16
August, 2026

A News 365Times Venture

16
Sunday
August, 2026

A News 365Times Venture

ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ

Date:

ನವದೆಹಲಿ,ಫೆಬ್ರವರಿ,8,2025 (www.justkannada.in): ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ತುಷ್ಟೀಕರಣ ರಾಜಕೀಯವನ್ನು ಸಂಪೂರ್ಣವಾಗಿ ತಿರಸ್ಕಾರ ಮಾಡಿರುವುದಕ್ಕೆ ಸ್ಪಷ್ಟ ಉದಾಹರಣೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಪ್ರತಿಕ್ರಿಯಿಸಿರುವ ಹೆಚ್.ಡಿಕುಮಾರಸ್ವಾಮಿ, ಬಹುದೊಡ್ಡ ಫಲಿತಾಂಶಕ್ಕೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅಭಿನಂದಿಸುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು, ಗೃಹ ಸಚಿವ ಅಮಿತ್ ಶಾ ಅವರು ಮತ್ತು ಕೇಂದ್ರ ಸಚಿವರು ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ ಪಕ್ಷವು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ. ನೂತನ ಶಾಸಕರಾಗಿ ಆಯ್ಕೆಯಾದ ನನ್ನ ಮಿತ್ರಪಕ್ಷದ ಎಲ್ಲಾ ನಾಯಕರಿಗೂ ಹೃದಯಪೂರ್ವಕ ಅಭಿನಂದನೆಗಳು ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿಗಳ ಮಹತ್ವಾಕಾಂಕ್ಷೆಯ ವಿಕಸಿತ ಭಾರತ, ಆತ್ಮನಿರ್ಭರ ಭಾರತ ಮತ್ತು ಅಭಿವೃದ್ದಿಪೂರಕ ಆಡಳಿತಕ್ಕೆ ಮನ್ನಣೆ ನೀಡಿ, ತುಷ್ಟೀಕರಣ ರಾಜಕೀಯವನ್ನು ಸ್ಪಷ್ಟವಾಗಿ ತಿರಸ್ಕರಿಸಿರುವುದಕ್ಕೆ ಈ ಫಲಿತಾಂಶ ಅತ್ಯುತ್ತಮ ಉದಾಹರಣೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಈ ಜನಾದೇಶವು ಬಲಿಷ್ಠ ನಾಯಕತ್ವ, ಆರ್ಥಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಿಕ್ಕಿರುವ ಅಭೂತಪೂರ್ವ ಬೆಂಬಲ ಎಂದು ನಾನು ಭಾವಿಸುತ್ತೇನೆ. ನಮ್ಮ ಮಿತ್ರಪಕ್ಷ ಬಿಜೆಪಿ ಗೆಲುವಿಗೆ ಶ್ರಮಿಸಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ನನ್ನ ಅಭಿನಂದನೆಗಳು ಎಂದು ಕೇಂದ್ರ ಸಚಿವ ಹೆಚ್ ಡಿಕೆ ತಿಳಿಸಿದ್ದಾರೆ.

Key words: Delhi Assembly, results, Union Minister, HDK

The post ದೆಹಲಿ ವಿಧಾನಸಭೆ ಫಲಿತಾಂಶ; ತುಷ್ಟೀಕರಣ ರಾಜಕೀಯದ ತಿರಸ್ಕಾರ – ಕೇಂದ್ರ ಸಚಿವ ಹೆಚ್.ಡಿ.ಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇസ്രഈല്‍ ആക്രമണം: തിരിച്ചടിക്കാന്‍ ലെബനന് അവകാശമുണ്ട്, പൂര്‍ണ പിന്തുണയുമായി ഇറാന്‍

ടെഹ്‌റാന്‍: തെക്കന്‍ ലെബനനിലെ നബാത്തിയ പ്രദേശത്ത് ഇസ്രഈല്‍ നടത്തിയ ശക്തമായ ആക്രമണത്തെ...

"தமிழ்நாடு முழுக்கவே வம்பு இழுத்து வைத்திருக்கிறேன்!"- சொல்கிறார் அமைச்சர் பிரபு

பாரம்பர்ய அரசியல் குடும்பத்திலிருந்து த.வெ.க-வுக்குள் அடியெடுத்துவைத்த டாக்டர் து.க.பிரபு, காரைக்குடி தொகுதியில்...

Guinness World Record: ముక్కు నేలకు తాకేలా హ్యాండ్‌స్టాండ్ పుష్‌అప్స్.. మహిళ గిన్నిస్‌ రికార్డు..

Guinness World Record: పుష్‌అప్స్‌ చేయడమే చాలా మందికి కష్టంగా ఉంటుంది.....

 പറയൂ, നിങ്ങൾ ഏത് സ്വാതന്ത്ര്യ സമരത്തിലാണ് പങ്കെടുത്തത്: ആർ.എസ്.എസിനോട് പ്രിയങ്ക് ഖാർഗെ

കലബുർഗി: സ്വാതന്ത്ര്യ സമരവുമായി ബന്ധപ്പെട്ട് ആർ.എസ്.എസ് ഉന്നയിക്കുന്ന അവകാശ വാദങ്ങളെ ചോദ്യം...