ್ದಾರೆ.

The post ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ.ಪಾಟೀಲ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മഹായുതിയില്‍ ഭിന്നത; ‘വൈ’ കാറ്റഗറി സുരക്ഷയില്‍ ഷിന്‍ഡെക്ക് അതൃപ്തിയെന്ന് റിപ്പോര്‍ട്ട്

മുംബൈ: 2024 നിയമസഭാ തെരഞ്ഞെടുപ്പിന് ശേഷം മഹാരാഷ്ട്രയിലെ ബി.ജെ.പി നേതൃത്വത്തിലുള്ള മഹായുതി...

"தமிழ்நாடு இன்னொரு மொழிப்போரைச் சந்திக்கவும் தயங்காது…" – உதயநிதி எச்சரிக்கை!

மத்திய கல்வித்துறை அமைச்சர் தர்மேந்திர பிரதான், 'தமிழ்நாடு அரசு புதிய கல்விக்...

Vijayawada Metro Project: స్పీడందుకున్న విజయవాడ మెట్రో రైల్ ప్రాజెక్ట్ పనులు..!

Vijayawada Metro Project: విజయవాడ మెట్రో రైలు ప్రాజెక్టుకు సంబంధించి పనులు...