21
June, 2026

A News 365Times Venture

21
Sunday
June, 2026

A News 365Times Venture

ಮಕ್ಕಳನ್ನು ಮೊಬೈಲ್, ಟಿವಿಗೆ ಅಂಟಿಸುವ ಬದಲು ಪುಸ್ತಕ, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಿ-  ಕೆ.ವಿ.ಪ್ರಭಾಕರ್

Date:

ಬಾಗಲಕೋಟೆ ಫೆಬ್ರವರಿ,10,2025 (www.justkannada.in): ಮಕ್ಕಳನ್ನು ಮೊಬೈಲಿಗೆ, ಟಿವಿಗೆ ಅಂಟಿಸುವ ಬದಲಿಗೆ ಪುಸ್ತಕಗಳಿಗೆ, ಮಣ್ಣಿನಲ್ಲಿ ಆಡಲು, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಿದರೆ ಮಕ್ಕಳ ಸೃಜನಶೀಲತೆ, ಕ್ರಿಯಾಶೀಲತೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕರೆ ನೀಡಿದರು.

ಹೊಳೆ ಹುಚ್ಚೇಶ್ವರ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಶಾಲೆಗಳ ವಾರ್ಷಿಕ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅಂಗಡಿಯಲ್ಲಿ ಸಿಗುವ ಪ್ಲಾಸ್ಟಿಕ್ ಆಟದ ವಸ್ತುಗಳಿಗೆ ಮಕ್ಕಳು ಅಂಟಿಕೊಂಡರೆ ಮಕ್ಕಳಲ್ಲಿ ಸೃಜನಶೀಲತೆ ಸತ್ತು ಹೋಗುತ್ತದೆ. ಮಕ್ಕಳು ತಮ್ಮ ಆಟದ ವಸ್ತುವನ್ನು ತಾವೇ ಸೃಷ್ಟಿಸಿಕೊಳ್ಳುವುದರಿಂದ ಸೃಜನಶೀಲತೆ ಚಿಗುರುತ್ತದೆ ಎಂದರು.

ಸಮಾಜದಿಂದ ಬಂದಿದ್ದು ವಾಪಾಸ್ ಸಮಾಜಕ್ಕೆ ಹಂಚುವ ಕನಸು ಕಟ್ಟಿಕೊಂಡು ಹೊಳೆ ಹುಚ್ಚೇಶ್ವರ ಸಂಸ್ಥೆ ಕ್ರಿಯಾಶೀಲವಾಗಿ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಶ್ರಮಿಸುತ್ತಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಪಾರವಾಗಿ ಪ್ರೀತಿಸುವ, ಬೆಂಬಲಿಸುವ ಶರಣರ ಜಿಲ್ಲೆ ಬಾಗಲಕೋಟೆ ಅಂದರೆ ನನಗೆ ಅತೀವ ಪ್ರೀತಿ. ಈ ಜಿಲ್ಲೆಯ ಹೊಳೆ ಹುಚ್ಚೇಶ್ವರ ಸಂಸ್ಥೆ ಅನ್ನ-ಅಕ್ಷರ ದಾಸೋಹದಲ್ಲಿ  ಅಪಾರ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಈಗ ಶಿಕ್ಷಣದ ಸವಾಲು ಮತ್ತು ಸಾಧ್ಯತೆಗಳು ಅಪಾರ ಮಾರ್ಪಾಡು ಹೊಂದಿವೆ. ತಂತ್ರಜ್ಞಾನ ಮತ್ತು  ಕೃತಕ ಬುದ್ದಿಮತ್ತೆಯ ಬೆಳವಣಿಗೆ ಜ್ಞಾನದ ಹೊಳೆಯನ್ನೇ ಹರಿಸುತ್ತಿದೆ. ಇಂಥಾ ಸವಾಲಿನ ಹೊತ್ತಲ್ಲಿ ಮಕ್ಕಳಿಗೆ ಹೆಚ್ಚೆಚ್ಚು ಕ್ರಿಯಾಶೀಲ ಮತ್ತು ಮಾನವೀಯ ನೆಲೆಯ ಶಿಕ್ಷಣ ಒದಗಿಸಬೇಕಿದೆ. ಈ ದಿಕ್ಕಿನಲ್ಲಿ ಈ ಸಂಸ್ಥೆ ಶ್ರಮಿಸಲಿ ಎಂದು ಕರೆ ನೀಡಿದರು.

ಮಕ್ಕಳನ್ನು ಮೊಬೈಲಿಗೆ, ಟಿವಿಗೆ ಅಂಟಿಸುವ ಬದಲಿಗೆ ಪುಸ್ತಕಗಳಿಗೆ, ಆಟಕ್ಕೆ, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಬೇಕು. ಆಗ ಮಾತ್ರ ಮಕ್ಕಳಲ್ಲಿ ಹೆಚ್ಚೆಚ್ಚು ಕ್ರಿಯಾಶೀಲತೆ ಮತ್ತು ಸೃಜನಶೀಲತೆ ಬೆಳೆಯಲು ಸಾಧ್ಯ ಎಂದು ಕರೆ ನೀಡಿದರು.

ಶಾಸಕ ಹೆಚ್.ವೈ.ಮೇಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹೊಳೆಬಸಪ್ಪ ಶೆಟ್ಟರ್,  ಜಿಲ್ಲಾಧಿಕಾರಿ ಕೆ.ಎಂ.ಜಾನಕಿ, ಜಿಲ್ಲಾ ರಕ್ಷಣಾಧಿಕಾರಿ ಅಮರನಾಥ ರೆಡ್ಡಿ, ಸಿಇಒ ಡಾ.ಶಶಿಧರ್ ಕುರೇರ್, ತೆಂಗಿನ ನಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ನಟರಾಜ್ ಜಾನಕಿರಾಮ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Key words: children, books, playgrounds, K.V. Prabhakar

The post ಮಕ್ಕಳನ್ನು ಮೊಬೈಲ್, ಟಿವಿಗೆ ಅಂಟಿಸುವ ಬದಲು ಪುಸ್ತಕ, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಿ-  ಕೆ.ವಿ.ಪ್ರಭಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ മെഡിക്കല്‍ ടൂറിസത്തിന്റെ മറവില്‍ അന്താരാഷ്ട്ര അവയവക്കടത്ത്; രേഖകള്‍ പുറത്തുവിട്ട് ഇ.ഡി

കൊച്ചി: കേരളത്തില്‍ മെഡിക്കല്‍ ടൂറിസം കമ്പനിയുടെ മറവില്‍ വന്‍തോതില്‍ അവയവക്കടത്ത് നടത്തിവന്ന...

மாதப்படி வழக்கு: `மீண்டும் ஆஜராகுங்கள்'-பினராயி விஜயன் மகளுக்கு சம்மன் அனுப்பிய அமலாக்கத்துறை!

கேரள மாநிலம், கொச்சியைச் சேர்ந்த சி.எம்.ஆர்.எல் தனியார் நிறுவனம் மற்றும் சி.பி.எம்...

Vaibhav Sooryavanshi: వైభవ్ విధ్వంసకర ఇన్నింగ్స్.. బోర్డుపై భారత్ స్కోర్ 900 పరుగులు..

శ్రీలంకలో జరుగుతున్న వన్డే ట్రై సిరీస్ ఫైనల్ మ్యాచ్‌లో భారత్ ఏ...

ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯ ಕಾಮಗಾರಿಗಳ ಕೆಲಸ ಚುರುಕುಗೊಳಿಸಿ: ಡಿಸಿ ಲಕ್ಷ್ಮಿಕಾಂತ ರೆಡ್ಡಿ ಸೂಚನೆ

ಮೈಸೂರು, ಜೂನ್, 20,2026 (www.justkannada.in): ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳ  ಕಾಮಗಾರಿಗಳಿಗೆ...